ತುಮಕೂರು | ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಒತ್ತಾಯ

Date:

ಪ್ರಸಕ್ತ ಸಂಸತ್‌ ಅಧಿವೇಶನದಲ್ಲಿ ನೈಸರ್ಗಿಕ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದ ಕಾರ್ಯಕರ್ತರು ತುಮಕೂರು ಲೋಕಸಭಾ ಸದಸ್ಯ ಜಿ ಎಸ್‌ ಬಸವರಾಜು ಅವರಿಗೆ ಮನವಿ ಸಲ್ಲಿಸಿದರು.

ಕೊಬ್ಬರಿಯ ಬೆಲೆ ತೀವ್ರವಾಗಿ ಕುಸಿದಿದ್ದು, ತೆಂಗು ಬೆಳೆಗಾರರು ಸಂಕಷ್ಟದಲ್ಲಿರುವುದರಿಂದ ಸಮಸ್ಯೆಯನ್ನು ಬಗೆಹರಿಸುವಂತೆ ಹಕ್ಕೊತ್ತಾಯಗಳನ್ನು ಕೇಂದ್ರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.

“ವಿಶ್ವಾದ್ಯಂತ ಪ್ರಸಿದ್ಧವಾಗಿರುವ ಉಂಡೆ ಕೊಬ್ಬರಿಯ ಬೆಲೆ ₹7,000ಕ್ಕೆ ಕುಸಿದಿದೆ. ಕರ್ನಾಟಕದಲ್ಲಿ 2:18 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುವ ಕೊಬ್ಬರಿಯನ್ನು ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಬೆಲೆ ಕುಸಿತ ಬೆಳೆಗಾರರಿಗೆ ತೀವ್ರ ಸಂಕಷ್ಟ ಉಂಟು ಮಾಡಿದೆ. 2.18 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿಯಲ್ಲಿ 1.75 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಇನ್ನೂ ರೈತರ ಬಳಿಯೇ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖರೀದಿ ಕೇಂದ್ರದಲ್ಲಿ ಖರೀದಿಯನ್ನು ಆಗಸ್ಟ್ 25 ರವರೆಗೆ ವಿಸ್ತರಿಸುವುದು ಸ್ವಾಗತಾರ್ಹ. ಆದರೆ ಅಷ್ಟರಲ್ಲಿ ಕೊಬ್ಬರಿ ತರಲು ರೈತರಿಗೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಕನಿಷ್ಟ ಇನ್ನೂ ಮೂರು ತಿಂಗಳು ವಿಸ್ತರಿಸಬೇಕು. ಜೊತೆಗೆ ನೋಂದಣಿ ಮಾಡಲು ಸಾಧ್ಯವಾಗದ ರೈತರು ಸಾಕಷ್ಟು ಸಂಖ್ಯೆಯಲ್ಲಿರುವುದರಿಂದ ನೋಂದಣಿಯನ್ನು ಮತ್ತೆ ಆರಂಭಿಸಬೇಕು. ರಾಜ್ಯ ಸರ್ಕಾರ ಚಳವಳಿಯ ಒತ್ತಡದಿಂದ ₹1,250 ಪ್ರೋತ್ಸಾಹ ಧನ ನೀಡುತ್ತಿರುವುದು ಸಂತೋಷದ ಸಂಗತಿ. ಆದರೆ ಅದು ಪೂರ್ವಾನ್ವಯವಾಗುವುದಿಲ್ಲ. ಹಾಗಾಗಿ ಕೊಬ್ಬರಿ ಖರೀದಿಯನ್ನು ಮುಂದುವರೆಸದಿದ್ದರೆ ರೈತರಿಗೆ ಯಾವ ಅನುಕೂಲವೂ ಆಗುವುದಿಲ್ಲ” ಎಂದರು.

