ತುಮಕೂರು | ಜಿಲ್ಲಾಸ್ಪತ್ರೆಯಲ್ಲಿ ರಾಶಿ ರಾಶಿ ಕಸದ ಮೂಟೆ : ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತರಾಟೆ

Date:

ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಸ್ಗರ್ ಬೇಗ್ ಅವರಿಗೆ ಎಚ್ಚರಿಕೆ ನೀಡಿದ ಬೆಳವಣಿಗೆ ಕೂಡ ನಡೆಯಿತು.

ತುಮಕೂರು ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಡೆಂಘೀ ಚಿಕಿತ್ಸಾ ವಿಭಾಗ, ನವಜಾತ ಶಿಶು ವಿಭಾಗ, ಹೆರಿಗೆ ಕೊಠಡಿ, ಮಹಿಳಾ ವಿಭಾಗ, ಪ್ರಸವಪೂರ್ವ ಆರೈಕೆ ಕೊಠಡಿ, ಆರ್‌ಒಪಿ ಕೊಠಡಿ, ಡಾಟಾ ಎಂಟ್ರಿ ಆಪರೇಟರ್ ಕೊಠಡಿ, ಮತ್ತಿತರ ವಿಭಾಗಗಳಿಗೆ ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲನೆ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡದ್ದನ್ನು ಕಂಡು ಆಸ್ಪತ್ರೆ ಸಿಬ್ಬಂದಿ, ವೈದ್ಯಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾಟಾ ಎಂಟ್ರಿ ಆಪರೇಟರ್ ಕೊಠಡಿಯಂತೂ ಕೆಟ್ಟ ವಾಸನೆ ಮತ್ತು ಕತ್ತಲೆಯಿಂದ ಕೂಡಿದೆ. ಸಿಬ್ಬಂದಿಗಳ ಕೊಠಡಿಗಳಲ್ಲೇ ಶುಚಿಯಾಗಿಲ್ಲ. ರೋಗಿಗಳ ವಾರ್ಡುಗಳನ್ನು ಇನ್ನೆಷ್ಟರ ಮಟ್ಟಿಗೆ ಸ್ವಚ್ಛವಾಗಿಡುತ್ತೀರಾ? ಪ್ರತೀ ದಿನ ಸ್ವಚ್ಛಗೊಳಿಸುವುದಿಲ್ಲವೇ? ಸಂಜೆಯೊಳಗೆ ಜಿಲ್ಲಾಸ್ಪತ್ರೆ ಎಲ್ಲ ವಾರ್ಡು, ಶೌಚಾಲಯ, ಆಸ್ಪತ್ರೆ ಸುತ್ತ-ಮುತ್ತ ಸ್ವಚ್ಛತೆ ಮಾಡದಿದ್ದಲ್ಲಿ ಸೇವೆಯಿಂದ ವಜಾ ಮಾಡಲಾಗುವುದೆಂದು ಗ್ರೂಪ್ ಡಿ ನೌಕರರ ಮೇಲೆ ಸಿಡಿಮಿಡಿಗೊಂಡರು.

ತುಮಕೂರು ಜಿಲ್ಲಾಧಿಕಾರಿ1

ಮಕ್ಕಳ ವಿಭಾಗದಲ್ಲಿದ್ದ ತ್ಯಾಜ್ಯ ವಸ್ತುಗಳನ್ನು ತಮ್ಮ ಸಮ್ಮುಖದಲ್ಲೇ ತೆರವು ಮಾಡಲು ಸೂಚಿಸಿದ ಅವರು ತ್ಯಾಜ್ಯ ತೆರವು ಸಂದರ್ಭದಲ್ಲಿ ಗುಂಪು-ಗುಂಪಾಗಿ ಸೊಳ್ಳೆಗಳು, ಇಲಿಗಳು ಹೊರಬಂದಿದ್ದನ್ನು ಕಂಡ ಜಿಲ್ಲಾಧಿಕಾರಿಗಳು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಬಿಟ್ಟು ಇಲಿ, ಸೊಳ್ಳೆಯನ್ನು ಸಾಕಿದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದಿಂದ ಅನುದಾನ ಲಭ್ಯವಿದ್ದರೂ ನಿರ್ವಹಣೆ ಸಮರ್ಪಕವಾಗಿ ಮಾಡುತ್ತಿಲ್ಲ. ರೋಗಿಗಳಿಗೆ ಖಾಸಗಿಗಿಂತ ಉತ್ತಮ ವಾತಾವರಣ, ನೈರ್ಮಲ್ಯ, ಚಿಕಿತ್ಸೆ ಸರ್ಕಾರಿ ಆಸ್ಪತ್ರೆಯಲ್ಲಿ ದೊರೆಯುವಂತಾಗಬೇಕೆಂದು ಖಡಕ್ ಸೂಚನೆ ನೀಡಿದರು.

