ತುಮಕೂರು | ಕೋಮುವಾದಿ ಪಕ್ಷ ಸೋಲಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ: ಎದ್ದೇಳು ಕರ್ನಾಟಕದ ಜಿಲ್ಲಾ ಸಂಚಾಲಕಿ ಇಂದಿರಾ

Date:

ದೇಶದ ಜನಸಾಮಾನ್ಯರ ಬದುಕು ಹಾಗೂ ಭವಿಷ್ಯವನ್ನು ತೀರ್ಮಾನಿಸುವ ಲೋಕಸಭಾ ಚುನಾವಣೆಗೆ ದಿನಗಣನೆಗಳು ಪ್ರಾರಂಭವಾಗಿವೆ. ಇಂತಹ ಸಂದರ್ಭದಲ್ಲಿ ಕೋಮುವಾದಿ ಪಕ್ಷವನ್ನು ಸೋಲಿಸಿ ಪ್ರಜಾಪ್ರಭುತ್ವ ಗೆಲ್ಲಿಸದಿದ್ದರೆ ಭವಿಷ್ಯದಲ್ಲಿ ಚುನಾವಣೆ ಮತ್ತು ಚಳವಳಿಗಳಿಗೆ ಅವಕಾಶವಿರುವುದಿಲ್ಲ ಎಂದು ಎದ್ದೇಳು ಕರ್ನಾಟಕದ ಜನಸಂಘಟನೆಯ ತುಮಕೂರು ಜಿಲ್ಲಾ ಸಂಚಾಲಕಿ ಇಂದಿರಾ ಅಭಿಪ್ರಾಯಪಟ್ಟರು.

ತಿಪಟೂರಿನ ರೋಟರಿ ಭವನದಲ್ಲಿ ನಡೆದ ಎದ್ದೇಳು ಕರ್ನಾಟಕ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನಡೆದ ‘ಸಮಕಾಲೀನ ಬಿಕ್ಕಟ್ಟು ಮತ್ತು ರಾಜಕೀಯ ನಡೆ’ ಎಂಬ ವಿಚಾರವಾಗಿ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

“ಎದ್ದೇಳು ಕರ್ನಾಟಕದ ಮುಖ್ಯ ನರೇಟಿವ್ ರಾಷ್ಟ್ರಮಟ್ಟದಲ್ಲಿ ನಮ್ಮ ಧ್ವನಿ ಆಲಿಸುವಂತಹ ಪಕ್ಷ ರಾಷ್ಟ್ರಪ್ರಭುತ್ವ ಸ್ಥಾಪಿಸಬೇಕು ಎನ್ನುವುದಾಗಿದೆ. ಒಂದು ವೇಳೆ ನಮ್ಮ ಆಯ್ಕೆ ತಪ್ಪಾದರೆ ಮುಂದಿನ ಯುವ ಪೀಳಿಗೆಯ ಭವಿಷ್ಯದ ಜೀವನ ಕಷ್ಟದ ಪರಿಸ್ಥಿತಿಯಲ್ಲಿರುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎದ್ದೇಳು ಕರ್ನಾಟಕ 1 1

“ಈಗ ಬೆಲೆ ಏರಿಕೆ, ನಿರುದ್ಯೋಗ, ಅಸಮಾನತೆ, ಭೂತಗಳು ಕುಣಿದು ಕುಪ್ಪಳಿಸುತ್ತಿವೆ. ಅಂತಹ ವಿಚಾರಗಳನ್ನು ಪಕ್ಕಕ್ಕೆ ಇಟ್ಟು ಆಡಳಿತ ನಡೆಸುತ್ತಿರುವ ಪಕ್ಷ, ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು ರೈತರ ಸಾಲ ಮನ್ನಾ ಮಾಡದೆ ಕಾರ್ಪೊರೇಟ್ ವಲಯದ ಸಾಲವನ್ನು ಮನ್ನಾ ಮಾಡಿದೆ. ಶಿಕ್ಷಣಕ್ಕೆ ಸಿಗಬೇಕಾದ ಸೂಕ್ತ ಅನುದಾನ ಸಿಗದ ಕಾರಣ ಶಿಕ್ಷಣದ ಮಹತ್ವ ಕುಸಿಯುವಂತಾಗಿದೆ. ಜನಾಂಗೀಯ ದಾಳಿ, ಅಲ್ಪಸಂಖ್ಯಾತರ ಚರ್ಚ್, ಮಸೀದಿಗಳ ಮೇಲೆ ದಾಳಿ, ಮಹಿಳೆಯರ ಮೇಲಿನ ದಾಳಿ, ಮುಸ್ಲಿಮರ ವ್ಯಾಪಾರ ನೀತಿಯ ಮೇಲೆ ದಾಳಿ, ಮಣಿಪುರದ ಜನಾಂಗೀಯ ದಾಳಿ, ಸಾಕ್ಷಿ ಮಲ್ಲಿಕ್ ಅವರ ಜೀವನದ ಭವಿಷ್ಯದ ಮೇಲೆ ದಾಳಿ ನಡೆದರೂ ಕೂಡಾ ನ್ಯಾಯ ಕೊಡಬೇಕಾದವರು ಮಾತನಾಡುತ್ತಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲ ಸಂಸದರು ಅನ್ಯಾಯದ ವಿರುದ್ಧ ತುಟಿ ಬಿಚ್ಚುತ್ತಿಲ್ಲ. ಕೇಂದ್ರ ತನ್ನ ಪಾರಮ್ಯತೆ ಮೆರೆದು ಜನಸಾಮಾನ್ಯರ ಜೀವನಕ್ಕೆ ಬೆಲೆ ಇಲ್ಲ ಎಂಬಂತೆ ವರ್ತಿಸುತ್ತಿದೆ. ಆದ್ದರಿಂದ ಈ ಬಾರಿ ಸರಳತೆ ಮತ್ತು ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿರುವ ಮುದ್ದಹನುಮೇಗೌಡರಿಗೆ ಮತ ನೀಡಬೇಕು” ಎಂದು ಕರೆ ನೀಡಿದರು.

