ತುಮಕೂರು ದಸರಾ | ರಂಗಭೂಮಿಗೆ ಪ್ರೋತ್ಸಾಹ ಇಂದಿನ ಅಗತ್ಯ : ಡಾ. ಜಿ. ಪರಮೇಶ್ವರ ಅಭಿಮತ

Date:

 ನಾಟಕವೇ ಸಂಸ್ಕೃತಿ, ಸಮಾಜದ ಪ್ರತಿಬಿಂಬ. ನಾಟಕಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.

ಸೋಮವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಿರ್ಮಿಸಿರುವ ಮಾಸ್ಟರ್ ಹಿರಣ್ಣಯ್ಯ ರಂಗ ವೇದಿಕೆಯಲ್ಲಿ ನಡೆದ ರಂಗ ದಸರಾ ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುಬ್ಬಿ ವೀರಣ್ಣ ಕಲಾಮಂದಿರವು ಅನೇಕ ಕಲಾವಿದರಿಗೆ ಜನ್ಮ ನೀಡಿರುವ ಮಂದಿರ. ಮಾಧ್ಯಮಗಳಿಲ್ಲದ ಕಾಲದಲ್ಲಿ ನಾಟಕಗಳು ಸಮಾಜದ ಕನ್ನಡಿ ಆಗಿದ್ದವು. ಚಿತ್ರಮಂದಿರಗಳ ಪ್ರಭಾವದಿಂದ ನಾಟಕ ಮಂದಿರಗಳು ಕುಂಠಿತವಾಗಿದ್ದರೂ, ಕಲೆಯ ಜೀವಂತಿಕೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ನಾಟಕ ರಸಸ್ವಾದನೆ ಮಾಡಲು ದಸರಾ ಉತ್ಸವದ ಅಂಗವಾಗಿ ರಂಗಮಂದಿರಗಳಲ್ಲಿ ವಿಶೇಷ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಗುಬ್ಬಿ ವೀರಣ್ಣ ಅವರ ನೇತೃತ್ವದಲ್ಲಿ ಅನೇಕ ಕಲಾಭಿಮಾನಿಗಳು ಹಾಗೂ ಕಲಾವಿದರು ಬೆಳೆದಿದ್ದಾರೆ. ಶ್ರೇಷ್ಠ ನಾಟಕ ರತ್ನಗಳನ್ನು ದೇಶಕ್ಕೆ ಪರಿಚಯಿಸುವಲ್ಲಿ ತುಮಕೂರು ಜಿಲ್ಲೆಯ ಪಾತ್ರ ಹಿರಿದಿದೆ. ಅದಕ್ಕಾಗಿ ದಸರಾ ಉತ್ಸವದ 9 ದಿನಗಳಲ್ಲಿ 15 ನಾಟಕ ಪ್ರದರ್ಶನಗಳ ಮೂಲಕ ರಂಗಭೂಮಿಗೆ ಬಲ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿರಾ ಶಾಸಕ ಹಾಗೂ ಕರ್ನಾಟಕ ಸರ್ಕಾರ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ತುಮುಲ್ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಪ್ರಭುದೇವ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ ಆಶ್ವಿಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ಡಾ. ಗುಬ್ಬಿ ವೀರಣ್ಣ ಹಾಗೂ ಮಾಸ್ಟರ್ ಹಿರಣ್ಣಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 

ಮೆಗಾ ಇಂಜಿನಿಯರಿಂಗ್  ಇನ್ಫಾಂಸ್ಟಕ್ಚರ್  ಕಂಪನಿಯವರು ದಸರಾ ಉತ್ಸವದ ಕಾರ್ಯಕ್ರಮಕ್ಕೆ 50 ಲಕ್ಷ ರೂ.ಗಳನ್ನು ದೇಣಿಗೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...