ಅನುಪಯುಕ್ತ ವೈದ್ಯಕೀಯ ಸಲಕರಣೆಗಳನ್ನು ವೈಜ್ಞಾನಿಕವಾಗಿ ಕೂಡಲೇ ವಿಲೇವಾರಿ ಮಾಡಬೇಕು. ಆಸ್ಪತ್ರೆ ಹೊರಾಂಗಣದಲ್ಲಿ ಬೆಳೆದಿರುವ ಹುಲ್ಲು, ಕಳೆಗಿಡಗಳನ್ನು ತೆರವುಗೊಳಿಸಬೇಕು. ಜಿಲ್ಲಾಸ್ಪತ್ರೆಯು ಸೊಳ್ಳೆ, ಇಲಿಗಳ ತಾಣವಾಗದೆ ಗಾಯಾಳು ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ತಾಣವಾಗಿ ಮಾರ್ಪಾಡಾಗಬೇಕೆಂದು ಆಸ್ಪತ್ರೆ ಅಧಿಕಾರಿ-ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಡಾ. ಸಂತೋಷ್, ಡಿಎಂಓ ಡಾ. ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಗೆ ಹೇಮಾವತಿ ನೀರು : ಸಾರ್ವಜನಿಕರು ಎಚ್ಚರಿಕೆಯಿಂದಿರಲು ಡಿಸಿ ಮನವಿ

ಹೇಮಾವತಿ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಕೆರೆ ಕೆಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಗೆ ತುಮಕೂರು ಶಾಖಾ ಕಾಲುವೆಗೆ ನೀರು ಹರಿದಿದ್ದು, ತಿಪಟೂರು ತಾಲೂಕು ಗಂಗನಘಟ್ಟವನ್ನು ತಲುಪಿದೆ.

ಜಲಾಶಯದ ಒಳಹರಿವಿನ ಪ್ರಮಾಣ ಯಾವುದೇ ಸಮಯದಲ್ಲಾದರೂ ಏರಿಕೆಯಾಗುವ ಸಂಭವವಿದ್ದು, ಹೆಚ್ಚುವರಿ ನೀರನ್ನು ನಾಲೆಗೆ ಬಿಡುವುದರಿಂದ ಸಾರ್ವಜನಿಕರು ನಾಲೆಯ ಅಕ್ಕ-ಪಕ್ಕ ಸುಳಿದಾಡಬಾರದು ಹಾಗೂ ಈಜಲು, ಜಾನುವಾರುಗಳಿಗೆ ನೀರು ಕುಡಿಸಲು, ಬಟ್ಟೆ ಒಗೆಯಲು, ಮತ್ತಿತರ ಕಾರಣಗಳಿಗಾಗಿ ನಾಲೆ ಬಳಿಗೆ ಹೋಗಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

ಜಿಲ್ಲೆಯ ಹೇಮಾವತಿ ಯೋಜನಾ ವ್ಯಾಪ್ತಿಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ನೀರು ಪೋಲಾಗದಂತೆ ತುರ್ತು ಕ್ರಮಗಳನ್ನು ಕೈಗೊಂಡು ಸಾರ್ವಜನಿಕರು ಮತ್ತು ರೈತರಿಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸೂಕ್ತ ತಿಳುವಳಿಕೆ ನೀಡಬೇಕು. ಸುಗಮ ನೀರು ನಿರ್ವಹಣೆ ಸಂಬಂಧ ಯೋಜನಾ ವ್ಯಾಪ್ತಿಯ ಜನರು ಹಾಗೂ ಅಚ್ಚುಕಟ್ಟುದಾರರು ಇಲಾಖಾಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...