ತುಮಕೂರು | ಧರ್ಮಸ್ಥಳ ಪ್ರಕರಣ ಸಮಗ್ರ ತನಿಖೆಗೆ ಜನಪರ ಚಳವಳಿಗಳ ಒಕ್ಕೂಟ ಒತ್ತಾಯ

Date:

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಎಲ್ಲಾ ಅತ್ಯಾಚಾರ, ಕೊಲೆ ಪ್ರಕರಣಗಳ ಸಮಗ್ರ ತನಿಖೆಯಾಗಬೇಕು, ಎಸ್.ಐ.ಟಿ. ತನಿಖೆಯಲ್ಲಿ ಸೌಜನ್ಯ,ಅನನ್ಯಭಟ್ ಹಾಗೂ ವೇದವಲ್ಲಿ ಪ್ರಕರಣಗಳನ್ನು ಸೇರಿಸಬೇಕೆಂದು ಆಗ್ರಹಿಸಿ ಸೋಮವಾರ ಜನಪರ ಚಳವಳಿಗಳ ಒಕ್ಕೂಟ,ತುಮಕೂರು ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಾತ್ಯಾತೀತ ಮಾನವ ವೇದಿಕೆಯ ವಿರೂಪಾಕ್ಷ ಡ್ಯಾಗೇರಹಳ್ಳಿ, ವಾಲ್ಮೀಕಿ ಸ್ವಾಭಿಮಾನ ಸಂಘದ ಚಳವಳಿ ರಾಜಣ್ಣ, ವಾಲ್ಮೀಕಿ ಕ್ರಾಂತಿ ಸೇನೆಯ ಕುಪ್ಪೂರು ಶ್ರೀಧರನಾಯ್ಕ್, ದಸಂಸದ ಜಿಲ್ಲಾ ಸಂಚಾಲಕ ಮುರುಳಿ ಕುಂದೂರು  ನೇತೃತ್ವದಲ್ಲಿ ಹಲವಾರು ಯುವಕರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ ಮನವಿಯನ್ನು ತುಮಕೂರು ಉಪವಿಭಾಗಾಧಿಕಾರಿ ನಾಹಿದ ಜಮ್ ಜಮ್ ಅವರಿಗೆ ಸಲ್ಲಿಸಿದರು.

