ತುಮಕೂರು | ಹೃದಯದ ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ : ಡಾ. ತಮಿಮ್ ಅಹಮದ್

Date:

 ಗ್ರಾಮೀಣ ಪ್ರದೇಶದ ಸಾಮಾನ್ಯ ಜನರಿಗೆ ಹೃದಯ ಸಂಬಂಧಿತ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವನ್ನಪ್ಪುತ್ತಿದ್ದಾರೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಆಸ್ಪತ್ರೆ ಕಾಡಿಯಾಕ್ ಸೆಂಟರ್ ಖ್ಯಾತ ಹೃದ್ರೋಗ ತಜ್ಞ ಡಾ. ತಮಿಮ್ ಅಹಮದ್ ಅಭಿಪ್ರಾಯಪಟ್ಟರು.

 ತುಮಕೂರು ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್‌ನ ಡಾ. ಜಿ.ಪಿ ನೆಕ್ಸಸ್ ಸಭಾಂಗಣದಲ್ಲಿ ನಿನ್ನೆ ಇಂಟರ್ನಲ್ ಕ್ವಾಲಿಟಿ ಅಶುರೆನ್ಸ್ ಸೆಲ್ ಏರ್ಪಡಿಸಲಾಗಿದ್ದ ಡಾ. ಹೆಚ್.ಎಂ ಗಂಗಾಧಾರಯ್ಯ ಸ್ಮರಣಾರ್ಥ ಉಪನ್ಯಾಸ ಮಾಲಿಕೆಯಲ್ಲಿ ಸಾಮಾನ್ಯ ಹೃದಯ ರೋಗಗಳ ಚಿಕಿತ್ಸೆ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಡಾ.ತಮೀಮ್ ಅಹಮ್ಮದ್ ಮಾತನಾಡಿದರು. 

 ಸಾಮಾನ್ಯ ಜನರು ಹೃದಯ ರೋಗ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಪರದಾಡುತ್ತಿರುತ್ತಾರೆ. ಇಂತಹ ಸಂದಿಗ್ದ ಸ್ಥಿತಿಯಲ್ಲಿ ಅವರಿಗೆ ಸಹಾಯ ಮಾಡಬೇಕೆಂಬುದು ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆಯ ಹೆಬ್ಬಯಕೆಯಾಗಿದೆ. ಜನ ಸಾಮನ್ಯರಿಗೆ ಸಿದ್ಧಾರ್ಥ ಕಾಡಿಯಾಕ್ ಸೆಂಟರ್ ಧನ್ವಂತರಿ ಚಿಕಿತ್ಸೆಯಾಗಿ ಪರಿಣಮಿಸಿದೆ. ಮನುಷ್ಯ ಇಂದು ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಗೆ ಒಗ್ಗಿ ಕೊಳ್ಳುತ್ತಿದ್ದು ಸಣ್ಣ ಸಣ್ಣ ವಯಸ್ಸಿನ ಮಕ್ಕಳಿಗೂ, ವಯಸ್ಕರಿಗೆ ಹೃದಯ ಸಂಬಂಧಿತ ಕಾಯಿಲೆಗಳು ಕಾಡುತ್ತಿವೆ. ಇದಕ್ಕಾಗಿ ನಮ್ಮಲ್ಲಿ ಪರಿಹಾರಗಳಿದೆ. ಹಾರ್ಟ್ ಅಟ್ಯಾಕ್ ಬರುವ ಮುನ್ನ ಅನೇಕ ಮುನ್ಸೂಚನೆಗಳು ಕಾಣಬರುತ್ತವೆ. ಇದರಿಂದ ಎಚ್ಚರಿಕೆ ವಹಿಸಿ ವೈದ್ಯರ ಭೇಟಿ ಮಾಡಿ ಸೂಕ್ತ ಪರಿಹಾರ ಪಡೆದುಕೊಳ್ಳುವುದು ಅವಶ್ಯಕತೆ ಎಂದು ಕಿವಿ ಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001748504

