ತುಮಕೂರು | ದೊಡ್ಡ ಹೊಸೂರು ಸತ್ಯಾಗ್ರಹ ದೇಶದಾದ್ಯಂತ ಹಬ್ಬಲಿ : ಬಸವರಾಜ ಪಾಟೀಲ್ ವೀರಾಪುರ

Date:

ಈಗ ನಾವು ಕಾರ್ಪೋರೇಟ್ಸ್ ರಾಕ್ಷಸರೊಂದಿಗೆ ಹೋರಾಡಬೇಕಿದೆ. ಹಾಗಾಗಿ ಈ ದೊಡ್ಡ ಹೊಸೂರು ಸತ್ಯಾಗ್ರಹ ದೇಶದಾದ್ಯಂತ ಹಬ್ಬಲಿ, ರೈತರ ಜೀವನದಲ್ಲಿ ಹಸನತೆಯನ್ನು ತರಲಿ ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ರಾಷ್ಟ್ರೀಯ ಸಂಯೋಜಕ ಬಸವರಾಜ ಪಾಟೀಲ್ ವೀರಾಪುರ ಹಾರೈಸಿದರು.

ಗಾಂಧೀ ಸಹಜ ಬೇಸಾಯ ಆಶ್ರಮದ ವತಿಯಿಂದ ‘ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಬೇಯರ್ ಮತ್ತು ಮಾನ್ಸೆಂಟೋ ಕಂಪನಿಗಳ ಸಹಯೋಗದಲ್ಲಿ ತರಲು ಹೊರಟಿರುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯನ್ನು ವಿರೋಧಿಸಿ ಹಮ್ಮಿಕೊಂಡಿರುವ ಗ್ರಾಮಾಂತರದ ಹ್ಯಾಂಡ್ ಪೋಸ್ಟ್ ನ ದೊಡ್ಡ ಹೊಸೂರಿನ 3ನೇ ದಿನದ ಸತ್ಯಾಗ್ರಹ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರ ಮನೆಗಳಿಗೆ ಅಪರಿಚಿತರು ದಾರಿತಪ್ಪಿ ಬಂದರೂ ಊಟಕ್ಕೆ ಬಡಿಸಿಯೇ ಕಳುಹಿಸುತ್ತಿದ್ದರು. ಈ ನಮ್ಮ ಸಂಸ್ಕೃತಿಯು ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿದೆ. ವ್ಯಾಪಾರಕ್ಕಾಗಿ ಬಂದಿದ್ದ ಈಸ್ಟ್ ಇಂಡಿಯಾ ಕಂಪನಿಗಳು ಜಾಗತೀಕರಣ ಹಾಗೂ ಉದಾರೀಕರಣದ ಹೆಸರಿನಲ್ಲಿ ಭಾರತವನ್ನು ಮತ್ತೆ ಪ್ರವೇಶಿಸುತ್ತಿವೆ. ನಾವು ದೇಶಿ ಅಸ್ಮಿತೆಯನ್ನು ಉಳಿಸಿಕೊಳ್ಳಲಾರದ ಸ್ಥಿತಿಗೆ ತಲುಪಿದ್ದೇವೆ. ರೈತರ ಮುಗ್ದತೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರಗಳು ಕೃಷಿಯಲ್ಲಿ ಜೀವ ವಿರೋಧಿ ತಂತ್ರಜ್ಞಾನವನ್ನು ಪ್ರಯೋಗ ಮಾಡಿ ದ್ರೋಹ ಎಸಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2024 10 01 at 7.00.52 PM

ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಒಳಗೊಂಡಿರುವ ನಮ್ಮ ಕೃಷಿಯ ಮೂಲ ಉದ್ದೇಶವನ್ನೇ ಉದಾರೀಕರಣ ನೀತಿ ಮರೆಮಾಚಿದೆ. ಕೈಗಾರಿಕಾ ಕ್ರಾಂತಿಯ ದುಷ್ಪರಿಣಾಮದಿಂದಾಗಿ ಕೃಷಿ ಹಣ ಮಾಡುವ ಕ್ಷೇತ್ರವಾಗಿ ಮಾರ್ಪಟ್ಟಿದೆ, ರೈತರೂ ಬಂಡವಾಳಿಗರಾಗಿ ರೂಪುಗೊಳ್ಳುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧುನಿಕತೆಯು ಹಲವು ಸವಾಲುಗಳನ್ನು ಮುಂದಿಟ್ಟಿದೆ. ರೈತರ ಮುಂದೆ ಶ್ರೀಮಂತಿಕೆಯ ಆಶಾಗೋಪುರಗಳನ್ನು ನಿರ್ಮಿಸಲಾಗಿದೆ. ದೇಶದಲ್ಲಿ 82 ರೀತಿಯ ಸಾಸಿವೆ ತಳಿಗಳಿವೆ. ಉತ್ತರ ಭಾರತದಲ್ಲಿ ಅಡುಗೆಗೆ ಪ್ರಧಾನವಾಗಿ ಸಾಸಿವೆ ಎಣ್ಣೆಯನ್ನು ಬಳಸಲಾಗುತ್ತಿದೆ. ಇದನ್ನೇ ಗಮನದಲ್ಲಿಟ್ಟುಕೊಂಡಿರುವ ಕಂಪನಿಗಳು ಸಾಸಿವೆ ಮಾರುಕಟ್ಟೆ ವ್ಯವಸ್ಥೆಯನ್ನು ತಮ್ಮ ವಶ ಮಾಡಿಕೊಳ್ಳಲು ಹೊರಟಿವೆ. ಭಾರತೀಯ ಕೃಷಿಯ ಬೀಜ ಸ್ವಾಮ್ಯ ಸಾಧಿಸಲು ಹಾತೊರೆಯುತ್ತಿರುವ ಕಂಪನಿಗಳು ಈಗ ಕುಲಾಂತರಿ ಸಾಸಿವೆ ಪರಿಚಯಿಸಲು ತುದಿಗಾಲಿನಲ್ಲಿ ನಿಂತಿವೆ ಎಂದರು.

ಮಾನ್ಸೆಂಟೋ ಮತ್ತು ಸಿಂಜೆಂಟಾ ಕಂಪನಿಗಳ ಮುಂದೆ ಕೃಷಿಯ ಮೂಲ ಉದ್ದೇಶವೇ ಗೌಣವಾಗಿದೆ. ಸಣ್ಣ ಸಣ್ಣ ಚಳವಳಿಗಳನ್ನು ರೂಪಿಸುವ ಮೂಲಕ ಇದನ್ನು ತಡೆಯಲು ಸಾಧ್ಯವಿದೆ. ಜನರೂ ಆಹಾರ ಗುಣಮಟ್ಟದ ವಿಚಾರದಲ್ಲಿ ಎಚ್ಚೆತ್ತುಕೊಳ್ಳುತ್ತಿದ್ದು, ಗಾಣದ ಎಣ್ಣೆಯನ್ನು ಬಳಸಲು ಶುರು ಮಾಡಿದ್ದಾರೆ. ಹೀಗಾಗಿ ಜನರ ಮುಂದೆ ಹೋಗಲು ನಮಗೆ ಇನ್ನೂ ಅವಕಾಶವಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಚಿಗುರು ಯುವಜನ ಸಂಘದಿಂದ ‘ಕುಲಾಂತರಿ ತಳಿಯ ಆಹಾರ ತಿರಸ್ಕರಿಸಿ’ ಪೋಸ್ಟರ್ ಅಭಿಯಾನ

