ತುಮಕೂರು | ಮೆಕ್ಯಾನಿಕ್‌ಗಳ ನಿಂದನೆ; ರಮೇಶ್ ಅರವಿಂದ್, ಪ್ರೇಮಾ, ಅನುಶ್ರೀ ವಿರುದ್ಧ ದೂರು ದಾಖಲು

Date:

ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ನಿರೂಪಕಿ ಅನುಶ್ರೀ ಮತ್ತು ಗಗನ ಹೆಸರಿನ ಸ್ಪರ್ಧಿ ಹಾಗೂ ಜ಼ೀ-ವಾಹಿನಿಯ ‘ಮಹಾನಟಿ’ ರಿಯಾಲಿಟಿ ಶೋ ನಿರ್ಮಾಪಕ, ನಿರ್ದೇಶಕರ ವಿರುದ್ಧ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಟಿಡಬ್ಲೂಒಟಿಎ ಸಹಯೋಗದೊಂದಿಗೆ ಫ್ರೆಂಡ್ಸ್, ದ್ವೀ ಚಕ್ರವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಜ಼ೀ ವಾಹಿನಿಯ ಮಹಾನಟಿ ರಿಯಾಲಿಟಿ ಶೋ ಮತ್ತು ಅದರಲ್ಲಿ ಭಾಗವಹಿಸುವ ಪ್ರಮುಖ ನಟ-ನಟಿಯರ ವಿರುದ್ಧ ದೂರು ನೀಡಿದ್ದಾರೆ.

ಕಾರಣ, ಮೆಕ್ಯಾನಿಕ್ ಕೆಲಸ ಮಾಡುವ ಶ್ರಮಿಕ ಸಮುದಾಯವನ್ನು ತಮ್ಮ ಜ಼ೀ ಟಿವಿಯ ಮಹಾನಟಿ ರಿಯಾಲಿಟಿ ಶೋನಲ್ಲಿ ಕೀಳಾಗಿ ನಿಂದಿಸಿ, ಅವಮಾನಿಸಲಾಗಿದೆ ಎಂದು ದೂರುದಾರರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾನಟಿ ರಿಯಾಲಿಟಿ ಶೋ ನಡೆಸುತ್ತಿದ್ದ ಒಂದು ಎಪಿಸೋಡಲ್ಲಿ ಗಗನ ಎಂಬ ಹೆಸರಿನ ಹದಿಹರೆಯದ ವಯಸ್ಸಿನ ಸ್ಪರ್ಧಿಯೊಬ್ಬಾಕೆ, ತನ್ನ ನಟನಾ ಕೌಶಲವನ್ನು ಪ್ರದರ್ಶಿಸುವಾಗ, ಮೆಕ್ಯಾನಿಕ್ ಒಬ್ಬನನ್ನು ಪ್ರೀತಿಸುತ್ತಿರುವ ತನ್ನ ಗೆಳತಿಯನ್ನು ಕನ್ವಿನ್ಸ್ ಮಾಡುವಂಥ ಸನ್ನಿವೇಶವನ್ನು ವೇದಿಕೆಯಲ್ಲಿ ನಿರ್ವಹಿಸುತ್ತಾಳೆ. ಆಗ ಆಕೆಯ ಸಂಭಾಷಣೆಯಲ್ಲಿ ಮೆಕ್ಯಾನಿಕ್ ಒಬ್ಬನ ಪ್ರೀತಿಗೆ ಬಿದ್ದರೆ ಅದು ಕೊಚ್ಚೆಯಲ್ಲಿ ಬಿದ್ದಂತೆ. ಹರೆಯದ ವಯಸ್ಸಿನ ಹುಂಬ ಆಕಾಂಕ್ಷೆಯಲ್ಲಿ ಆತನನ್ನೇ ವರಿಸಿದರೆ ದೊಡ್ಡಮಟ್ಟದ ದುಡ್ಡು, ಶ್ರೀಮಂತಿಕೆ ಇಲ್ಲದೆ ಗ್ರೀಸ್ ತಿಂದುಕೊಂಡು ಬದುಕಲಾಗದು… ಎಂಬಂಥ ಒಣ ಮಾತುಗಳು ಬರುತ್ತವೆ. ಈ ಮಾತುಗಳು ನಾಡಿನ ವೃತ್ತಿಪರ ಮೆಕ್ಯಾನಿಕ್ ಸಮುದಾಯವನ್ನು ಕೆರಳಿಸಿವೆ ಎಂದರು.

ಒಂದಿಡೀ ಶ್ರಮಿಕ ವರ್ಗದ ದುಡಿಮೆಯ ಬಗ್ಗೆ, ವೃತ್ತಿಯ ಬಗ್ಗೆ ಹೀಗೆ ತಿರಸ್ಕಾರದ, ಕುಹಕದ ಮಾತಾಡಿರುವ ಆ ನಟಿಮಣಿ ಹಾಗೂ ಆಕೆಯ ಮಾತುಗಳಿಗೆ ಉತ್ತೇಜನ ನೀಡುವಂತೆ ಉತ್ಪ್ರೇಕ್ಷೆಯಿಂದ ವರ್ತಿಸುವ ರಮೇಶ್ ಅರವಿಂದ್, ನಟಿ ಪ್ರೇಮಾ, ನಿರೂಪಕಿ ಅನುಶ್ರೀ, ನಿರ್ಮಾಪಕ ರಾಘವೇಂದ್ರ ಹುಣಸೂರು, ನಿರ್ದೇಶಕ ಮತ್ತು ಜ಼ೀ-ಟಿವಿ ವಾಹಿನಿಯ ಮೇಲೆ ರಾಜ್ಯದ ಮೆಕ್ಯಾನಿಕ್ ಸಂಘದವರು ಎಲ್ಲ ಊರುಗಳಲ್ಲೂ ದೂರು ದಾಖಲಿಸಿ, ಜವಾಬ್ದಾರಿಯುತ ಸ್ಥಾನದಲ್ಲಿ ಕೂತಿರುವ ಇಂಥ ಜನಪ್ರಿಯ ಅವಿವೇಕಿಗಳ ಮೇಲೆ ಸಮುದಾಯಗಳ ನಡುವೆ ದ್ವೇಷ ಬಿತ್ತುವ, ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡುವ ಮತ್ತು ಶ್ರಮಿಕ ವರ್ಗದ ಜನರನ್ನು ಕೊಚ್ಚೆ ಎಂದು ಅವಮಾನಿಸಿ ಅವರ ಆತ್ಮಗೌರವಕ್ಕೆ ಚ್ಯುತಿ ತಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಕಠಿಣಕ್ರಮ ಕೈಗೊಳ್ಳಬೇಕೆಂದು ಕೋರಿ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿಗೆ ದೂರು ದಾಖಲಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ, ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ದಿ ಸಂಘದ, ನಿಸಾರ್ ಅಹಮದ್, ಚಂದ್ರು, ದಸ್ತಗೀರ್, ಯೋಗೀಶ್, ಮೋಮಿನ್, ಚೆನ್ನಾಚಾರ್, ಚಾಂದು, ಅಬ್ಬು, ಛೋಟು ಮತ್ತಿತರರು ಉಪಸ್ಥಿತರಿದ್ದರು. ಜೊತೆಗೆ ದಸಂಸ ತಾಲೂಕು ಸಂಚಾಲಕ ಸಿ.ಎಸ್. ಲಿಂಗದೇವರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...