 ಕಾರ್ಡಿಯಾಕ್ ಸೆಂಟರ್ ನಲ್ಲಿ ಅತ್ಯಾಧುನಿಕ ಚಿಕಿತ್ಸಾ ವಿಧಾನಗಳನ್ನು ಕಂಡುಕೊಳ್ಳಲಾಗಿದ್ದು ರಾಜ್ಯದ ವಿವಿಧ ಮೂಲೆಗಳಲ್ಲಿ ಹೃದಯ ಸಂಬಂಧಿತ ಕಾಯಿಲೆಗೆ ದೊರೆಯುವ ಚಿಕಿತ್ಸೆ ಗಿಂತ ಉತ್ತಮ ಪಟ್ಟು ಚಿಕಿತ್ಸೆ ಇಲ್ಲಿ ನೀಡಲಾಗುತ್ತಿದ್ದು ನಮ್ಮಲ್ಲಿ ಹೃದಯದ ಬೈಪಾಸ್ ಶಸ್ತ್ರ ಚಿಕಿತ್ಸೆ ಒಳಗಾದವರು ಕೇವಲ 15 ನಿಮಿಷದಲ್ಲಿ ಗುಣಮುಖರಾಗಿ ಹೊರ ಹೊಮ್ಮುತ್ತಾರೆ. ಈ ವಿಚಾರ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಲ್ಲಿ ಚರ್ಚೆಯಲ್ಲಿದೆ ಇಂತಹ ಸಂಶೋಧನಾತ್ಮಕ ಚಿಕಿತ್ಸಾ ವಿಧಾನಗಳನ್ನು ಕಂಡುಕೊಂಡಿರುವುದು ನಮ್ಮ ಪುಣ್ಯವೆಂದು ಭಾವಿಸಿದ್ದೇನೆ. ಈ ಚಿಕಿತ್ಸಾ ವಿಧಾನ ಜನಸಾಮಾನ್ಯರಿಗೆ ದೊರೆತಾಗ ಅದು ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

 ಎಸ್ಎಸ್ಐಟಿ ಪ್ರಾಂಶುಪಾಲ ಡಾ ರವಿಪ್ರಕಾಶ್ ಮಾತನಾಡಿ, ಹೃದಯ ಸಂಬಂಧಿತ ವಿಚಾರವಾಗಿ ಅನೇಕ ಮಾಹಿತಿಗಳನ್ನು ಡಾ. ತಮ್ಮಿಮ್ ಅಹಮ್ಮದ್ ಅವರು ತಿಳಿಸಿಕೊಟ್ಟಿದ್ದು ಇದರಿಂದ ಪ್ರಾಧ್ಯಪಕರಿಗೆ ಉಪಯುಕ್ತ ಮಾಹಿತಿ ದೊರಕಿದೆ ಎಂದರು.  

 ಕಾರ್ಯಗಾರದಲ್ಲಿ ವಿವಿಧ ವಿಭಾಗದ ಅಧ್ಯಾಪಕರು ಹೃದಯ ಸಂಬಂಧಿತ ಕಾಯಿಲೆಗೆ ಬಗ್ಗೆ ಕೇಳಿದ ಪ್ರಶ್ನೆಗೆ ಡಾ. ತಮಿಮ್ ಅಹಮ್ಮದ್ ಅವರು ಉತ್ತರಿಸಿ ಪರಿಹಾರ ನೀಡಿದರು.

 ಇದೇ ಸಂದರ್ಭದಲ್ಲಿ ಡೀನ್ ಡಾ ರೇಣುಕಾಲತಾ, ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ ಡಾ. ರವಿರಾಮ್, ಎನ್ ಎಸ್ ಎಸ್ ವಿಭಾಗದ ಡಾ.ರವಿಕಿರಣ್ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...