ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

Date:

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ ಮೂಲಕ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಸಂಘ ಸಂಸ್ಥೆಗಳು ಹೊಸ ವಿವಾದವನ್ನ ಸೃಷ್ಠಿಸಿದ್ದು, ಈ ಬೆಳವಣಿಗೆ ದಲಿತ‌ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ತುಮಕೂರು‌ ಜಿಲ್ಲೆ ತುರುವೇಕೆರೆ ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಜುಲೈ 26 ರಂದು ಕಾರ್ಗಿಲ್ ವಿಜಯದಿನ ಆಚರಣೆ ಹಾಗೂ ಚರ್ಚಾ ಸ್ಪರ್ಧೆಯನ್ನ ನಡೆಸಲು ವಿವಿಧ ಸಂಘ ಸಂಸ್ಥೆಗಳು ಸಿದ್ದತೆ ನಡೆಸಿದ್ದವು. ಕಾಲೇಜಿನ ಪ್ರಾಂಶುಪಾಲರಾದ ಎಸ್ ಎಂ ಕಾಂತರಾಜ್ ಅಧ್ಯಕ್ಷತೆಯಲ್ಲಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸುರಭಿ ಸಂಗಮ ಸಂಸ್ಥೆಗಳ ಆಶ್ರಯದೊಂದಿಗೆ ಕರ್ನಾಟಕ ಬ್ಯಾಂಕ್, ಎಸ್ ಬಿ ಐ ಬ್ಯಾಂಕ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆದಿತ್ತು. ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಚರ್ಚಾ ಸ್ಪರ್ಧೆಯಲ್ಲಿ “ಭಾರತದ ಸಂವಿಧಾನಕ್ಕೆ ಬದಲಾವಣೆ ಅಗತ್ಯವೇ?” ಎಂಬ ಪ್ರಶ್ನಾರ್ಥಕ ವಿಷಯವನ್ನ ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಈ ಹಿಂದೆ ಹಲವು ಬಿಜೆಪಿ ನಾಯಕರು ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದು ಕಳೆದ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಹಿನ್ನಡೆಗೂ ಕಾರಣವಾಗಿತ್ತು. ಇದೀಗ ಸಂಘ ಸಂಸ್ಥೆಗಳು, ಬ್ಯಾಂಕ್‌ಗಳು ಸೇರಿ ಕಾಲೇಜುಗಳಲ್ಲೇ ಸಂವಿಧಾನ ಬದಲಾವಣೆ ಕುರಿತ ವಿಷಯವನ್ನ ಚರ್ಚಿಸಲು ಮುಂದಾಗಿರುವುದು ಸಂವಿಧಾನ ವಿರೋಧಿ ಚಟುವಟಿಕೆ ಎಂದು ಆರೋಪಿಸಿ ಕಾರ್ಯಕ್ರಮಕ್ಕೆ ದಲಿತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ ಚರ್ಚಾ ಸ್ಪರ್ಧೆಯನ್ನು ನಡೆಸಲು ಸಿದ್ದತೆ ನಡೆಸಿದ್ದ ಆಯೋಜಕರ ವಿರುದ್ದ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆಯೋಜಕರ ವಿರುದ್ದ ಎಫ್ ಐ ಆರ್ ದಾಖಲಿಸದೇ ಪೊಲೀಸರು ವಿಳಂಬ ಮಾಡಿದ್ದಕ್ಕೆ ತುರುವೇಕೆರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಸಂಘಟನೆಗಳ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಹುದುಗಿದ್ದ ಮಣ್ಣಿನ ಗುಡ್ಡೆಯಲ್ಲಿ ನೆಲಮಾಳಿಗೆ ಪತ್ತೆ

ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಸಂವಿಧಾನ ರಕ್ಷಣೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಹೋದಲ್ಲಿ, ಬಂದಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡಿ ಪ್ರಚಾರ ಗಿಟ್ಟಿಸಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಇದೀಗ ತಮ್ಮದೇ ಸರ್ಕಾರವಿದ್ದರೂ ಸಹ ಸಂವಿಧಾನ ವಿರೋಧಿ ಚಟುವಟಿಕೆ‌ ನಡೆಸುವವರ ವಿರುದ್ದ ಪೊಲೀಸ್ ಇಲಾಖೆ ಕಾನೂನು ಕ್ರಮ ಜರುಗಿಸಲು ಮೀನಮೇಷ ಎಣಿಸುತ್ತಿರುವುದು ವಿಪರ್ಯಾಸ ಎಂದು ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...