ತುಮಕೂರು | ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಪತರು ನಾಡಿನಲ್ಲಿ ಎಳನೀರಿಗೆ ಭಾರೀ ಡಿಮ್ಯಾಂಡ್

Date:

ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಎಳನೀರಿಗೆ ಅಭಾವ ಎದುರಾಗಿದೆ. ಎಳನೀರಿನ ಬೆಲೆ ಗಗನ ಮುಖಿಯಾಗಿದೆ.

ತುಮಕೂರು ಜಿಲ್ಲೆಯಲ್ಲಿ ಹೇರಳವಾಗಿ ತೆಂಗು ಬೆಳೆಯಲಾಗುತ್ತದೆ. ಆದರೂ ಒಂದು ಎಳನೀರಿಗೆ ಬರೋಬ್ಬರಿ ₹60 ರಿಂದ ₹70ಕ್ಕೆ ಮಾರಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆ ತೆಂಗು. ಇದೀಗ ತೆಂಗು ಬೆಳೆಯುವ ನಾಡಿನಲ್ಲಿ ಎಳನೀರಿಗೆ ಅಭಾವ ಎದುರಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಎಳನೀರಿನ ದರ ಗಗನಕ್ಕೇರಿದೆ.

ತುಮಕೂರು ಜಿಲ್ಲೆಯಲ್ಲಿ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ ಹಾಗೂ ತುಮಕೂರು ತಾಲೂಕಿನಲ್ಲಿ ಯಥೇಚ್ಛವಾಗಿ ತೆಂಗು ಬೆಳೆಯಲಾಗುತ್ತದೆ. ಮೊದಲು ಜಿಲ್ಲೆಯಲ್ಲಿ ₹20ರಿಂದ ₹30ಕ್ಕೆ ಸಿಗುತ್ತಿದ್ದ ಒಂದು ಎಳನೀರು ಇದೀಗ ಬರೋಬ್ಬರಿ 60-70 ರೂಪಾಯಿಗೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರಿನಲ್ಲಿ ಎಳನೀರು ಹುಡುಕಿದರೂ ಸಿಗುತ್ತಿಲ್ಲ. ಅಲ್ಲೋ, ಇಲ್ಲೋ ಒಂದೆರಡು ಕಡೆ ಎಳನೀರು ಸಿಕ್ಕರೂ ಬೆಲೆ ದುಬಾರಿಯಾಗಿದೆ. ಸದ್ಯ ಬಿಸಿಲ ಝಳ ಹೆಚ್ಚುತ್ತಿರುವ ಹಿನ್ನೆಲೆ ಆಸ್ಪತ್ರೆ ಸಮೀಪ ರಾಶಿ ರಾಶಿಯಾಗಿ ಇರುತಿದ್ದ ಎಳನೀರು ಇದೀಗ ಹುಡುಕಿದರೂ ರೋಗಿಗಳಿಗೂ ಸಿಗುತ್ತಿಲ್ಲ. ರಾಜ್ಯದಲ್ಲಿಯೇ ಅತಿ ಹೆಚ್ಚು ತೆಂಗು ಬೆಳೆಯುವ ಜಿಲ್ಲೆ ತುಮಕೂರು. ಆದ್ರೆ ತುಮಕೂರಿನಲ್ಲಿಯೇ ಸದ್ಯ ಎಳನೀರಿಗೆ ಅಭಾವ ಸೃಷ್ಠಿಯಾಗಿದೆ. ಇದಕ್ಕೆಲ್ಲ ಕಾರಣ ಒಂದು ಕಡೆ ತೆಂಗಿನ ಕಾಯಿಗೆ ಬೆಲೆ ಬಂದಿರುವುದರಿಂದ ಎಳನೀರು ಕೊಯ್ಯಲು ರೈತರು ಹಿಂದೇಟು ಹಾಕುತ್ತಿರುವುದು ಎನ್ನಲಾಗಿದೆ. ಮತ್ತೊಂದೆಡೆ ರೈತರು ತೆಂಗು ಬದಲಿಗೆ ಅಡಿಕೆ ಬೆಳೆಯತ್ತ ಮುಖ ಮಾಡುತ್ತಿರುವ ಹಿನ್ನೆಲೆ, ನಿಧಾನವಾಗಿ ತೆಂಗಿನ ಬೆಳೆ ಕಡಿಮೆಯಾಗುತ್ತಿದೆ ಎನ್ನುತ್ತಾರೆ ಇಲ್ಲಿನ ಜನರು.

ಇನ್ನು ಜಿಲ್ಲೆಯಲ್ಲಿ ಗಗನಕ್ಕೆರುತ್ತಿರುವ ಎಳನೀರಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಯ ಮುಖಂಡರು ತಲೆಯ ಮೇಲೆ ಎಳನೀರು ಹೊತ್ತು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜನಸಾಮಾನ್ಯರ ಕೈಗೆಟುಕುವ ದರದಲ್ಲಿ ಎಳನೀರು ಸಿಗುವಂತೆ ಬೆಲೆ ನಿಗದಿ ಮಾಡಬೇಕು ಎಂದು ಮನವಿ ಮಾಡಿದ್ದರು.

ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಎಳನೀರನ್ನು 60 ರಿಂದ 70 ರೂಪಾಯಿಗೆ ಮಾರಲಾಗುತ್ತಿದೆ. ಅದರೆ ರೈತರಿಗೆ ಇದರ ಲಾಭ ದೊರೆಯುತ್ತಿಲ್ಲ. ಹಾಗಾಗಿ ರೈತರಿಗೆ ಉತ್ತಮ ಬೆಲೆ ದೊರೆಯುವಂತೆ ಮಾಡಬೇಕು ಎಂದು ರೈತ ಸಂಘದ ಬಸ್ತಿಕಟ್ಟೆ ರಾಜಣ್ಣ ಒತ್ತಾಯಿಸಿದ್ದಾರೆ.

