ತುಮಕೂರು | ಕೋವಿಡ್ ಪಾಸಿಟೀವ್ : ಜಿಲ್ಲೆಯಲ್ಲಿ 1 ಸಾವಿನ ಪ್ರಕರಣ ವರದಿ

Date:

 ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

 ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಕೋವಿಡ್ ಸಂಬಂಧ ತುರ್ತು ಪತ್ರಿಕಾ ಹೇಳಿಕೆ ನೀಡಿದ ಅವರು ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೂನ್ 2ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಐಎಲ್‌ಐ ಹಾಗೂ ಸಾರಿ ಪ್ರಕರಣಗಳಿಂದ 36 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಗುಬ್ಬಿ ತಾಲೂಕಿನ 13 ಹಾಗೂ ಶಿರಾ ತಾಲೂಕಿನ 1 ಸೇರಿದಂತೆ ಒಟ್ಟು 14 ಪ್ರಕರಣಗಳಲ್ಲಿ ಕೋವಿಡ್ ಪಾಸಿಟೀವ್ ದೃಢಪಟ್ಟ ಬಗ್ಗೆ ಮಂಗಳವಾರ ಬೆಳಿಗ್ಗೆ ವರದಿ ಬಂದಿದೆ. ಕೋವಿಡ್ ಪಾಸಿಟಿವ್ ಕಂಡು ಬಂದವರ  ಪ್ರೆಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್ನಲ್ಲಿದ್ದವರನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಗ್ಯ ಸಚಿವಾಲಯದ ಕೋವಿಡ್ ಮಾರ್ಗಸೂಚಿಗಳನ್ವಯ ಐಎಲ್‌ಐ  ಪ್ರಕರಣಗಳನ್ನು ಪರೀಕ್ಷೆಗೊಳಪಡಿಸಲು ನಿರ್ದೇಶನ ನೀಡಿದ್ದು, ಅದರನುಸಾರ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲು ಹಾಗೂ ಕೋವಿಡ್ ದೃಢಪಟ್ಟವರಿಗೆ ಚಿಕಿತ್ಸೆ ನೀಡಲು ಅಗತ್ಯ ಔಷಧಿ, ತಪಾಸಣಾ ಕಿಟ್‌ಗಳನ್ನು ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡ್ ಪಾಸಿಟೀವ್ ದೃಢಪಟ್ಟ ರೋಗಿಗಳ ಗುಣಲಕ್ಷಣಕ್ಕೆ ತಕ್ಕಂತೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಗಂಭೀರ ಪರಿಸ್ಥಿತಿ ಇರುವುದಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಹೆಚ್ಚಿನ ಜನಸಂದಣಿ ಇರುವೆಡೆ ಸೇರಬಾರದು. ಗರ್ಭಿಣಿ ಮಹಿಳೆಯರು ಹಾಗೂ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಂಬಂಧ ರೋಗಿಗಳು, ವಯೋವೃದ್ಧರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ, ತಲೆನೋವು, ಎದೆನೋವು ಅಥವಾ ಉಸಿರಾಟದ ತೊಂದರೆ ರೋಗಲಕ್ಷಣಗಳಿದ್ದಲ್ಲಿ ತಕ್ಷಣ ವೈದ್ಯಕೀಯ ಸಲಹೆ ಪಡೆಯಬೇಕು. ಎಂದು ಮನವಿ ಮಾಡಿದರು. 

  ಕೋವಿಡ್ ಹರಡದಂತೆ ನಿಯಂತ್ರಿಸಲು ಜಿಲ್ಲಾ ಹಂತದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ ದೃಢಪಟ್ಟವರಿಗೆ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ 2000 ಹಾಸಿಗೆ, 200 ಐಸಿಯು ಹಾಸಿಗೆ, ಸುಸ್ಥಿತಿಯಲ್ಲಿರುವ 55 ವೆಂಟೆಲೇರ‍್ಸ್, 257 ಆಕ್ಸಿಜನ್ ಕಾನ್ಸಂಟ್ರೇಟರ್, 14 ಆಕ್ಸಿಜನ್ ಪ್ರೊಡ್ಯೂಸಿಂಗ್ ಪ್ಲಾಂಟ್‌ಗಳಿವೆಯಲ್ಲದೆ ವೈದ್ಯಕೀಯ ಕಾಲೇಜು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 2000 ಹಾಸಿಗೆ ಹಾಗೂ 200 ಐಸಿಯು ಹಾಸಿಗೆಗಳು ಲಭ್ಯವಿದೆ ಎಂದು ತಿಳಿಸಿದರು.

ಕೋವಿಡ್ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರತೀ ದಿನ 400 ಆರ್‌ಟಿಪಿಸಿಆರ್ ಟೆಸ್ಟ್ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಅಗತ್ಯ ಎಂದು ತಿಳಿಸಿದರಲ್ಲದೆ ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಅನಾರೋಗ್ಯ ಪೀಡಿತ ಮಕ್ಕಳನ್ನು ಮನೆಯಲ್ಲಿಯೇ ಇರಿಸಬೇಕು. ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ, ರೋಗಲಕ್ಷಣಗಳಿದ್ದವರ ಬಗ್ಗೆ ಆರೋಗ್ಯ ಅಧಿಕಾರಿ ಹಾಗೂ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಮಾಹಿತಿಯನ್ನು ಹಂಚಿಕೊಳ್ಳಬೇಕು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿ ಜಿಲ್ಲೆಯಲ್ಲಿ ಜನವರಿ 2025 ರಿಂದ ಮೇ 2025ರವರೆಗೆ ಯಾವುದೇ ಕೋವಿಡ್-19 ಪ್ರಕರಣಗಳು ವರದಿಯಾಗಿರುವುದಿಲ್ಲ. ಜೂನ್ ಮಾಹೆಯಲ್ಲಿ ಜಿಲ್ಲಾದ್ಯಂತ ಶಂಕಿತ ಕೋವಿಡ್-19ರ ರೋಗಿಗಳಿಂದ 

 ಪ್ರಕರಣಗಳಿಂದ  ಪರೀಕ್ಷೆಗಾಗಿ ಒಟ್ಟು 36 ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಜೂನ್ 2ರಂದು ಬೆಂಗಳೂರಿನ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಪರೀಕ್ಷಿಸಿದ ಮಾದರಿಗಳಲ್ಲಿ 14 ಪ್ರಕರಣಗಳು ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿ ಎಲ್ಲಾ 14 ಪಾಸಿಟಿವ್ ಪ್ರಕರಣಗಳಲ್ಲಿ ರೋಗಿಗಳು ಚಿಕಿತ್ಸೆ ಪಡೆದು ಆರೋಗ್ಯದಿಂದ ಮನೆಯಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...