ತುಮಕೂರು | ಮುಸ್ಲಿಮರ ಹಕ್ಕುಗಳ ಕಸಿದುಕೊಳ್ಳಬೇಡಿ : ತಾಜುದ್ದೀನ್ ಶರೀಫ್

Date:

 ಸಂಸತ್‌‌ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಆರೋಪಿಸಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಅವಮಾನಿಸಲು, ಅವರ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ಭಾರತೀಯ ಸಮಾಜವನ್ನು ವಿಭಜಿಸುವ ಗುರಿ ಹೊಂದಿದ್ದರಿಂದ 2024ರ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕದೆ ರದ್ದುಗೊಳಿಸುವಂತೆ ಒತ್ತಾಯಿಸಿದರು.

ಇಸ್ಲಾಂ ಕಾನೂನಿನ್ವಯ ವಕ್ಫ್ ಎಂದರೆ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೇವರ ಹೆಸರಿನಲ್ಲಿ ಅರ್ಪಿಸಲಾದ ಆಸ್ತಿಯಾಗಿದೆ. ವಕ್ಫ್ ಆದಾಯವನ್ನು ಮಸೀದಿಗಳ ನಿರ್ವಹಣೆ, ಸಮುದಾಯದ ಬಡ ಜನರ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಹೇಳಿದ್ದರು. ಮುಸ್ಲಿಂ ಮಹಿಳೆಯರ ಮತ್ತು ಬಡ ಮುಸಲ್ಮಾನರಿಗಾಗಿ ಈ ತಿದ್ದುಪಡಿ ಎನ್ನುವರ ಪಾರ್ಟಿಯಲ್ಲಿ ಒಂದು ಮಹಿಳೆ ಸಂಸದೆ ಇಲ್ಲ ಬಡ ಮುಸಲ್ಮಾನರಿಗೆ ಜಾತ್ರೆ, ದೇವಸ್ಥಾನ, ಅಂಗಡಿ ಮುಗ್ಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ವಿರೋಧಿಸುವವರು ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಮಾತನಾಡುತ್ತಿರುವುದು ಯಾವ ಹುನ್ನಾರ ಎಂದು ತಿಳಿಯಬೇಕು ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಸೂಚಿ ಭಾಗವಾಗಿದೆ. ದೇಶದ ಸುಮಾರು 20 ಕೋಟಿ ಮುಸ್ಲಿಮರು ವಕ್ಫ್ ತಿದ್ದುಪಡಿ ವಿಧೇಯಕ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಾಗ ಅವರ ಅಹವಾಲು ಆಲಿಸದೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿರುವುದು ಪ್ರಜಾಪ್ರಭುತ್ವಕ್ಕೆ ಎಸಗಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...