ಎದ್ದೇಳು ಕರ್ನಾಟಕ 2 1ಎದ್ದೇಳು ಕರ್ನಾಟಕ 3 1

ಕಾಂಗ್ರೆಸ್ ಮುಖಂಡ ಟೂಡ ಶಶಿಧರ್ ಮಾತನಾಡಿ, “ತಾಯಿಹೃದಯ ಹೊಂದಿರುವ ಮುದ್ದಹನುಮೆಗೌಡರು ತಿಪಟೂರಿನ ಕಲ್ಪತರು ನಾಡಿನ ಜನತೆಗೆ ಎತ್ತಿನಹೊಳೆಯ ಭೂಸ್ವಾಧೀನ ಮಾಡುವಾಗ ಆಗಿರುವ ಅನ್ಯಾಯವನ್ನು ಸರಿಪಡಿಸುತ್ತಾರೆ ಹಾಗೂ ಬಗರ್ ಹುಕುಂ ಕಮಿಟಿ ನ್ಯಾಯಯುತವಾಗಿ ಕೆಲಸ ಮಾಡುವಂತೆ ಸಲಹೆ ನೀಡುತ್ತಾರೆ. ಅಲ್ಲದೆ ಎತ್ತಿನಹೊಳೆಯಿಂದ ತಾಲೂಕಿಗೆ ಸಿಗಬೇಕಾದ ನೀರನ್ನು ದೊರಕಿಸಿಕೊಡುತ್ತಾರೆಂಬ ಭಾವನೆಯಿಂದ ಅವರಿಗೆ ಬೆಂಬಲ ಸೂಚಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜನರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ ಬದಲಾವಣೆ ಸಾಧ್ಯ: ಕಾಂಗ್ರೆಸ್‌ ಅಭ್ಯರ್ಥಿ

ತುಮಕೂರಿನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಮಾತನಾಡಿ, “ರೈತ ಸಾಲಗಾರನಾಗಿ ಸಾಯಬಾರದು. ಇಲ್ಲಿ ಬೆಳೆಯುವ ತೆಂಗಿಗೆ ನಾನು ಒಳ್ಳೆಯ ಬೆಲೆ ಕೊಡಿಸುತ್ತೇನೆ. ಅಲ್ಲದೆ ನಾಫೆಡ್ ಅಧಿಕಾರಿಗಳು ಮನೆಯ ಬಾಗಿಲಿಗೆ ಬಂದು ಕೊಬ್ಬರಿ ಕೊಳ್ಳುವಂತೆ ಮಾಡುತ್ತೇನೆ. ಇಂತಹ ಸೇವೆಗಳನ್ನು ಬೇಗ ಅನುಷ್ಠಾನಗೊಳಿಸಲು ತಾಲೂಕಿನ ಜನತೆ ನನಗೆ ಹೆಚ್ಚಿನ ಮತಗಳನ್ನು ನೀಡಿ ನನ್ನ ʼಕೈʼ ಬಲಪಡಿಸಬೇಕು” ಎಂದು ಮನವಿ ಮಾಡಿದರು.

ವೇದಿಕೆಯಲ್ಲಿ ರೈತ ಸಂಘದ ನಾಯಕರುಗಳಾದ ತಿಮ್ಲಾಪುರ ದೇವರಾಜು ಹಾಗೂ ಕೆರಗೋಡಿ ಚನ್ನಬಸಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...