ತುಮಕೂರು | ಸಮಾಜವಿದ್ರೋಹಿ ಶಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ, ಪ್ರಗತಿಪರ ಸಂಘಟನೆಗಳ ಆಗ್ರಹ

Date:

ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಸಮಾಜವಿದ್ರೋಹಿ, ವಿಚ್ಚೀದ್ರಕಾರಿ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ,ಪ್ರಗತಿಪರ,ಕಾರ್ಮಿಕ ಹಾಗೂ ಅಲ್ಪಸಂಖ್ಯಾತರ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ.ಅವರಿಗೆ ಪ್ರಗತಿಪರ ಚಿಂತಕ ಕೆ.ದೊರೆರಾಜು ನೇತೃತ್ವದಲ್ಲಿ ಹತ್ತಾರು ಜನರು ನಿಯೋಗ ತೆರಳಿ ಮನವಿ ಸಲ್ಲಿಸಿದರು.

ಗಣೇಶ ಚತುರ್ಥಿ ಮತ್ತು ಇದ್ ಮಿಲಾದ್ ಹಬ್ಬದ ಅಂಗವಾಗಿ ಕರೆದಿದ್ದ ಶಾಂತಿ ಸಭೆಯಲ್ಲಿ ಕೈಗೊಂಡು ನಿರ್ಣಯವನ್ನು ಉಲ್ಲಂಘನೆ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ನಗರದಲ್ಲಿ ಇತ್ತೀಚಗೆ ನಡೆದ ಕೆಲ ಘಟನೆ ಪ್ರಚೋದನಕಾರಿಯಾಗಿದೆ.ಸೆಪ್ಟಂಬರ್ 15ರ ವಿಶ್ವ ಪ್ರಜಾಪ್ರಭುತ್ವದಿನ ನಗರದ ಬಿಜಿಎಸ್ ವೃತ್ತದಲ್ಲಿ ಕಾರ್ಯಕ್ರಮ ನಡೆಯುವ ವೇಳೆ, ನಾಗರಕಟ್ಟೆ ಬಳಿ ಸ್ಥಾಪಿಸಿರುವ ಗಣಪತಿ ಪೆಂಡಾಲ್‌ನಲ್ಲಿ ಜೋರಾಗಿ ಮೈಕ್ ಹಾಕಿ ಸರಕಾರದ ಕಾರ್ಯಕ್ರಮಕ್ಕೂ ತೊಂದರೆ ನೀಡಲಾಗಿದೆ.ಅಲ್ಲದೆ ಇದ್ ಮಿಲಾದ್ ಚಾಂದಿನಿ ಮೆರವಣಿಗೆ ವೇಳೆಯೂ ಕೆಲವರು ಪ್ರಚೋದಿಸುವ ಕೆಲಸ ಮಾಡಿದ್ದಾರೆ. ಹಾಗಾಗಿ ಇಂತಹ ಸಮಾಜ ವಿದ್ರೋಹಿ ಕೃತ್ಯಗಳನ್ನು ಎಸಗುವವರು ಯಾವುದೇ ಸಮುದಾಯವಾಗಿದ್ದರೂ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದು ಎಸ್.ಪಿ. ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಪ್ರಗತಿಪರ ಚಿಂತಕ ಕೆ.ದೊರೈರಾಜು, ಕರ್ನಾಟಕ ರಾಷ್ಟ್ರಕವಿ ಕುವೆಂಪು ಅವರು ಹೇಳಿದ ರೀತಿ ಸರ್ವ ಜನಾಂಗದ ಶಾಂತಿಯ ತೋಟ. ಕಲ್ಪತರು ನಾಡು ಶಾಂತಿಗೆ ಹೆಸರಾಗಿದೆ.ಸಮಾಜದಲ್ಲಿ ಶಾಂತಿ ಕದಡುವ ಯಾವುದೇ ಸಮಾಜವಿದ್ರೋಹಿ ಶಕ್ತಿಗಳ ವಿರುದ್ದ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ಸಕಾರಾತ್ಮಕವಾಗಿ ನಮ್ಮ ಮನವಿಗೆ ಸ್ಪಂದಿಸಿದ್ದಾರೆ ಎಂದರು.

