ತುಮಕೂರು | ಅಲೆಮಾರಿಗಳನ್ನು ಬೀದಿ ಪಾಲು ಮಾಡಿದ ಕಾಂಗ್ರೆಸ್ ಸರ್ಕಾರ : ಎ. ನರಸಿಂಹಮೂರ್ತಿ

Date:

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಶೇ. 1ರಷ್ಪು ಮೀಸಲಾತಿ ಎಂಬ ಅನ್ನವನ್ನು ಕಿತ್ತುಕೊಂಡ ಸರ್ಕಾರ ಅದನ್ನು ಲಂಬಾಣಿ ಭೋವಿ ಕೊರಮ ಕೊರಚ ಗುಂಪಿಗೆ ಕೊಟ್ಟಿದೆ. ಯಾರದೋ ಅಸಹಾಯಕರ ಅನ್ನವನ್ನು ಕಸಿದು ಇನ್ಯಾರೋ ಹೊಟ್ಟೆ ತುಂಬಿದವರಿಗೆ ನೀಡುವ ಮನುಧರ್ಮವನ್ನು ಸರ್ಕಾರ ಪ್ರದರ್ಶಿಸಿದೆ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ  ಆರೋಪಿಸಿದರು.

 ಅಲೆಮಾರಿಗಳು ಹೋರಾಟ ಬೆಂಬಲಿಸಿ ಬೆಂಗಳೂರು ಚಲೋಗೆ ಶುಕ್ರವಾರ ತುಮಕೂರು ಇಸ್ಮಾಯಿಲ್ ನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಆವರು   ಒಳಮೀಸಲಾತಿ ಯನ್ನು ಜಾರಿ ಮಾಡಲು ಸುಪ್ರೀಂ ಕೋರ್ಟ್ ನೀಡದ ತೀರ್ಪುನ್ನು ಆಧಾರಿಸಿ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ತಾಯಿ ಕರುಳನ್ನೇ ಕಿತ್ತು ಮಾಲೆ ಹಾಕಿಕೊಂಡಿರುವ ಮುಖ್ಯ ಮಂತ್ರಿ ಸಿದ್ಮರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವಮಹದೇವಪ್ಪ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಈ ಅಸಮಾನತೆಯ ಗುಣ ಈ ನಾಡಿನ ಅಲೆಮಾರಿಗಳಿಗೆ ಬಗೆದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು

ಇದನ್ನು ಸಾಮಾಜಿಕ ನ್ಯಾಯದ ಸರ್ಕಾರ ಎನ್ನಬಹುದೇ ? ಸಮ ಪಾಲು ಸಮ ಬಾಳು, ಅಂದರೆ ಇದೇನೇ?, ತಮ್ಮದೇ ಸರ್ಕಾರದ ಇಂತಹ ಅನ್ಯಾಯದ ಕ್ರಮವನ್ನು ನೋಡಿಕೊಂಡು ಕೂತಿರಲು ಸಾಧ್ಯವೇ ಇಂತಹ ಅನ್ಯಾಯ ಸಂಬಂಧಿಸಿದ್ದಲ್ಲವೇ ? ಮನುಷ್ಯತ್ವಕ್ಕೆ ಸಂಬಂಧಿಸಿದ್ದಲ್ಲವೇ ನಮ್ಮಗೆ ಮನುಷ್ಯತ್ವ ಇಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದಾಕಾಲ ಅಂಬೇಡ್ಕರ್ ಬುದ್ಧ ಬಸವಣ್ಣನವರ ಸಿದ್ದಾಂತ ಬೋಧೆ ಮಾಡುವ ರಾಜ್ಯ ಸರ್ಕಾರ ಈ ಅನ್ಯಾಯದ ದ್ರೋಹದ ಟಿಪ್ಪಣಿ ರೂಪಿಸಿ ಕ್ಯಾಬಿನೆಟ್ ಅನುಮೋದನೆ ಪಡೆದು ವಿಧಾನ ಸಭೆಯಲ್ಲಿ ಒಪ್ಪಿಗೆ ಪಡೆದಿರುವುದು ಅಸಂವಿಧಾನಿಕ ನಡೆಯಾಗಿದೆ ಎಂದರು.

ಸರ್ಕಾರಕ್ಕೆ ಬುದ್ಧಿ ಕಲಿಸಿ ಅಲೆಮಾರಿಗಳಿಗೆ ಅವರ ಪಾಲಿನ ನ್ಯಾಯ ಧಕ್ಕಿಸಬೇಕು.ಕರ್ನಾಟಕದಲ್ಲಿ ಅಂಬೇಡ್ಕರ್ ಸಿದ್ದಾಂತ ನೇಣಿಗೆರಿಸಿದ ಕೀರ್ತಿ ಈ ಸರ್ಕಾರಕ್ಕೆ ಸಲ್ಲುತ್ತದೆ. ಬುದ್ಧನ ಕರುಣೆಯನ್ನು ಸಮಾಧಿ ಮಾಡಿದವರು ನಾವಾಗುವುದು ಬೇಡ. ಬುದ್ಧ ಬಸವ, ಅಂಬೇಡ್ಕರ್ ಮಾರ್ಗದಲ್ಲಿ ಹೋರಾಟ ಯಶಸ್ವಿ ಗೊಳ್ಳಿಸಬೇಕು. ಅಲೆಮಾರಿಗಳನ್ನು ಭೋವಿ ಲಂಬಾಣಿಗಳಿಂದ ಪ್ರತ್ಯೇಕಿಸಿ ಅವರ ಪಾಲು ಕೊಡಿಸಬೇಕು. ಅಲೆಮಾರಿಗಳ ಮಕ್ಕಳ ಶಿಕ್ಷಣ ಉದ್ಯೋಗ ದೊರಕಿಸಬೇಕು. ಇಲ್ಲದಿದ್ದರೆ ಸರ್ಕಾರವೇ ಅಲೆಮಾರಿಗಳಿಗೆ ವಿಷ ಕೊಡುವ ಸಂದರ್ಭ ಬರಬಹುದು ಎಂದರು.

ಇದೇ ಸಂದರ್ಭದಲ್ಲಿ ಗುಬ್ಬಿ ಹಂದಿ ಜೋಗಿ ಮುಖಂಡ ಮಾರಣ್ಣ, ತುಮಕೂರು ಅಲೆಮಾರಿ ಸಂಘದ ವೆಂಕಟೇಶ್,  ತುಮಕೂರು ಸ್ಲಂ ಸಮಿತಿಯ ಕಣ್ಣನ್ ಅನುಪಮಾ,  ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...