ತುಮಕೂರು | ಬರ ನಿರ್ವಹಣೆಯನ್ನು ಸಮರ್ಥವಾಗಿ ನಿರ್ವಹಿಸಬೇಕು: ಸಚಿವ ಡಾ. ಜಿ.ಪರಮೇಶ್ವರ

Date:

ತುಮಕೂರು ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಕೊಳವೆ ಬಾವಿ ಕೊರೆದು ನೀರು ಪೂರೈಸಬೇಕು, ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.4) ನಡೆದ 2023-24ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ಇಲಾಖೆಯ ಅಧಿಕಾರಿಗಳಿಂದ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ತಹಸೀಲ್ದಾರ್, ಎಇಇ, ಇಒ ನಿಗಾವಹಿಸಬೇಕು ಎಂದರು.

ಜಿಲ್ಲೆಗೆ ಕುಡಿಯುವ ನೀರಿನ ಪೂರೈಕೆ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳಿಗೆ ಸಂಬಂಧಿಸಿದಂತೆ ಇನ್ನೊಂದು ವಾರದೊಳಗಾಗಿ ತಮಗೆ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಬರ ನಿರ್ವಹಣೆಗೆ ಸಂಬಂಧಿಸಿದಂತೆ ಮೇಲುಸ್ತುವಾರಿಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಡಿಯುವ ನೀರಿಗೆ ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಆಯಾ ತಾಲ್ಲೂಕಿನ ಶಾಸಕರ ನೇತೃತ್ವದ ಟಾರ್ಸ್ಕಫೋರ್ಸ್ ಸಮಿತಿ ಸಲ್ಲಿಸುವ ವರದಿಯನ್ನು ಇನ್ನು ಮುಂದೆ ನೇರವಾಗಿ ತಹಶೀಲ್ದಾರ್‌ಗಳು ಜಿಲ್ಲಾಧಿಕಾರಿಗಳ ಅನುಮೋದನೆಗೆ ಸಲ್ಲಿಸಬೇಕು. ತದ ನಂತರ ಟಾಸ್ಕ್ ಪೋರ್ಸ್ ಸಮಿತಿಯ ನಡಾವಳಿಯನುಸಾರ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳು ಅಂದಾಜು ಪಟ್ಟಿ ಸಿದ್ಧಪಡಿಸಿ ಗ್ರಾ.ಕು.ನೀ ಮತ್ತು ನೈ.ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಪ್ರತಿ ತಾಲ್ಲೂಕಿಗೆ ಈಗಾಗಲೇ 25 ಲಕ್ಷ ರೂ. ಬಿಡುಗಡೆಯಾಗಿದ್ದು, ಎಸ್.ಡಿ.ಆರ್.ಎಫ್. ಮೊತ್ತವೂ ಸೇರಿದಂತೆ ತಹಶೀಲ್ದಾರ್ ಖಾತೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಒಟ್ಟು 50ಲಕ್ಷ ರೂ. ಲಭ್ಯವಿರುತ್ತದೆ. ಕುಡಿಯುವ ನೀರು ಹಾಗೂ ಬರ ನಿರ್ವಹಣೆಗೆ ಮತ್ತಷ್ಟು ಪ್ರಸ್ತಾವನೆಗಳು ಬಂದಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ  ಈಗಾಗಲೇ 1.80ಲಕ್ಷ ಮಿನಿ ಮೇವಿನ ಬೀಜದ ಕಿಟ್‌ಗಳನ್ನು ವಿತರಣೆ ಮಾಡಿರುವುದರಿಂದ ರೈತರು ಹಸಿರು ಮೇವನ್ನು ಬೆಳೆದಿದ್ದು, ಸಧ್ಯದ ಪರಿಸ್ಥಿತಿಯಲ್ಲಿ ಮುಂದಿನ ಕೆಲವು ವಾರಗಳಿಗೆ  ಜಿಲ್ಲೆಯಲ್ಲಿ ಮೇವಿಗೆ ತೊಂದರೆ ಇಲ್ಲ. ಮುಂದಿನ ದಿನಗಳಲ್ಲಿ ಸಿಎಸ್‌ಆರ್ ಅನುದಾನದಲ್ಲಿ ಮತ್ತಷ್ಟು ಮೇವಿನ ಕಿಟ್‌ಗಳನ್ನು ರೈತರಿಗೆ ವಿತರಿಸಿ ಮೇವು ಬೆಳೆಯುವ ಸಂಬಂಧ ಕ್ರಮ ಕೈಗೊಳ್ಳುವಂತೆ ಪಶು ಸಂಗೋಪನಾ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮಪಂಚಾಯತಿ ವತಿಯಿಂದ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಊರಿನ ಯಾವುದಾದರೂ ಒಂದು ಭಾಗದಲ್ಲಿ ನೀರಿನ ತೊಟ್ಟಿಗಳನ್ನು ಕಟ್ಟಿ ಜಾನುವಾರುಗಳಿಗೆ ನೀರು ಪೂರೈಸುವಂತೆ ಸೂಚಿಸಿದ ಸಚಿವರು, ಅರಣ್ಯ ಇಲಾಖೆ ವತಿಯಿಂದ ವನ್ಯ ಜೀವಿಗಳಿಗೆ ಕುಡಿಯುವ ನೀರಿಗಾಗಿ ಚೆಕ್‌ಡ್ಯಾಂಗಳನ್ನು ನಿರ್ಮಿಸುವಂತೆ ಸೂಚಿಸಿದರು.

ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರಥಮ ಆದ್ಯತೆ ಮೇರೆಗೆ ಶೌಚಾಲಯಗಳನ್ನು ನಿರ್ಮಿಸುವಂತೆ ಸೂಚಿಸಿದ ಸಚಿವರು, ಯಾವುದೇ ಸಂದರ್ಭದಲ್ಲೂ ಶಾಲಾ ಮಕ್ಕಳನ್ನು ಶೌಚಾಲಯ ಶುಚಿತ್ವ ಕಾರ್ಯಕ್ಕೆ ಬಳಸಿಕೊಳ್ಳಬಾರದು. ಜಿಲ್ಲೆಯಲ್ಲಿ ಈ ಕುರಿತಂತೆ ಯಾವುದೇ ದೂರು ಬರಬಾರದು. ಈ ಕುರಿತಂತೆ ಶಿಕ್ಷಕರಿಗೆ ಡಿಡಿಪಿಐಗಳು ಸೂಚನೆ ನೀಡಬೇಕು. ಮಕ್ಕಳ ಕೈಯಲ್ಲಿ ಶೌಚಾಲಯ ಶುಚಿಗೊಳಿಸಿರುವ ಕುರಿತಂತೆ ಯಾವುದೇ ದೂರು ಬಂದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹಾಗೂ ಡಿಡಿಪಿಐಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿನ ಕುಡಿಯುವ ನೀರಿನ ಬಗ್ಗೆ ಮಾಹಿತಿ ನೀಡಿದ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯನಿರ್ವಾಹಕ ಅಭಿಯಂತರ ರವೀಶ್ ಅವರು, ಜಿಲ್ಲೆಯ 10 ತಾಲ್ಲೂಕುಗಳ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ಸರ್ಕಾರವು ಜುಲೈ 2023ರಲ್ಲಿ 100 ಲಕ್ಷ ರೂ.ಗಳನ್ನು ಮಂಜೂರು ಮಾಡಿರುತ್ತದೆ. ಸದರಿ ಅನುದಾನದಡಿ ಈಗಾಗಲೇ 36 ಜನವಸತಿಗಳಿಗೆ ಹೊಸ ಕೊಳವೆಬಾವಿ ಕೊರೆಯಲು 86 ಲಕ್ಷಗಳಿಗೆ ಮಂಜೂರಾತಿ ನೀಡಲಾಗಿರುತ್ತದೆ ಮತ್ತು ಬರಪೀಡಿತ ತಾಲ್ಲೂಕುಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು ಎಲ್ಲಾ 10 ತಾಲೂಕುಗಳಿಗೆ ತಲಾ 25ಲಕ್ಷ ರೂ.ಗಳನ್ನು ಇಲ್ಲಿಯವರೆಗೆ ಮಂಜೂರು ಮಾಡಲಾಗಿರುತ್ತದೆ. ಇಲ್ಲಿಯವರೆಗೆ ಸಮಸ್ಯಾತ್ಮಕ 72 ಗ್ರಾಮಗಳಲ್ಲಿ ಒಟ್ಟು 48 ಹೊಸ ಕೊಳವೆ ಬಾವಿಗಳು, 6 ಜನವಸತಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, 14 ಜನವಸತಿಗಳಿಗೆ ಖಾಸಗಿ ಕೊಳವೆ ಬಾವಿಯಿಂದ ಮತ್ತು 2 ಜನವಸತಿಗಳಿಗೆ ಪಕ್ಕದ ಜನವಸತಿಗಳಿಂದ ನೀರಿನ ಸಮಸ್ಯೆ ಬಗೆಹರಿಸಲಾಗಿರುತ್ತದೆ ಎಂದು ವಿವರಿಸಿದರು.

ಸಭೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ತಿಪ್ಪೇಸ್ವಾಮಿ, ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ಸಿ.ಟಿ. ಸುರೇಶ್ ಬಾಬು, ವೆಂಕಟೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತೆ ಅಶ್ವಿಜ, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮುಂತಾದವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...