ತಂತ್ರಜ್ಞಾನದ ಒಳಿತು, ಕೆಡುಕು ಮನುಷ್ಯನ ಬಳಕೆಯ ಮೇಲೆ ನಿಂತಿದೆ. ಇಂದಿನ ಸರ್ಕಾರಗಳು ಸಂವೇದನಾ ಶೀಲತೆಯನ್ನು ಕಳೆದುಕೊಂಡಿವೆ. ಜನರಿಂದ ಜನರಿಗಾಗಿ ಪ್ರಜಾಪ್ರಭುತ್ವ ಎನ್ನುವ ಬದಲಾಗಿ ಕಾರ್ಪೋರೇಟ್ ಗಳಿಂದ, ಕಾರ್ಪೋರೇಟ್‌ಗಳಿಗಾಗಿ ಆಗಿದೆ. ವಿದೇಶಿ ಕಂಪನಿಗಳ ಒತ್ತಡಕ್ಕೆ ಸರ್ಕಾರಗಳು ಮಣಿಯುತ್ತಿದ್ದು, ರಾಷ್ಟ್ರೀಯವಾದ ಅನುಸರಿಸುತ್ತಿರುವ ನಾಯಕರೂ ಕಂಪನಿಗಳ ಪರವಾಗಿದ್ದಾರೆ ಎಂದು ಮಾರ್ಮಿಕವಾಗಿ ತಿಳಿಸಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಉಡೆ ಪಿ. ಕೃಷ್ಣ ಮಾತನಾಡಿ, ಸರ್ಕಾರಗಳು ಕೃಷಿ ನೀತಿಗಳನ್ನು ಜಾರಿ ಮಾಡುವ ಮುನ್ನ ರೈತರು ಮತ್ತು ವಿಜ್ಞಾನಿಗಳನ್ನು ಮುಖಾಮುಖಿ ಮಾಡಿ ಸಾಧಕ ಬಾಧಕಗಳ ಕುರಿತು ಚರ್ಚಿಸಬೇಕು ಎಂದರಲ್ಲದೆ, ತಲತಲಾಂತರಗಳಿಂದ ಬಂದಿರುವ ಕೃಷಿ ಹಾಗೂ ಅದರ ಪ್ರಾಮುಖ್ಯತೆಯನ್ನು ನಾಶಮಾಡಲಾಗುತ್ತಿದೆ. ಇದರ ವಿರುದ್ಧ ಕರ್ನಾಟಕ ಮೊದಲು ಜಾಗೃತವಾದರೆ ಇತರೆ ರಾಜ್ಯಗಳಿಗೂ ವ್ಯಾಪಿಸಲು ಅನುಕೂಲವಾಗಲಿದೆ. ನಾವು ಗಾಂಧಿ ಮಾರ್ಗದಲ್ಲಿ ಸಾಗಿದರೆ ಯಶಸ್ಸು ನಮ್ಮದಾಗಲಿದೆ ಎಂದು ಅವರು ಸಲಹೆ ನೀಡಿದರು.

ಕುಲಾಂತರಿ ಮುಕ್ತ ಭಾರತ ಸತ್ಯಾಗ್ರಹಕ್ಕೆ ಮಠಮಾನ್ಯಗಳು, ಕನ್ನಡಪರ ಸಂಘಟನೆಗಳು, ಕೃಷಿ ಉತ್ಪನ್ನ ಬಳಕೆದಾರರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಶ್ಚಿಮಘಟ್ಟ ಉಳಿಸಿ ಆಂದೋಲದ ಸಿ.ಪಿ ಮಾಧವನ್, ಪರಿಸರ ಹೋರಾಟಗಾರ ಬಾಲಕೃಷ್ಣ, ಗಾಂಧಿವಾದಿ ದೊರೆಸ್ವಾಮಿ ಹಾಗೂ ಪರಿಸರವಾದಿ ಸಿ. ಯತಿರಾಜು, ಕೃಷಿ ವಿಜ್ಞಾನಿ ಡಾ.ಮಂಜುನಾಥ್, ಹೋರಾಟಗಾರ್ತಿ ಶಂಕರಕೃಷ್ಣ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...