ತುಮಕೂರು | ಅಮಾನಿಕೆರೆ ಕೋಡಿ ನೀರಿನಿಂದ ದಿಬ್ಬೂರು ಜಲಾವೃತ : ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ

Date:

 ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 

ಕೋಡಿ ನೀರಿನಿಂದ 2 ಮನೆಗಳು ಬಿದ್ದಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತ-ವ್ಯಸ್ತವಾಗಿರುವುದನ್ನು ಕಂಡ ಜಿಲ್ಲಾಧಿಕಾರಿಗಳು ಕೂಡಲೇ ಜಲಾವೃತವಾಗಿರುವ ಮನೆಗಳ ಕುಟುಂಬದ ಸದಸ್ಯರನ್ನು ಜಿಲ್ಲಾಡಳಿತದ ವತಿಯಿಂದ ದಿಬ್ಬೂರು ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಅವರಿಗೆ ನಿರ್ದೇಶನ ನೀಡಿದರು. 

1000584107

ಸ್ಥಳದಲ್ಲಿದ್ದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಕಳೆದ 2019 ಹಾಗೂ 2022ರಲ್ಲಿ ಅಮಾನಿಕೆರೆ ಕೋಡಿ ನೀರು ನುಗ್ಗಿ ಇಲ್ಲಿನ ನಿವಾಸಿಗಳ ಜೀವನ ಅಸ್ತ-ವ್ಯಸ್ತವಾಗಿತ್ತು. ಇದೇ ಬಡಾವಣೆಯ ಸರ್ವೇ ನಂಬರ್ 207 ಹಾಗೂ 208ರಲ್ಲಿರುವ ರಾಜಗಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲದ ಕಾರಣ ದಿಬ್ಬೂರು ಬಡಾವಣೆ ಜಲಾವೃತಗೊಂಡಿದೆ. ಅಲ್ಲದೆ ನಗರದಲ್ಲಿರುವ ಮುಖ್ಯ ರಾಜಗಾಲುವೆಗಳು ಒತ್ತುವರಿಯಾಗಿರುವುದರಿಂದಲೂ ಜನರು ಇಂತಹ ಸಮಸ್ಯೆಯನ್ನು ಎದುರಿಸುವ ಸಂದರ್ಭ ಎದುರಾಗಿದೆ. ಈ ನಿಟ್ಟಿನಲ್ಲಿ ರಾಜಗಾಲುವೆ ಒತ್ತುವರಿಯನ್ನು ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000584078

ನಂತರ ಹರಿಯುತ್ತಿದ್ದ ಮಳೆ ನೀರಿನಲ್ಲಿಯೇ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳ ತಂಡ ಜಲಾವೃತಗೊಂಡಿದ್ದ ಮನೆ, ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕಂದಾಯ ಹಾಗೂ ಪಾಲಿಕೆ ವತಿಯಿಂದ ಕೂಡಲೇ ಜಂಟಿ ಸಮೀಕ್ಷೆ ನಡೆಸಿ ಒತ್ತುವರಿಯಾಗಿರುವ ರಾಜಗಾಲುವೆಗಳನ್ನು ತೆರವುಗೊಳಿಸಬೇಕು. ರಾಜಗಾಲುವೆಗಳಲ್ಲಿರುವ ಕಸ-ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ಮಳೆನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕಲ್ಲದೆ, ಮಳೆಯಿಂದ ಯಾವುದೇ ಜೀವಹಾನಿಯಾಗದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

1000584114

ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಮಕೂರಿನ ದೇವರಾಯಪಟ್ಟಣ ಕೆರೆ, ಅಕ್ಕ-ತಂಗಿ ಕೆರೆ, ಸತ್ಯಮಂಗಲ ಕೆರೆ ಸೇರಿದಂತೆ ವಿವಿಧ ಕೆರೆಗಳ ಕೋಡಿ ನೀರಿನಿಂದ ನಗರದ ಅಮಾನಿಕೆರೆ ತುಂಬಿ ಕೋಡಿ ಬಿದ್ದಿದ್ದು, ಹೆಚ್ಚುವರಿ ನೀರು ದಿಬ್ಬೂರು ಮಾರ್ಗವಾಗಿ ಭೀಮಸಂದ್ರ ಕೆರೆಯನ್ನು ತಲುಪುತ್ತದೆ. ಆದರೆ ಮಳೆನೀರಿನ ಪ್ರಮಾಣ ಹೆಚ್ಚಿರುವುದರಿಂದ ಬಡಾವಣೆಗೆ ನೀರು ನುಗ್ಗಿದೆ. ಮಹಾನಗರ ಪಾಲಿಕೆ ವತಿಯಿಂದ ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ರಾಜ ಕಾಲುವೆ ತೆರೆವು ಕಾರ್ಯ ಕೈಗೊಳ್ಳಲಾಗಿದೆ. ಯಾವುದೇ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಡಾವಣೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ. 50ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಮುಂದುವರೆಯುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳ, ಜಿಲ್ಲಾಡಳಿತದಿಂದ ತಾತ್ಕಾಲಿಕವಾಗಿ ತೆರೆದಿರುವ ಗಂಜಿ ಕೇಂದ್ರಗಳಿಗೆ ತೆರಳಬೇಕೆಂದು ಮನವಿ ಮಾಡಿದರು. 

1000584109

ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮಾತನಾಡಿ, ಜಿಲ್ಲೆಯಲ್ಲಿ ಮಳೆ ಆರಂಭಕ್ಕೂ ಮುನ್ನವೇ ರಾಜ ಕಾಲುವೆಗಳ ತೆರವು ಕಾರ್ಯ ಕೈಗೊಳ್ಳಲಾಗಿತ್ತು, ಕೆಲವು ಪ್ರದೇಶಗಳಲ್ಲಿ ರಾಜ ಕಾಲುವೆ ಒತ್ತುವರಿಯಾಗಿದ್ದು, ಜಿಲ್ಲಾಡಳಿತ ಮತ್ತು ಪಾಲಿಕೆಯಿಂದ ಜಂಟಿ ಸರ್ವೇ ಕಾರ್ಯ ಕೈಗೊಂಡು ರಾಜ ಕಾಲುವೆ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಮಳೆಯಿಂದ ನಿರಾಶ್ರಿತರಾದವರಿಗೆ ಗಂಜಿ ಕೇಂದ್ರದಲ್ಲಿ ಹಾಸಿಗೆ-ಹೊದಿಕೆ, ಕುಡಿಯುವ ನೀರು, ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ ಸಣ್ಣಯ್ಯ, ಪಾಲಿಕೆ ಇಂಜಿನಿಯರ್ ವಿನಯ್, ಅಗ್ನಿಶಾಮಕ, ಕಂದಾಯ ಹಾಗೂ ಪಾಲಿಕೆ ಅಧಿಕಾರಿಗಳು ಹಾಜರಿದ್ದರು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...