ತುಮಕೂರು | ಫೆ.8ಕ್ಕೆ ಗುಬ್ಬಿ ತಾಲೂಕಿಗೆ ಸಂವಿಧಾನ ಜಾಗೃತಿ ಜಾಥಾ

Date:

ಸಂವಿಧಾನ ಕುರಿತು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಜೊತೆಗೆ ಸರ್ವರಿಗೂ ಸಂವಿಧಾನ ಪೀಠಿಕೆ ತಿಳಿಸುವ ʼಸಂವಿಧಾನ ಜಾಗೃತಿ ಜಾಥಾʼ ಇದೇ ತಿಂಗಳ (ಫೆ.) 8ರಂದು ಗುಬ್ಬಿ ತಾಲೂಕಿಗೆ ಬರಲಿದೆ. ಈ ಬಗ್ಗೆ ವಿವಿಧ ಸಂಘಟನೆಯ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು.

ಗುಬ್ಬಿ ಪಟ್ಟಣದಲ್ಲಿ ಭವ್ಯ ಸ್ವಾಗತ ಪಡೆಯಲಿರುವ ಈ ಜಾಥ ತಾಲೂಕಿನ 34 ಗ್ರಾಮ ಪಂಚಾಯಿತಿಗೆ ಪ್ರವಾಸ ಮಾಡಲಿದೆ. ಎಲ್ಲಡೆ ಕಾರ್ಯಕ್ರಮ ಆಯೋಜನೆ ಕುರಿತು ಮುಖಂಡರು, ಜನಪ್ರತಿನಿಧಿಗಳು ಹಾಗೂ ದಲಿತ ಸಂಘಟನೆಗಳ ಅಭಿಪ್ರಾಯ ಸಂಗ್ರಹಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿತ್ತು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐದು ದಿನದ ಪ್ರವಾಸದ ಸಂಪೂರ್ಣ ಯಶಸ್ವಿಗೆ ಎಲ್ಲಾ ಸ್ಥಳೀಯ ಮುಖಂಡರು ಹಾಗೂ ಸಂಘಟನೆಗಳ ಸಹಕಾರ ಬಗ್ಗೆ ತಹಸೀಲ್ದಾರ್ ಬಿ.ಆರತಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಎಲ್ಲರ ಸಲಹೆ ಸೂಚನೆ ಸಂಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ತಿಂಗಳ 8ರಂದು ಕುಣಿಗಲ್ ತಾಲೂಕಿನ ಮೂಲಕ ಗುಬ್ಬಿ ಪಟ್ಟಣಕ್ಕೆ ಆಗಮಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ ಭವ್ಯ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಲಾಗಿದೆ. ಎಲ್ಲಾ ಮುಖಂಡರು ಈ ಕಾರ್ಯಕ್ರಮವನ್ನು ಸೇರಿ ನಡೆಸಲು ನಿರ್ಧರಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಜಾಥಾಕ್ಕೆ ಚಾಲನೆ ನೀಡಲಿದ್ದು ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ ಎಂದು ತಾ.ಪಂ ಇಒ ಪರಮೇಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಫೆ.8 ರಂದು ಗುಬ್ಬಿ ಪಟ್ಟಣದಲ್ಲಿ ಸ್ವಾಗತ ಕಾರ್ಯಕ್ರಮ ನಂತರದಲ್ಲಿ ಜಿ.ಹೊಸಹಳ್ಳಿ, ಕುನ್ನಾಲ, ಎಸ್.ಕೊಡಗೀಹಳ್ಳಿ, ಚಂಗಾವಿ, ಮಾವಿನಹಳ್ಳಿ ಹಾಗೂ ಇಡಗೂರು ತಲುಪಲಿದೆ. ಫೆ.9 ರಂದು ಸಿ.ಎಸ್.ಪುರ, ಹಿಂಡಿಸ್ಕೆರೆ, ಕಲ್ಲೂರು, ಪೆದ್ದನಹಳ್ಳಿ, ಕಡಬ, ಬ್ಯಾಡಿಗೆರೆ, ಕೊಪ್ಪ ಹಾಗೂ ಅಡಗೂರು ಗ್ರಾಪಂ ತಲುಪಲಿದೆ. ಫೆ.10ರಂದು ಎಂ.ಎಚ್.ಪಟ್ಟಣ, ಇರಕಸಂದ್ರ, ಬಿದರೆ, ಅಮ್ಮನಘಟ್ಟ, ಹೇರೂರು, ಬೆಲವತ್ತ ಹಾಗೂ ನಿಟ್ಟೂರು ಮುಟ್ಟಲಿದೆ ಎಂದು ತಿಳಿಸಿದರು.

ಫೆ.11ರಂದು ಮಾರಶೆಟ್ಟಿಹಳ್ಳಿ, ದೊಡ್ಡಗುಣಿ, ಕೊಂಡ್ಲಿ, ತ್ಯಾಗಟೂರು, ಎಂ.ಎನ್.ಕೋಟೆ, ಅಳಿಲುಘಟ್ಟ, ಹೊಸಕೆರೆ ಹಾಗೂ ಶಿವಪುರ ಜಾಥಾ ಉಳಿಯಲಿದೆ.

ಕೊನೇ ದಿನ  ಫೆ.12ರಂದು ಹಾಗಲವಾಡಿ, ಮಂಚಲದೊರೆ, ಅಂಕಸಂದ್ರ, ನಲ್ಲೂರು ಚೇಳೂರು ಗ್ರಾಪಂನಲ್ಲಿ ಜಾಥಾ ಸಮರೊಳಗೊಳ್ಳಲಿದೆ ನಂತರ ತುರುವೇಕೆರೆ ತಾಲ್ಲೂಕಿನತ್ತ ಜಾಥಾ ಹೊರಡಲಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ ಹಾಗೂ ಎಲ್ಲಾ ದಲಿತ ಮುಖಂಡರು ಹಾಜರಿದ್ಧರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...