ತುಮಕೂರು | ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ; ಜಿಲ್ಲೆಯಲ್ಲಿಯೂ ಪ್ರಾರಂಭ : ಜಿಲ್ಲಾಧಿಕಾರಿ

Date:

 ಭಾರತದ ಚುನಾವಣಾ ಆಯೋಗ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು.

     ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆ ಕುರಿತು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗವು ದೇಶದಾದ್ಯಂತ ಮತದಾರರ ಪಟ್ಟಿಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಈ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ತುಮಕೂರು ಜಿಲ್ಲೆಯಲ್ಲೂ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಯಶಸ್ವಿಯಾಗಲು ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವೆಂದು ತಿಳಿಸಿದರಲ್ಲದೆ, ರಾಜಕೀಯ ಪಕ್ಷಗಳು ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಏಜೆಂಟ್‌ಗಳನ್ನು ನೇಮಕ ಮಾಡುವ ಮೂಲಕ ಈ ಪರಿಷ್ಕರಣಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ವಿಶೇಷ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಅರ್ಹ ಮತದಾರರ ಹೆಸರನ್ನು ತಪ್ಪದೇ ಮತದಾರರ ಪಟ್ಟಿಗೆ ಸೇರಿಸುವುದು ಹಾಗೂ ಅನರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವುದು ಈ ಪರಿಷ್ಕರಣಾ ಕಾರ್ಯದ ಉದ್ದೇಶವಾಗಿದೆ ಎಂದು ತಿಳಿಸಿದರು.

 ಜಿಲ್ಲೆಯಲ್ಲಿರುವ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಮತಗಟ್ಟೆ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ತೆರಳಿ ನಿಗದಿತ ಅರ್ಜಿ ನಮೂನೆಯನ್ನು ವಿತರಿಸಬೇಕು. ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಹಿಂದಿರುಗಿಸುವ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು. 

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ನಂತರ ಕರಡು ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುವುದು. ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ತಿದ್ದುಪಡಿಗಳಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ಸರಿಪಡಿಸಿಕೊಳ್ಳಲು ಅವಕಾಶವಿರುತ್ತದೆ. ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿದ ನಂತರವೇ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

 ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸೆಪ್ಟೆಂಬರ್ 30ರಿಂದ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯ ಪ್ರಾರಂಭವಾಗಲಿದ್ದು, ಅರ್ಹ ಪದವೀಧರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ವಾಸಿಸುವ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯಬೇಕು. ಮತದಾರರ ಪಟ್ಟಿಯಿಂದ ಯಾರೂ ವಂಚಿತರಾಗಬಾರದು ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಸೇರಬಾರದು. ಇದರಿಂದ ಮುಂಬರುವ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸಲು ಸಾಧ್ಯ ಎಂದು ತಿಳಿಸಿದರು.

ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಅನಿತಾಲಕ್ಷ್ಮೀ, ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...