ಮರಕ್ಕೆ ಹತ್ತಿ ಎಳನೀರು ಕೊಯ್ಯಲು ಜನ ಸಿಗುತ್ತಿಲ್ಲ. ಪ್ರಸ್ತುತ ಎಳನೀರಿನ ಸೀಜ಼ನ್ ಮುಗಿದಿರುವುದರಿಂದ ಎಳನೀರು ಮಾರುಕಟ್ಟೆಗೆ ಬರುತ್ತಿಲ್ಲ. ಹಾಗೆ ಕಳೆದ ವರ್ಷ ತೆಂಗು ಇಳುವರಿ ಕಡಿಮೆಯಾಗಿದ್ದು, ಎಳನೀರಿನ ಬೆಲೆ ಏರಿಕೆಗೆ ಕಾರಣ ಎನ್ನುತ್ತಾರೆ ಎಳನೀರು ಮಾರಾಟ ಮಾಡುವ ಸಹನಾ.

ಬಿಸಿಲಿನ ತೀವ್ರತೆ ಹೆಚ್ಚಾದಂತೆ ಎಳನೀರಿನ ಬೇಡಿಕೆಯು ಹೆಚ್ಚಾಗಿದೆ. ಜನವರಿ ತಿಂಗಳಲ್ಲಿ 40 ರೂಪಾಯಿಗೆ ದೊರೆಯುತ್ತಿದ್ದ ಎಳೆನೀರು ಪ್ರಸ್ತುತ 60ರಿಂದ 70 ರೂಪಾಯಿಗೆ ತಲುಪಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಎಳನೀರು ಬೆಲೆ ಏರಿಕೆ ಆಗಿರುವುದು ಮುಂದಿನ ದಿನದಲ್ಲಿ ಇನ್ನು ದುಪ್ಪಟ್ಟಾಗುವುದೆಂಬ ಆತಂಕ ಗ್ರಾಹಕರನ್ನು ಕಾಡುತ್ತಿದೆ.

ಕರ್ನಾಟಕದ 17 ಜಿಲ್ಲೆಯ 134 ತಾಲೂಕಿನಲ್ಲಿ ತೆಂಗು ಬೆಳೆಯಲಾಗುತ್ತದೆ. ತೆಂಗು ಬೆಳೆಯುವುದರಿಂದಲೇ ತುಮಕೂರು ಜಿಲ್ಲೆ ಕಲ್ಪತರು ನಾಡು ಎಂದು ಹೆಸರಾಗಿದೆ. ಕೊಬ್ಬರಿ ಬೆಲೆ ನಿರಂತರ ಕುಸಿತ, ತೆಂಗಿನಕಾಯಿ ಬೆಲೆ ಕುಸಿತ, ತೆಂಗಿಗೆ ಬರುವ ರೋಗದಿಂದ ರೖತರು ಅನಿವಾರ್ಯವಾಗಿ ಅಡಕೆ ಬೆಳೆ ಮೊರೆಹೋದ ಪರಿಣಾಮ ತೆಂಗು ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಹಾಗೆ ಮಳೆ ಅಭಾವದಿಂದ ಈ ಬಾರಿ ಇಳುವರಿಯೂ ಕಡಿಮೆಯಾಗಿದೆ. ಹೀಗೆ ಅನೇಕ ಕಾರಣದಿಂದ ಎಳನೀರು ದುಬಾರಿಯಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದಲಿತ ಹೋರಾಟಗಾರ ಲಕ್ಷ್ಮೀ ನಾರಾಯಣರ ನೆನೆದ ಸಚಿವ ಶಿವಾನಂದ ಪಾಟೀಲ

ಹೊರ ಜಿಲ್ಲೆಳಿಂದ ಹಾಗೂ ಸ್ಥಳೀಯವಾಗಿಯೂ ಎಳನೀರು ಇಳಿಸಲಾಗುತಿತ್ತು. ಅದರೆ ಈಗ ಹೊರ ಜಿಲ್ಲೆಯಿಂದ ಬರುವ ಪ್ರಮಾಣವೂ ಕಡಿಮೆಯಾಗಿದೆ. ತೆಂಗಿನಕಾಯಿ ಬೆಲೆ ಏರಿಕೆ ಆಗಿರುವುದರಿಂದ ರೈತರು ಸ್ಥಳೀಯವಾಗಿ ಎಳನೀರು ಇಳಿಸುತ್ತಿಲ್ಲ.

ಎಳನೀರಿನ ಬೆಲೆ ದುಬಾರಿಯಾಗಿದ್ದರೂ ಇದರ ಲಾಭ ಮಾತ್ರ ರೈತರ ಕೈ ಸೇರುತ್ತಿಲ್ಲ. ಮೊದಲು ಏನು ಬೆಲೆ ಸಿಗುತ್ತಿತ್ತೋ ಆದೇ ಬೆಲೆಗೆ ಎಳನೀರನ್ನು ಖರೀದಿ ಮಾಡಲಾಗುತ್ತಿದೆ. ಅದರೆ ಗ್ರಾಹಕರಿಗೆ ಮಾರುವಾಗ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಹಾಗಾಗಿ ರೈತರಿಗೆ ನ್ಯಾಯಯುತ ಬೆಲೆ ಕೊಡಿಸಲು ತುಮಕೂರು ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಬೇಕು ಎಂಬುದು ರೈತರ ಒತ್ತಾಯವಾಗಿದೆ.

WhatsApp Image 2024 02 22 at 5.42.38 PM
ಚಂದನ್ ಡಿ ಎನ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...