“ಡಾ.ಸ್ವಾಮಿನಾಥನ್ ವರದಿಯಂತೆ ಉತ್ಪಾದನಾ ವೆಚ್ಚಕ್ಕೆ ಶೇ.50 ರಷ್ಟು ಸೇರಿಸಿ ವೈಜ್ಞಾನಿಕ ಬೆಲೆಯನ್ನು ನಿಗದಿಪಡಿಸಬೇಕಿತ್ತು. ಆದರೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆ ₹16,730 ನಿಗದಿಪಡಿಸಬೇಕೆಂದು ಶಿಫಾರಸು ಮಾಡಿರುವುದನ್ನೂ ಗಣನೆಗೆ ತೆಗೆದುಕೊಂಡಿಲ್ಲ. ಕೇವಲ ₹11,750ಕ್ಕೆ ಸೀಮಿತವಾಗಿದೆ. ಜೊತೆಗೆ ರೈತರು ಬೆಳೆದ ಎಲ್ಲ ಬೆಳೆಯನ್ನು ತೆಗೆದುಕೊಳ್ಳದೆ ಕೇವಲ ಶೇ.25 ರಷ್ಟು ಮಾತ್ರ ಖರೀದಿ ಮಾಡುವುದರಿಂದ ರೈತರು ದಲ್ಲಾಳಿಗಳ ಬಲೆಗೆ ಬೀಳುವಂತಾಗಿದೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ಖರೀದಿಸುವಷ್ಟು ಪ್ರಮಾಣದ ಕೊಬ್ಬರಿಯನ್ನು ರೈತರಿಂದ ಕೊಳ್ಳಲು ಅಗತ್ಯವಿರುವಷ್ಟು ಖರೀದಿ ಕೇಂದ್ರಗಳಿಲ್ಲ. ಕೊಬ್ಬರಿ ದಾಸ್ತಾನು ಮಾಡಲು ವ್ಯವಸ್ಥೆಗಳಿಲ್ಲ. ಇದರಿಂದಾಗಿಯೂ ರೈತರು ಖರೀದಿ ಕೇಂದ್ರದಲ್ಲಿ ಮಾರಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸೂಕ್ತ ನಫೆಡ್ ಮಾರ್ಗಸೂಚಿಗಳಿಲ್ಲ. ತೆಂಗಿನ ಉತ್ಪನ್ನಗಳನ್ನು ಆಹಾರ ಪದಾರ್ಥಗಳನ್ನು ಮತ್ತು ಸೋಪು, ಡಿಟರ್ಜೆಂಟ್, ಶಾಂಪೂ, ಸಿಂಥೆಟಿಕ್ ರಬ್ಬರ್, ಗ್ಲಿಸರೀನ್ ತಯಾರಿಸಲು ಉಪಯೋಗಿಸುತ್ತಾರೆ. ಅಲ್ಲದೆ ಅಲಂಕಾರಿಕ ವಸ್ತುಗಳು, ವೈದ್ಯಕೀಯ ಹಾಗೂ ಇನ್ನಿತರ ಉದ್ದೇಶಗಳಿಗೆ ಉಪಯೋಗಿಸುತ್ತಾರೆ. ಆದರೆ ಸರ್ಕಾರ ಪರ್ಯಾಯವಾಗಿ ಬಳಸಬಹುದಾದ ಅಗ್ಗದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ತೆಂಗಿನ ಉತ್ಪನ್ನಗಳಿಗೆ ಬೇಡಿಕೆ ಇಳಿಮುಖವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕೊಬ್ಬರಿಗೆ ಪ್ರತಿ ಕ್ವಿಂಟಾಲ್‌ಗೆ ₹20,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು. ಎಳನೀರು ಮತ್ತು ತೆಂಗಿನಕಾಯಿಗೂ ಕನಿಷ್ಠ ಬೆಂಬಲ ಬೆಲೆ ನಿಗಿಪಡಿಸಬೇಕು. ಪ್ರಮಾಣ ಮಿತಿ ಹೇರದೇ ತೆಂಗಿನ ಉತ್ಪನ್ನವನ್ನು ಸಂಪೂರ್ಣವಾಗಿ ಖರೀದಿಸಬೇಕು ಮತ್ತು ಅದಕ್ಕೆ ಅವಶ್ಯಕತೆಯಿರುವಷ್ಟು ಹಣ ಬಿಡುಗಡೆ ಮಾಡಬೇಕು. ಮುಕ್ತ ಮಾರುಕಟ್ಟೆಯಡಿಯಲ್ಲಿ ತೆಂಗಿನ ಉತ್ಪನ್ನ ಮತ್ತು ಖಾದ್ಯತೈಲ ಆಮದನ್ನು ಕೂಡಲೇ ನಿಲ್ಲಿಸಬೇಕು. ಕೇಂದ್ರ ಸರ್ಕಾರದ ಎಣ್ಣೆ ಉಪಯೋಗಿಸುವ ಕಾರ್ಖಾನೆಗಳು ಹಾಗೂ ಸಂಸ್ಥೆಗಳು ತೆಂಗಿನೆಣ್ಣೆಯನ್ನು ಉಪಯೋಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಆಯ್ಕೆಗೆ ಅರ್ಜಿ ಆಹ್ವಾನ

“ಪೂರ್ಣ ಪ್ರಮಾಣದ ಖರೀದಿಯನ್ನು ದಾಸ್ತಾನು ಮಾಡಲು ಬೃಹತ್ ಗೋಡೋನ್‌ಗಳನ್ನು ಮತ್ತು ಬಹಳ ಕಾಲ ಕಾಪಾಡಲು ಶೀತಲೀಕರಣ ವ್ಯವಸ್ಥೆಯನ್ನು ಮಾಡಬೇಕು. ಖರೀದಿ ಕೇಂದ್ರವನ್ನು ವರ್ಷವಿಡೀ ತೆರೆದು, ನಿರಂತರವಾಗಿ ಕೊಬ್ಬರಿ ಖರೀದಿಸಬೇಕು ಮತ್ತು ಅದಕ್ಕೆ ತಕ್ಕಂತೆ ನಫೆಡ್ ಮಾರ್ಗಸೂಚಿಗಳನ್ನು ರೂಪಿಸಬೇಕು. ಜೀವ ಪರಿಸರಾತ್ಮಕ, ವಾಯುಗುಣ ವೈಪರೀತ್ಯ ತಾಳಿಕೆ ಕೃಷಿ ಪದ್ಧತಿಯನ್ನು ರೂಪಿಸಿ ಜಾರಿಗೊಳಿಸಬೇಕು. ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಮೌಲ್ಯವರ್ಧಿತ ತೆಂಗಿನ ಉತ್ಪನ್ನಗಳಾದ ನಾರು, ಚಿಪ್ಪು, ನೀರಾ, ಇದ್ದಿಲು, ಎಳನೀರು, ತಿರುಳು, ಮರ, ಗರಿಗಳನ್ನು ತಯಾರಿಸುವ ಕಾರ್ಖಾನೆಗಳಿಗೆ ಪ್ರೋತ್ಸಾಹ ಕೊಡಬೇಕು ಮತ್ತು ಅದನ್ನು ಮಾರುಕಟ್ಟೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿಯ ಕಾರ್ಯಕರ್ತರು, ಬಹುತೇಕ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...