ಕಾರ್ಮಿಕ ಮುಖಂಡ ಬಿ.ಉಮಶ್ ಮಾತನಾಡಿ, ಭಾರತದ ಸಂವಿಧಾನದ ಅಡಿಯಲ್ಲಿ ಎಲ್ಲ ಸಮುದಾಯಗಳು ತಮ್ಮ ತಮ್ಮ ಧಾರ್ಮಿಕ ಆಚರಣೆಗಳನ್ನು ನಡೆಸಲು ಅವಕಾಶವಿದೆ. ಇನ್ನೊಂದು ಸಮುದಾಯಕ್ಕೆ ನೋವಾಗದ ರೀತಿ ಆಚರಿಸಿದರೆ ಹೆಚ್ಚು ಉತ್ತಮ.ಜನರ ಒಗ್ಗೂಡುವಿಕೆಯಿಂದ ದೇಶದ ಅಭಿವೃದ್ದಿ ಸಾಧ್ಯ. ವಿಘಟನೆಯಿಂದ ಅವನತಿಗೆ ದಾರಿ ಮಾಡಿದಂತಾಗುತ್ತದೆ. ಇದನ್ನು ಎಲ್ಲರೂ ಅರ್ಥಮಾಡಿಕೊಂಡು ನಗರದಲ್ಲಿ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದರು.

ಪರಿಸರವಾದಿ ಸಿ.ಯತಿರಾಜು ಮಾತನಾಡಿ, ಪ್ರಚೋಧನಾಕಾರಿ ಭಾಷಣಗಳಿಂದ ದೇಶಕ್ಕೆ ಉಪಯೋಗವಿಲ್ಲ. ಎಲ್ಲರೂ ಒಗ್ಗೂಡಿ ದೇಶ ಕಟ್ಟುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಸಮಾಜ ವಿದ್ರೋಹಿ ಕೃತ್ಯಗಳಿಗೆ ತಡೆಯೊಡ್ಡುವ ಕೆಲಸ ಆಗಬೇಕೆಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ,ಕೆಲವರು ವಿನಾಕಾರಣ ಜನರನ್ನು ಪ್ರಚೋಧನೆಗೆ ಒಳಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೊಲೀಸರು ಅವಕಾಶ ನೀಡಬಾರದು. ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಮುಸ್ಲಿಂ ಮುಖಂಡರಾದ ತಾಜುದ್ದೀನ್ ಷರೀಫ್ ಮಾತನಾಡಿ,ಸಮಾಜದಲ್ಲಿ ಶಾಂತಿ ನೆಲೆಸಬೇಕು.ಇದು ಎಲ್ಲ ಧರ್ಮಗಳ ತಿರುಳಾಗಿದೆ.ಮುಂಬರುವ ದಿನಗಳಲ್ಲಿ ಮುನ್ನಚ್ಚರಿಕೆಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ.ಸಮಾಜದಲ್ಲಿ ಶಾಂತಿ ನೆಲೆಸಬೇಕು ಎಂಬುದು ನಮ್ಮೆಲ್ಲರ ಉದ್ದೇಶ ಎಂದರು.

ಈ ವೇಳೆ ಮುಖಂಡರಾದ ಕಂಬೇಗೌಡ, ಗಿರೀಶ್, ಸೈಯದ್ ಮುಜೀಬ್, ಕೆ.ನಯಾಜ್ ಅಹಮದ್, ಗೌಸ್‌ಪಾಷ ಷೇಖ್, ಅಕ್ರಮುಲ್ಲಾ ಖಾನ್,ರಫೀಕ್, ಕೊಳಗೇರಿ ಹಿತರಕ್ಷಣಾ ಸಮಿತಿಯ ಅರುಣ್, ಅನುಪಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...