ತುಮಕೂರು | ಕೊರಟಗೆರೆಯಲ್ಲಿ ದಲಿತರಿಂದ ಮಲ ಸ್ವಚ್ಛಗೊಳಿಸಿದ ಪ್ರಕರಣ: ನಾಲ್ವರ ವಿರುದ್ದ ಎಫ್ಐಆರ್ ದಾಖಲು

Date:

ದಲಿತರಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ದ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮಲಹೊರುವ ಪದ್ದತಿ‌ನಿಶೇಧ ಕಾಯ್ದೆ( ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಆಕ್ಟ್ ) ಅಡಿಯಲ್ಲಿ ನಾಲ್ವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ದಲಿತ ಬಾಲಕರನ್ನ ಮಲ ಸ್ವಚ್ಚತೆಗೆ ಕರೆತಂದಿದ್ದ ತುಮಕೂರಿನ ಕೋತಿತೋಪು ನಿವಾಸಿ ಕುಮಾರ್, ಶೌಚಾಲಯದ ಗುತ್ತಿಗೆ ಪಡೆದಿರುವ ನಿಮಿಶಾಂಬ ಎಂಟರ್ ಪ್ರೈಸಸ್ ನ ಸೂಪರ್ ವೈಸರ್ ನಿತೇಶ್, ನಿಮಿಶಾಂಬ ಎಂಟರ್ ಪ್ರೈಸಸ್ ಮಾಲೀಕರಾದ ಶ್ವೇತಾ, ಹಾಗೂ ಕೊರಟಗೆರೆ ಸಾರಿಗೆ ನಿಯಂತ್ರಕ ಸತ್ಯನಾರಾಯಣ ರೇಡ್ಡಿ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಎಫ್ ಐ ಆರ್ ನಲ್ಲಿ ಬಾಲಕಾರ್ಮಿಕ ಕಾಯ್ದೆ ಉಲ್ಲಂಘನೆ ಆಕ್ಟ್ ಹಾಗೂ ಮತ್ತೊರ್ವ ವಯಸ್ಕ ವ್ಯಕ್ತಿಯನ್ನ ಕೈಬಿಡಲಾಗಿದೆ. ಜೊತೆಗೆ ಎಫ್ ಐ ಆರ್ ನ ವಿವರಣೆಯಲ್ಲಿ ಬಾಲಕನಿಂದ ಬರಿಗೈಯಲ್ಲಿ ಸ್ವಚ್ಚತೆ ಮಾಡಿಸಿಲಾಗಿದೆ ಎಂದಷ್ಟೇ ಇದ್ದು ಶೌಚಾಲಯದ ಮಲದ ಗುಂಡಿಯ ಬಗ್ಗೆ ಉಲ್ಲೇಖಿಸದೆ ಇರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ. ಅಲ್ಲದೆ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಮಾಧ್ಯಮ ಸ್ಪಷ್ಟೀಕರಣ ದಲ್ಲಿ ದಲಿತ ವ್ಯಕ್ತಿಗೆ ಮಾನಸಿಕ ಅಸ್ವಸ್ಥ ಎಂದು ಅಮಾನಸಿದ್ದರ ಬಗ್ಗೆ ದೂರು ದಾಖಲಿಸಬೇಕಿತ್ತು ಆದರೆ ಇದೆಲ್ಲವನ್ನೂ ಎಫ್ ಐ ಆರ್ ನಲ್ಲಿ ಮರೆಮಚಲಾಗಿದೆ ಎಂದು ದಲಿತ ಮುಖಂಡ ದಾಡಿ ವೆಂಕಟೇಶ್ ಹಾಗೂ ಜಟ್ಟಿ ಅಗ್ರಹಾರ ನಾಗರಾಜು ಅಸಮಧಾನ ವ್ಯಕ್ತ ಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 06 ರಂದು ಕೊರಟಗೆರೆ ಕೆಎಸ್ಆರ್ಟಿಸಿ ಬಸ್‌ನಿಲ್ದಾಣದಲ್ಲಿ ಸಾಋವಜನಿಕ ಶೌಚಾಲಯದ ಪಿಟ್ ತುಂಬಿ ಹೊರಗೆ ಹರಿದಿದ್ದ ಮಲವನ್ನ ದಲಿತ ಬಾಲಕಾರ್ಮಿಕ ಹಾಗೂ ವಯಸ್ಕ ವ್ಯಕ್ತಿಯಿಂದ ಸ್ವಚ್ಚಗೊಳಿಸಿದ್ದರು. ಈ ಬಗ್ಗೆ ವಿಜಯವಾರ್ತೆಯಲ್ಲಿ ದೃಷ್ಯ ಸಮೇತ ವರದಿಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ವರದಿ‌ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಸೂಚನೆ ಮರೆಗೆ ಸಫಾಯಿ ಕರ್ಮಾಚಾರಿ ಆಯೋಗದಿಂದ ತುಮಕೂರು‌ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿತ್ತು.

