ತುಮಕೂರು | ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕುಕ್ಕರ್ ಬ್ಲಾಸ್ಟ್; ಅಂಗನವಾಡಿ ಮಕ್ಕಳು ಅಪಾಯದಿಂದ ಪಾರು

Date:

ಮಧ್ಯಾಹ್ನ ಬಿಸಿಯೂಟಕ್ಕೆ ಅಡುಗೆ ಸಿದ್ದ ಮಾಡುವ ಸಮಯದಲ್ಲಿ ಕುಕ್ಕರ್ ಬ್ಲಾಸ್ಟ್ ಆದ ಘಟನೆ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ನಡೆದಿದೆ.

ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿ ಸಿ.ಯಡವನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಅಂಗನವಾಡಿಯಲ್ಲಿದ್ದ ಮಕ್ಕಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಬೇಳೆ ತರಕಾರಿ ಇದ್ದ ಕುಕ್ಕರ್ ಗ್ಯಾಸ್ಗೆಟ್ ರಬ್ಬರ್ ಸರಿ ಇಲ್ಲದ ಕಾರಣ ಸ್ಟೌವ್ ಮೇಲೆಯೇ ಬ್ಲಾಸ್ಟ್ ಆಗಿ ಪಟಾಕಿ ಶಬ್ದದ ರೀತಿಯಲ್ಲಿ ಸ್ಫೋಟದ ಶಬ್ದ ಕೇಳಿ ಬಂದಿದೆ. ಆದರೆ ಕುಕ್ಕರ್ ಮುಚ್ಚಳ ಓಪನ್ ಆಗಿದ್ದರಿಂದ ಕುಕ್ಕರ್ ಅಲ್ಲಿದ್ದ ಬೇಳೆ ಅಡುಗೆ ಮನೆಯಲ್ಲಿ ಹರಡಿತ್ತು. ಆ ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾವ ನೋವು ಸಂಭವಿಸಿಲ್ಲ. ಯಾವ ಹಾನಿಯೂ ಕೂಡಾ ನಡೆದಿಲ್ಲ. ಅಲ್ಲಿದ್ದ 11 ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಉಪ ತಹಶೀಲ್ದಾರ್ ಮುತ್ತುರಾಜ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಧಾವಿಸಿದ ಸಿಡಿಪಿಓ ಮಹೇಶ್, ಎಸಿಡಿಪಿಓ ಕೃಷ್ಣಮೂರ್ತಿ, ಮೇಲ್ವಿಚಾರಕಿ ಸ್ವರ್ಣ ಹಾಗೂ ಕಂದಾಯ ನಿರೀಕ್ಷಕ ರಂಗಸ್ವಾಮಿ, ಗ್ರಾಮ ಲೆಕ್ಕಿಗರಾದ ಸುಮಾ ಇತರರು ಸ್ಥಳ ಪರಿಶೀಲಿಸಿದರು.

cooker

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...