ತುಮಕೂರು | ಹಿಂದುಳಿದ ವರ್ಗಗಳ ವಿರೋಧಿ ಬಿಜೆಪಿ ಸೋಲಿಸಿ: ಮಾವಳ್ಳಿ ಶಂಕರ್

Date:

ನರೇಂದ್ರ ಮೋದಿ ನೇತೃತ್ವದ 10 ವರ್ಷಗಳ ಎನ್‌ಡಿಎ ಆಡಳಿತ ಜನಸಾಮಾನ್ಯರಿಗೆ ಅಚ್ಛೇ ದಿನ್ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತ, ಬಡವರ, ದೀನ ದಲಿತರು, ಹಿಂದುಳಿದ ವರ್ಗಗಳ ವಿರೋಧಿಯಾಗಿರುವ ಬಿಜೆಪಿ ಪಕ್ಷವನ್ನು ಸೋಲಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.

ತುಮಕೂರು ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಕಳೆದ ಹತ್ತುವರ್ಷಗಳಲ್ಲಿ ಎನ್‌ಡಿಎ ಒಕ್ಕೂಟ ನೀಡಿದ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ನಿರುದ್ಯೋಗ ತಾಂಡವವಾಡುತ್ತಿದೆ. ಸೈನಿಕರ ನೇಮಕಾತಿಯಲ್ಲಿಯೂ ಅಗ್ನಿಪಥ್ ಹೆಸರಿನಲ್ಲಿ ಹೊರಗುತ್ತಿಗೆ ಪದ್ದತಿಯನ್ನು ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಸದೃಢವಾಗಿದ್ದ ಬ್ಯಾಂಕ್‌ಗಳನ್ನು ಗುಜರಾತ್‌ನ ನಷ್ಟದಲ್ಲಿರುವ ಬ್ಯಾಂಕಿನೊಂದಿಗೆ ವಿಲೀನ ಮಾಡಿ, ಕನ್ನಡಿಗರ ಅಸ್ವಿತ್ವವೇ ಇಲ್ಲದಂತೆ ಮಾಡಲಾಗಿದೆ” ಎಂದರು.

“ಇತ್ತೀಚಿನ ಭಾಷಣವೊಂದರಲ್ಲಿ ಪ್ರಧಾನಿ ನರೇಂದ್ರಮೋದಿ ಮಾತನಾಡಿ, ʼಈವರೆಗೂ ನಡೆದಿರುವುದು ಪ್ರಯೋಗಿಕ, ಇನ್ನು ಮುಂದೆ ನಿಜವಾದ ಅಭಿವೃದ್ಧಿ ಇದೆʼ ಎಂದು ಹೇಳಿಕೆ ನೀಡಿರುವುದನ್ನು ಗಮನಿಸಿದರೆ, 10 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ್ದು, ಓರ್ವ ಅನನುಭವಿ ಎಂಬುದು ತಿಳಿಯುತ್ತದೆ. ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯವೆಂಬುದು ಮರೀಚಿಕೆಯಾಗಿದೆ.‌ ಪದೇ ಪದೆ ಆ ಪಕ್ಷದ ಸಂಸದರೇ ಸಂವಿಧಾನ ಬದಲಾಯಿಸುವ ಕೆಲಸ ಮಾಡುತ್ತಿದ್ದರೂ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಈಗ 400 ಸೀಟು ಕೊಡಿ ಎಂದು ಕೇಳುತ್ತಿದ್ದಾರೆ. ಇವರಿಗೆ 400 ಸೀಟು ಕೊಟ್ಟರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ದೇಶದ ಗದ್ದುಗೆ ಹಿಡಿಯುವಂತೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಂತನಾಯಕ್ ಮಾತನಾಡಿ, “ದೇಶದ ರೈತರ ಆದಾಯ ದ್ವಿಗುಣ ಮಾಡುತ್ತೇವೆಂದು ಭರವಸೆ ನೀಡಿದ್ದ ಬಿಜೆಪಿ ಸರ್ಕಾರದಲ್ಲಿ 1.74‌ ಲಕ್ಷ ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಇಲ್ಲ. ಪಂಜಾಬ್ ಮತ್ತು ಹರಿಯಾಣ ಗಡಿಗಳಲ್ಲಿ ಪ್ರತಿಭಟನಾನಿರತ ಸುಮಾರು 752 ಮಂದಿ ರೈತರು ಸಾವಿಗೆ ಶರಣಾದರು. ಇದು ಮೋದಿ ಸರ್ಕಾರದ ವ್ಯವಸ್ಥಿತ ಕೊಲೆ.‌ ದುಡಿಯುವ ವರ್ಗದ ಕಾರ್ಮಿಕರ ಸಮಯವನ್ನು 8-12 ಗಂಟೆಗಳಿಗೆ ಹೆಚ್ಚಿಲಾಗಿದೆ. ಇಂತಹ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ದೇಶದ ಜನತೆಗೆ ಯಾವುದೇ ಭದ್ರತೆ ನೀಡಲು ಸಾಧ್ಯವಿಲ್ಲ.‌ ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂಬುದು ನಮ್ಮೆಲ್ಲರ ಬೇಡಿಕೆಯಾಗಿದೆ” ಎಂದರು.

ತುಮಕೂರು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಉಪಾಧ್ಯಕ್ಷ ಎಸ್ ಟಿ ಶ್ರೀನಿವಾಸ್ ಮಾತನಾಡಿ, “ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಧೋರಣೆ ಅನುಸರಿಸುತ್ತಿದೆ.‌ ಎನ್‌ಡಿಆರ್‌ಎಫ್ ಹಾಗೂ ಜಿಎಸ್‌ಟಿ ಪಾಲು ಕುರಿತು ಚರ್ಚಿಸಲು ಆಹ್ವಾನಿಸಿದರೆ ವಿತ್ತ ಮಂತ್ರಿಗಳು ಗೈರಾಗುವ ಮೂಲಕ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ಒಪ್ಪಿಕೊಂಡಿದ್ದಾರೆ. ಭದ್ರ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ₹5,300 ಕೋಟಿ ನೀಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಈವರೆಗೂ ನಯಾ ಪೈಸೆ ನೀಡಿಲ್ಲ. ಇಂತಹ ಜನ ವಿರೋಧಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದು ಸ್ವತಹಃ ನಾವೇ ನೇಣಿಗೆ ಶರಣಾದಂತೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದಿಂದ ಲಕ್ಷ್ಮಣ ಜಡಗನ್ನವರ ಸ್ಪರ್ಧೆ

ಮುಖಂಡರುಗಳಾದ ಎಸ್ ನಾಗಣ್ಣ, ವಿರೂಪಾಕ್ಷ ಡ್ಯಾಗೇರಹಳ್ಳಿ, ಪ್ರತಾಪ್, ನರಸಿಂಹಣ್ಣ, ಕೊಳಗೇರಿ ನರಸಿಂಹಮೂರ್ತಿ, ಆರ್ ಕಾಮರಾಜು, ಮೈಲಪ್ಪ, ಜೋಸೆಫ್, ಎಣ್ಣೆಗೆರೆ ವೆಂಕಟರಾಮಯ್ಯ, ಡಾ ರಫೀಕ್ ಅಹಮದ್ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...