ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

Date:

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 14  ಸ್ಥಾನದಲ್ಲೂ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರ ಬೆಂಬಲಿಗರು ಆಯ್ಕೆಯಾಗಿದ್ದಾರೆ. 7  ನೇ ಬಾರಿಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವುದು ಪಿಕ್ಸ್ ಆಗಿದೆ.

ತೀವ್ರ ಕುತೂಹಲ ಮೂಡಿಸಿದ್ದ, ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡ‌ಳಿತ ಮಂ‌ಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕರ ಅವಿರೋಧ ಆಯ್ಕೆ ಹೊರತುಪಡಿಸಿ ಉಳಿದ 6 ನಿರ್ದೇಶಕರ ಸ್ಥಾನಗಳಿಗೆ ಬೆಳಿಗ್ಗೆ 9 ಗಂಟೆಯಿಂದ ಬಿರುಸಿನ ಮತದಾನ ನಡೆಯಿತು.

ಡಿಸಿಸಿ ಬ್ಯಾಂಕ್‌ನ 14 ನಿರ್ದೇಶಕರ ಸ್ಥಾನಗಳ ಪೈಕಿ ಎ ಕೆಟಗರಿಯ ನಾಲ್ವರು, ಬಿ ಸಿ ‌ಡಿ ಹಾಗೂ ಡಿ1 ಕೆಟಗರಿಯ ತಲಾ 1 ನಿರ್ದೇಶಕ ಸ್ಥಾನ ಸೇರಿ ಒಟ್ಟು 8 ಮಂದಿ ನಿರ್ದೇಶಕರ ಅವಿರೋಧ ಆಯ್ಕೆಯಾಗಿದೆ. ಉಳಿದ ಪ್ರಾಥಮಿಕ ಕೃಷಿ ಉತ್ತಿನ ಸಹಕಾರ ಸಂಘದ ಎ ಕೆಟಗರಿಯ ಉಳಿದ 6 ತಾಲ್ಲೂಕುಗಳಾದ ಕುಣಿಗಲ್, ತಿಪಟೂರು, ಪಾವಗಡ, ಚಿಕ್ಕನಾಯಕನಹಳ್ಳಿ, ಗುಬ್ಬಿ ಹಾಗೂ ಸಿರಾ ತಾಲ್ಲೂಕುಗಳ ತಲಾ 1 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001951120

ತುಮಕೂರು ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ 6 ಸ್ಥಾನಗಳಿಗೆ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ ನಡೆಸಲಾಯಿತು. 6 ತಾಲ್ಲೂಕುಗಳ ಮತದಾರರು ಡಿಸಿಸಿ ಬ್ಯಾಂಕ್‌ಗೆ ಆಗಮಿಸಿ ಉತ್ಸಾಹದಿಂದಲೇ ಮತದಾನ ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 23 ಮಂದಿ ಮತದಾರರು, ಗುಬ್ಬಿ ತಾಲ್ಲೂಕು 21, ಕುಣಿಗಲ್ 18, ಪಾವಗಡ 20, ತಿಪಟೂರು 18, ಸಿರಾ 29 ಸಹಕಾರಿ ಸಂಘದ ಪ್ರತಿನಿಧಿಗಳಾಗಿರುವ ಮತದಾರರು ಡಿಸಿಸಿ ಬ್ಯಾಂಕ್‌ನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಿದರು.

ಚುನಾವಣೆ ನಡೆದ ಡಿಸಿಸಿ ಬ್ಯಾಂಕ್ ಮತಗಟ್ಟೆ ಕೇಂದ್ರದ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಿಂದ ದೂರದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಬೆಂಬಲಿಗರು, ಸಹಕಾರ ಸಂಘಗಳ ಪ್ರತಿನಿಧಿಗಳು ಜಮಾಯಿಸಿದ್ದರು.ಅವಿರೋಧ ಆಯ್ಕೆಯಾದವರು

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎ ಕೆಟಗರಿ ವರ್ಗ ಕ್ಷೇತ್ರ ವ್ಯಾಪ್ತಿಯ ತುಮಕೂರು ತಾಲ್ಲೂಕಿನಿಂದ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ, ತುರುವೇಕೆರೆಯಿಂದ ಎಂ. ಸಿದ್ದಲಿಂಗಪ್ಪ, ಮಧುಗಿರಿಯಿಂದ ಜಿ.ಜೆ. ರಾಜಣ್ಣ, ಕೊರಟಗೆರೆಯಿಂದ ಎನ್. ಹನುಮಾನ್, ಬಿ. ವರ್ಗದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಪಟ್ಟಣ ಸಹಕಾರ ಬ್ಯಾಂಕ್‌ಗಳು, ವ್ಯವಸಾಯೇತರ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಎಸ್. ಲಕ್ಷ್ಮೀನಾರಾಯಣ, ಡಿ ವರ್ಗದ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೇತ್ರದಿಂದ ಬಿ. ನಾಗೇಶ್‌ಬಾಬು ಹಾಗೂ ಡಿ1 ವರ್ಗದ ಮಹಿಳಾ ಸಂಘಗಳ ಕ್ಷೇತ್ರದಿಂದ ಮಾಲತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...