ತುಮಕೂರು | ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಸಚಿವ ಪರಮೇಶ್ವರ್

Date:

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್ ಸಿಟಿಯಿಂದ ಸುಮಾರು ₹8.78 ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿವೆ. ಈ ಅವಧಿಯಲ್ಲಿ ನಮ್ಮ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಯ ಭರವಸೆಯನ್ನೂ ಈಡೇರಿಸಿದೆ. ಈ ಗ್ಯಾರಂಟಿ ಯೋಜನೆಗಳಿಗಾಗಿ ₹36 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮ ಕೈ ಹಿಡಿಯುತ್ತಾರೆಂಬ ವಿಶ್ವಾಸ ನಮ್ಮಲ್ಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಪಕ್ಷದಲ್ಲಿ ಇನ್ನು 21 ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ಸಂಬಂಧ ಈಗಾಗಲೇ ಅಂತಿಮ ಸುತ್ತಿನ ಚರ್ಚೆ ನಡೆದು ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಕೂಡ ಮಾಡಲಾಗಿದೆ. ಕೇಂದ್ರ ಚುನಾವಣಾ ಕಮಿಟಿ ಮುಂದೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿಗಳು ಅಭ್ಯರ್ಥಿಗಳ ಹೆಸರುಗಳನ್ನು ಮಂಡಿಸುತ್ತಾರೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ಪಟ್ಟಿ ಘೋಷಣೆಯಾಗಲಿದೆ” ಎಂದರು.

ರಾಜ್ಯಕ್ಕೆ ರಾಹುಲ್‌ಗಾಂಧಿ ಭೇಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, “ರಾಹುಲ್‌ಗಾಂಧಿಯವರ ಷೆಡ್ಯುಲ್ ಪಟ್ಟಿ ಬಿಡುಗಡೆಯಾಗಿಲ್ಲ. ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ಅವರ ಷೆಡ್ಯುಲ್ ಕೂಡ ಇನ್ನೂ ಬಿಡುಗಡೆಯಾಗಿಲ್ಲ. ಅವರ ಪ್ರಚಾರದ ವೇಳಾಪಟ್ಟಿ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷರು ಅದನ್ನು ಪ್ರಕಟಿಸುತ್ತಾರೆ” ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, “ನಮ್ಮಲ್ಲಿ ಸದ್ಯಕ್ಕೆ ಆ ವಿಚಾರದ ಬಗ್ಗೆ ಪ್ರಸ್ತಾಪ ಇಲ್ಲ. ನಮ್ಮ ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳೂ ಸೇರಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡುತ್ತವೆ” ಎಂದರು.

“ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲಿನ ಪೋಕ್ಸೊ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ. ಸುಖಾ ಸುಮ್ಮನೆ ಗೊಂದಲ ಆಗಬಾರದೆಂಬ ಉದ್ದೇಶದಿಂದ ಈ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದೇವೆ. ಈಗಾಗಲೇ ಯಡಿಯೂರಪ್ಪನವರೂ ಕೂಡ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾರೆ. ದೂರು ಕೊಟ್ಟಿರುವ ಮಹಿಳೆ ಸುಮಾರು 50 ಪೋಕ್ಸೊ ಪ್ರಕರಣ ದಾಖಲು ಮಾಡಿದ್ದಾರೆಂಬ ಮಾಹಿತಿ ಇದೆ” ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಂಗ್ರೆಸ್‌ ಮುಖಂಡನ ಮೇಲೆ ಗುಬ್ಬಿ ಶಾಸಕ ಶ್ರೀನಿವಾಸ್ ಹಲ್ಲೆ; ಪ್ರಕರಣ ದಾಖಲು

ತುಮಕೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಶ್ರೀನಿವಾಸ್ ಹಲ್ಲೆ ನಡೆಸಿರುವ ವಿಚಾರದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ಏನೋ ಗುತ್ತಿಗೆ ವಿಚಾರದಲ್ಲಿ ಇವರಿಬ್ಬರ ನಡುವೆ ಗಲಾಟೆಯಾಗಿದೆಯೆಂದು ನನಗೆ ಮಾಹಿತಿ ಬಂದಿದೆ. ಈಗ ಅವರವರೇ ಸರಿ ಹೋಗಿದ್ದಾರೆ. ಏನೂ ಸಮಸ್ಯೆ ಇಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...