 ವಾಲ್ಮೀಕಿ ಸ್ವಾಭಿಮಾನಿ ಸಂಘದ ಚಳವಳಿ ರಾಜಣ್ಣ ಮಾತನಾಡಿ ಕಳೆದ ನಲವತ್ತು ವರ್ಷಗಳಿಂದ ಹಿಂದೂಗಳ ಶ್ರದ್ದಾ,ಭಕ್ತಿಯ ಕೇಂದ್ರವಾದ ಧರ್ಮಸ್ಥಳದಲ್ಲಿ ನಡೆದಿರುವ ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣ, ಹಾಗೂ ತುಂಡು ಭೂಮಿಗಾಗಿ ಪ್ರಾಣ ಕಳೆದುಕೊಂಡ ಆನೆ ಮಾವುತ ಸೇರಿದಂತೆ ಎಲ್ಲರಿಗೂ ನ್ಯಾಯ ದೊರೆಯಬೇಕು. ಸರಕಾರ ಸಂಘ, ಸಂಸ್ಥೆಗಳು, ಹೋರಾಟಗಾರರ ಒತ್ತಡಕ್ಕೆ ಮಣಿದು ಎಸ್.ಐ.ಟಿ.ರಚಿಸಿದೆ.ಆದರೆ ಎಸ್.ಐಟಿ.ಯಿಂದ ಸೌಜನ್ಯ ಪ್ರಕರಣವನ್ನು ಹೊರಕ್ಕೆ ಇಟ್ಟಿರುವುದು ಸರಿಯಲ್ಲ.ಸೌಜನ್ಯ ಪ್ರಕರಣದಿಂದಲೇ ಧರ್ಮಸ್ಥಳದ ಹತ್ಯಾಕಾಂಡ ಬೆಳಕಿಗೆ ಬರಲು ಕಾರಣವಾಗಿದೆ. ಹಾಗಾಗಿ ಎಸ್.ಐ.ಟಿ ಇದುವರೆಗೂ ಧರ್ಮಸ್ಥಳದ ಅಜು, ಬಾಜು ಪ್ರದೇಶಗಳಲ್ಲಿ ನಡೆದಿರುವ ಎಲ್ಲಾ ಪ್ರಕರಣಗಳನ್ನು ಎಸ್.ಐ.ಟಿ. ತನಿಖೆಯ ವ್ಯಾಪ್ತಿಗೆ ತರಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತ್ಯಾತೀತ ಮಾನವ ವೇದಿಕೆಯ ವಿರೂಪಾಕ್ಷ ಡ್ಯಾಗೇರಹಳ್ಳಿ ಮಾತನಾಡಿ, ರೌಡಿಶೀಟರ್ ಒಬ್ಬನ ಕೊಲೆಯಾದಾಗ ಇಡೀ ರಾಜ್ಯದಾದ್ಯಂತ ಕೇಸರಿ ಬಾವುಟ ಹಿಡಿದು ಹೋರಾಟ ನಡೆಸಿದ್ದ ಹಿಂದುಪರ ಸಂಘಟನೆಗಳು, ಸೌಜನ್ಯ ಪ್ರಕರಣದಲ್ಲಿ ಮೌನಕ್ಕೆ ಶರಣಾಗಿರುವುದು ನಾಚಿಕೇಗೇಡಿನ ಸಂಗತಿ.ಸತ್ತವರ ಜಾತಿ, ಕೊಲೆ ಮಾಡಿದವರ ಧರ್ಮ ನೋಡಿ ಹೋರಾಟಕ್ಕೆ ಇಳಿಯುವ ನಿಮ್ಮಂತಹವರಿಂದಲೇ ನಿಜವಾದ ಹೋರಾಟಗಾರರಿಗೆ ಬೆಲೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ (ಸ್ವಾಭಿಮಾನಿ ಬಣ)ದ ಜಿಲ್ಲಾ ಸಂಚಾಲಕ ಕುಂದೂರು ಮುರುಳಿ ಮಾತನಾಡಿ,ಭೀಮ ಎಂಬ ವ್ಯಕ್ತಿ ಅತ್ಯಾಚಾರ ಮಾಡಿ, ಕೊಲೆಯಾದ ಹೆಣ್ಣು ಮಕ್ಕಳ ಎಷ್ಟೋ ಹೆಣಗಳನ್ನು ನಾನು ಹೂತು ಹಾಕಿದ್ದೇನೆ ಎಂದು ಪಶ್ಚಾತಾಪದಿಂದ ಹೇಳಿಕೆ ನೀಡಿದ್ದರೂ, ಸ್ಥಳ ಮಹಜರ್‌ಗೆ ಹಿಂದೇಟು ಹಾಕುವ ಪೊಲೀಸರಿಂದ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಎಸ್.ಐ.ಟಿ. ತನಿಖೆ ನ್ಯಾಯಯುತವಾಗಿ ನಡೆಯಬೇಕು. ಎಲ್ಲಾ ಕೊಲೆ, ಅತ್ಯಾಚಾರ ಪ್ರಕರಣಗಳನ್ನು ಎಸ್.ಐ.ಟಿ.ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ಕ್ರಾಂತಿ ಸೇನೆಯ ಕುಪ್ಪೂರು ಶ್ರೀಧರ ನಾಯಕ್,ದಸಂಸ ಮುಖಂಡರಾದ ಕೊಡಿಯಾಲ ಮಹದೇವ್, ಬಂಡೆಕುಮಾರ್, ಅಂಬೇಡ್ಕರ್ ದಂಡು ಜಿಲ್ಲಾಧ್ಯಕ್ಷ ಕುಮಾರ್, ಕಲಾವಿದ ಮನುಚಕ್ರವರ್ತಿ, ಹೋರಾಟಗಾರ ಅನೀಫ್ ಸೇರಿದಂತೆ ಹತ್ತಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...