ಬಳಿಕ ಜಿಲ್ಲಾಧಿಕಾರಿ ಶುಭಾಕಲ್ಯಾಣ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಪಪ್ಪ, ತಹಶಿಲ್ದಾರ್ ಮಂಜುನಾಥ್ ಕೊರಟಗೆರೆ ಬಸ್ ನಿಲ್ದಾಣಕ್ಕೆ ಭೇಟಿ‌ನೀಡಿ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ಶೌಚಾಲಯದ ಗುಂಡಿ ತುಂಬಿ ಹರಿದಿರುವುದು ಕಂಡು ಬಂದಿದೆ ಎಂದಿದ್ದರು. ಬಳಿಕ ಮಧುಗಿರಿ ಉಪವಿಭಾಗಧಿಕಾರಿ ನೇತೃತ್ವದಲ್ಲಿ ತನಿಖಾ ಸಮೀತಿ ರಚನೆ ಮಾಡಿ ತನಿಖಾ ವರದಿ ನೀಡಿದ ಬಳಿಕ ಶನಿವಾರ ಸಂಜೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಕಂದಾಯ ಇಲಾಖೆಯಿಂದ ದೂರು ನೀಡಿ ನಾಲ್ವರ ವಿರುದ್ದ ಎಫ್ ಐ ಆರ್ ದಾಖಲಿಸಲಾಗಿದೆ.

ಶೌಚಗುಂಡಿ ಸ್ವಚ್ಚಗೊಳಿಸುವಂತೆ ಹಲವು 2023 ರಿಂದಲೂ ಕೆಎಸ್ ಆರ್ ಟಿಸಿಗೆ ನೋಟೀಸ್.

ಶೌಚಾಲಯದ ಗುಂಡಿ‌ ತುಂಬಿ ಹರಿದಿರುವ ಬಗ್ಗೆ ಸ್ಪಷ್ಟೀಕರಣ ನೀಡಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಕೆಎಸ್ ಆರ್ ಟಿಸಿ ಅಧಿಕಾರಿಗಳ ನಿಜಬಣ್ಣ ಬಯಲಾಗಿದೆ. ಶೌಚಾಲಯದ ಗುಂಡಿ ತುಂಬಿ ಹರಿಯುವ ನೀರನ್ನ ಪೈಪ್ ಮೂಲಕ ಚರಂಡಿಗೆ ಹರಿಬಿಡಲಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಕೂಡಲೇ ಪಿಟ್ ಸ್ವಚ್ಚಗೊಳಿಸುವಂತೆ 2023 ನವೆಂಬರ್ 11 ರಂದು ಪಟ್ಟಣ ಪಂಚಾಯಿತಿಯಿಂದ ‌ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ನೋಟೀಸ್ ನೀಡಿದೆ. ಆದರೆ ಈವರೆಗೂ ಸ್ವಚ್ಚಮಾಡದೆ ನಿರ್ಲಕ್ಷ್ಯ ಮಾಡಿದ್ದರಿಂದ ಅಕ್ಟೋಬರ್ 24, 2024 ರಂದು ಮತ್ತೆ ನೋಟೀಸ್ ನೀಡಿರುವುದು ಬೆಳಕಿಗೆ ಬಂದಿದೆ. ಇಷ್ಟಾದರೂ ಕೆ ಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ಪ್ರಕರಣವನ್ನ ಮುಚ್ಚಿಹಾಕಲು ಯತ್ನಿಸಿರುವುದು ಪಟ್ಟಣ ಪಂಚಾಯಿತಿ ನೊಟೀಸ್ ಗಳಲ್ಲೇ ಜಗಜ್ಜಾಹೀರಾಗಿದೆ.

ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿನಿಧಿಸುವ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ದಲಿತ ಬಾಲಕ ಹಾಗೂ ವಯಸ್ಕ ವ್ಯಕ್ತಿಯಿಂದ ಬರಿಗೈಲಿ ಮಲ ಸ್ವಚ್ಚಗೊಳಿಸಿದ ಪ್ರಕರಣ ಇಡೀ ನಾಗರೀಕ ಸಮಾಜವನ್ನೆ ತಲೆ ತಗ್ಗಿಸುವಂತೆ ಮಾಡಿದೆ. ಈ ಪ್ರಕರಣ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡು ಕೆಲ ಅಧಿಕಾರಿಗಳು ಮುಚ್ಚಿಹಾಕಲು ಎಷ್ಟೇ ‌ಪ್ರಯತ್ನಿಸಿದರು ಸಂವಿಧಾನ ಹಾಗೂ ಕಾನೂನಿನ ಮುಂದೆ ಸಾಧ್ಯವಾಗಿಲ್ಲ. ಇಂತಹ ಪ್ರಕರಣಗಳನ್ನ ಸ್ವಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಮಾನವೀಯತೆಯಿಂದ ಯೋಚಿಸಿ ಅನಿಷ್ಠ ಪದ್ದತಿಯ ನಿರ್ಮೂಲಗೆ ಎಲ್ಲರೂ ಕೈಜೋಡಿಸುವ ಕೆಲಸವಾಗಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...