ತುಮಕೂರು| ಬೆಳೆ ಹಾನಿ : ಆರೋಪಿಗಳ ರಕ್ಷಣೆಗೆ ಯತ್ನ

Date:

ಆರೋಪಿಯೊಬ್ಬ ರಾಗಿ ಬೆಳೆ ನಾಶ ಮಾಡಿ ವಾರ ಕಳೆಯುತ್ತಾ ಬಂದರೂ ಪ್ರಕರಣ ದಾಖಲಿಸಿಕೊಳ್ಳದೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರನ್ನೇ ಅಲೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.

ಗೂಳೂರಿನ ಎ.ಕೆ.ಕಾವಲ್ ಸರ್ವೆ ನಂ. 599ರಲ್ಲಿ ರಾಮಾಂಜಿನಯ್ಯ ಮತ್ತು ರಾಧಕೃಷ್ಣ ಅವರಿಗೆ ಸೇರಿದ್ದ ಕೃಷಿ ಜಮೀನಿನಲ್ಲಿ ಇತ್ತೀಚೆಗೆ ರಾಗಿ ಬಿತ್ತನೆ ಮಾಡಲಾಗಿತ್ತು, ಬೀಜ ಮೊಳಕೆಯೊಡೆದ ನಂತರ ಆರೋಪಿ ಪದ್ಮನಾಭ್ ಅವರು ಆ.13ರಂದು ಬೆಳೆಯ ಮೇಲೆಯೇ ಟ್ರಾಕ್ಟರ್ ಚಲಾಯಿಸಿ ಬೆಳೆ ಹಾನಿ ಮಾಡಿದ್ದೂ ಅಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದರು ಎಂದು ಸಂತ್ರಸ್ತರು ಆರೋಪಿಸಿ ಠಾಣೆಗೆ ದೂರು ನೀಡಿದ್ದರು. ಆಗ ಪಿಎಸ್‌ಐ ಅವರು ಸಂತ್ರಸ್ತರನ್ನೇ ಬೆದರಿಸಿದ್ದರು ಎನ್ನಲಾಗಿದ್ದು, ನಂತರ ಎಸ್ಪಿ ಅವರ ಗಮನಕ್ಕೆ ತೆಗೆದುಕೊಂಡು ಹೋಗಲಾಗಿದೆ, ನಂತರ ಠಾಣೆಗೆ ಬಂದ ದೂರುದಾರರು ಆ.19 ರಂದು ದೂರು ನೀಡಿದ್ದಾರೆ. ಆದರೆ, ಠಾಣಾಧಿಕಾರಿ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

ಬೆಳೆ ಹಾನಿ ಮಾಡಿ ವಾರ ಕಳೆಯುತ್ತಾ ಬಂದರೂ ಪ್ರಕರಣ ದಾಖಲಿಸಿಕೊಳ್ಳದಿರುವುದಕ್ಕೆ ಗ್ರಾಮಾಂತರ ಶಾಸಕರ ಬೆಂಬಲಿಗ ಗೂಳೂರು ವ್ಯಾಪ್ತಿಯ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಅಲ್ಲದೆ ಪೊಲೀಸರು ದೂರು ದಾಖಲಿಸಿಕೊಳ್ಳದಿರುವುದಕ್ಕೆ ಆರೋಪಿ ಪದ್ಮನಾಭ್ ಎನ್ನುವ ವ್ಯಕ್ತಿ ರಾಜಕೀಯ ಚೇಲಾ ಆಗಿರುವುದೇ ಮುಖ್ಯ ಕಾರಣ ಎನ್ನಲಾಗಿದೆ.
ನಾವು ಠಾಣೆಗೂ ಮನೆಗೂ ಅಲೆದು ಸಾಕಾಗಿದೆ. ಯಾರೂ ನಮಗೆ ನ್ಯಾಯ ಕೊಡಿಸುತ್ತಿಲ್ಲ, ಮಂಡಿ ನೋವಿದ್ದರೂ ನಿತ್ಯ ಠಾಣೆಗೆ ಬರುತ್ತಿದ್ದೇವೆ. ದೂರು ಪಡೆಯಲಾಗಿದ್ದರೂ ಪ್ರಕರಣ ದಾಖಲಿಸದೆ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂಬಿಕೆ ಭದ್ರಪಡಿಸುವ ಕೆಲಸವಾಗಲಿ : ರಾಜಕೀಯ ಪ್ರಭಾವಿಗಳಾದರೆ ಏನು ಬೇಕಾದರೂ ಮಾಡಬಹುದು ಎನ್ನುವ ಸ್ಥಿತಿ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಹೀಗಾದರೆ ನ್ಯಾಯ ಸಿಗಲು ಸಾಧ್ಯವಿದೆಯೇ? ಕೋರ್ಟ್ ಆದೇಶವಿದ್ದರೂ ಪೊಲೀಸರು ಆರೋಪಿಗಳ ಪರ ನಿಲ್ಲುತ್ತಿರುವುದು ಸರಿಯಲ್ಲ. ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗಿರುವ ನಂಬಿಕೆಯನ್ನು ಮತ್ತಷ್ಟು ಭದ್ರಪಡಿಸುವ ಕೆಲಸವಾಗಬೇಕೇ ವಿನಾಃ, ಅಪನಂಬಿಕೆಗೆ ಗುರಿಯಾಗಬಾರದು. ಗೃಹ ಸಚಿವರ ತವರಲ್ಲಿಯೇ ಹೀಗಾಗುತ್ತಿರುವುದು ದುರದೃಷ್ಟಕರ.

“ರೈತರ ಬೆಳೆ ನಾಶ ಮಾಡುವುದು ತಪ್ಪು. ಕೋರ್ಟ್ನಲ್ಲಿ ತೀರ್ಪು ನೀಡಿದ್ದರೂ ಅದನ್ನು ಮೀರಿ ತಮ್ಮ ಪ್ರಭಾವ ಬಳಸಿ ರೈತರ ಬೆಳೆ ನಾಶಪಡಿಸಿರುವುದು ಖಂಡನೀಯ. ದೂರು ನೀಡಿದರೆ ಪರಿಶೀಲನೆ ಮಾಡಿ ಅವರಿಗೆ ರಕ್ಷಣೆ ನೀಡುವುದು ಪೊಲೀಸರ ಕರ್ತವ್ಯ. ಪೊಲೀಸರು ಮಧ್ಯ ಪ್ರವೇಶ ಮಾಡಿ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ರೖತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಆಗ್ರಹಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ಕೇಳಲು ತುಮಕೂರು ಗ್ರಾಮಾಂತರ ಪಿಎಸ್‌ಐ ಅವರನ್ನು ಸಂಪರ್ಕಿಸಲಾಯಿತು. ಅವರು ಕರೆ ಸ್ವೀಕರಿಸಿಲಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...