ತುಮಕೂರು | ಗೃಹ ಸಚಿವರ ಸ್ವಕ್ಷೇತ್ರದಲ್ಲೇ ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ಪರದಾಟ!

Date:

ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಸ್ವಕ್ಷೇತ್ರದಲ್ಲೇ ದಲಿತ ಸಮುದಾಯದ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಮಶಾನವಿಲ್ಲದೆ ಪರದಾಡಿದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ದಲಿತ ಯುವಕ ಹನುಮಂತರಾಯಪ್ಪ ಶುಕ್ರವಾರ ಸಂಜೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಗ್ರಾಮದ ಸಮೀಪದ ಭೂಮಿಯಲ್ಲಿ ಮೃತನ ಶವ ಸಂಸ್ಕಾರಕ್ಕೆ ಮುಂದಾದಾಗ, ಆ ಭೂಮಿಯ ಮಾಲೀಕ ಎನ್ನಲಾದ ಹನುಮಂತಯ್ಯ ಎಂಬುವವರು, ‘ಈ ಭೂಮಿ ನಮಗೆ ಸೇರಿದ್ದು’ ಎಂದು ಶವ ಸಂಸ್ಕಾರಕ್ಕೆ ಅವಕಾಶ ನೀಡದೆ ತಡೆದಿದ್ದು, ಕೆಲ ಕಾಲ ಶವ ಇಟ್ಟುಕೊಂಡ ಸ್ಥಳದಲ್ಲಿ ಗೊಂದಲ ಸೃಷ್ಟಿಯಾಯಿತು.

ಘಟನೆಯ ವಿಷಯ ತಿಳಿದ ಬಳಿಕ ಸ್ಥಳಕ್ಕೆ ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿ ಜಮೀನು ಮಾಲೀಕನಿಗೆ ಈ ಬಾರಿ ಇಲ್ಲೇ ಶವ ಸಂಸ್ಕಾರ ಮಾಡಿಸುವಂತೆ ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯವರು ಗುರುತಿಸಿರುವ ಜಾಗದಲ್ಲೇ ಶವ ಸಂಸ್ಕಾರ ಮಾಡುವಂತೆ ದಲಿತ ಸಮುದಾಯದವರಿಗೆ ಮನವೊಲಿಸುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

tumkur 1

“ಈ ಭೂಮಿ ನನ್ನ ಹೆಸರಿನಲ್ಲಿದೆ. ಹಾಗಾಗಿ ಇಲ್ಲಿ ಶವ ಸಂಸ್ಕಾರಕ್ಕೆ ಬಿಡುವುದಿಲ್ಲ” ಎಂದು ಜಮೀನು ಮಾಲೀಕ ಹನುಮಂತಯ್ಯ ಹಠ ಹಿಡಿದಿದ್ದರು. ಅದರೆ ಶತ-ಶತಮಾನಗಳಿಂದ ನಾವು ಇಲ್ಲೇ ಶವ ಸಂಸ್ಕಾರವನ್ನು ಮಾಡುತ್ತಿದ್ದೇವೆ. ಹಾಗಾಗಿ ನಾವು ಇಲ್ಲೇ ಶವ ಸಂಸ್ಕಾರ ಮಾಡುತ್ತೇವೆ ಎಂದು ದಲಿತ ಮುಖಂಡರು ಪಟ್ಟು ಹಿಡಿದಿದ್ದು ತಾಲೂಕು ಆಡಳಿತವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಈಗಾಲೇ ಗ್ರಾಮದಲ್ಲಿ ದಲಿತರ ಸ್ಮಶಾನಕ್ಕೆ ಕಂದಾಯ ಇಲಾಖೆ ಭೂಮಿ ಗುರುತಿಸಿದೆ. ಈ ಭೂಮಿ ಗ್ರಾಮದಿಂದ ಸುಮಾರು 3 ಕಿಲೋಮೀಟರ್ ದೂರ ಇದ್ದು, ಶವ ಸಾಗಿಸಲು ತೊಂದರೆಯಾಗುತ್ತಿದೆ. ಗುರುತಿಸಿರುವ ಸ್ಥಳ ಕಲ್ಲು ಬಂಡೆಗಳಿಂದ ಕೂಡಿದ್ದು ಗುಂಡಿ ತೆಗೆಯಲು ಅಸಾಧ್ಯವಾಗಿದೆ. ದಲಿತರಿಗೆ ಗ್ರಾಮದ ಅಕ್ಕಪಕ್ಕದಲ್ಲಿ ಸ್ಮಶಾನಕ್ಕೆ ಸ್ಥಳ ಗುರುತಿಸಿಕೊಡಬೇಕೆಂದು ಸ್ಥಳೀಯ ದಲಿತ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಸಮನ್ವಯತೆಯ ಕೊರತೆಯಿಂದ ತುಮಕೂರು ಜಿಲ್ಲೆಯಾದ್ಯಂತ ದಲಿತರಿಗೆ ಅಂತ್ಯಕ್ರಿಯೆಗೆ ಯೋಗ್ಯವಾದ ಭೂಮಿ ಗುರುತಿಸಿ, ಸ್ಮಶಾನ ಸಮಸ್ಯೆಯನ್ನು ಅಧಿಕಾರಿ ವರ್ಗ ಪರಿಹರಿಸಬೇಕಾಗಿತ್ತು. ಮಳೆ ಬಂದರೆ ಕೊಡೆ ಹಿಡಿಯುವಂತೆ ಅಂತ್ಯಸಂಸ್ಕಾರಕ್ಕೆ ತೊಂದರೆಯಾದಾಗ ಮಾತ್ರ ಪ್ರತ್ಯಕ್ಷವಾಗುವ ಅಧಿಕಾರಿಗಳು ಶಾಶ್ವತವಾದ ಪರಿಹಾರ ದೊರಕಿಸಿಕೊಡುವಲ್ಲಿ ವಿಫಲವಾಗಿದ್ದಾರೆ ಎನ್ನುತ್ತಾರೆ ದಲಿತ ಸಮುದಾಯದ ಮಂದಿ ಆಕ್ರೋಶ ಹೊರಹಾಕಿದರು.

ಇದನ್ನು ಓದಿದ್ದೀರಾ? ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ತನ್ನದೇ ಸಮುದಾಯದ ಜನರು ಅಂತ್ಯಕ್ರಿಯೆಗೆ ಸ್ಥಳಾವಕಾಶ ಇಲ್ಲದೆ ಪರದಾಡುತ್ತಿರುವಾಗ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪರಮೇಶ್ವರ್ ಅವರು ಎರಡು ಇಲಾಖೆಯವರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಮಾಡುತ್ತಾರಾ? ಆ ಮೂಲಕ ದಲಿತರ ಅಂತ್ಯ ಸಂಸ್ಕಾರಗಳಿಗೆ ಅಡ್ಡಿಯಾಗಿರುವ ಸ್ಮಶಾನ ಸಮಸ್ಯೆಗೆ ಪೂರ್ಣವಿರಾಮ ಹಾಕುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...