ತುಮಕೂರು | ಕೊಬ್ಬರಿ ಖರೀದಿ ಕೇಂದ್ರ ಶೀಘ್ರ ಆರಂಭಿಸದಿದ್ದರೆ ಮಾರ್ಚ್11ಕ್ಕೆ ತೀವ್ರ ಹೋರಾಟ: ರೈತ ಸಂಘದ ಜಿಲ್ಲಾಧ್ಯಕ್ಷ ಎಚ್ಚರಿಕೆ

Date:

ಕೊಬ್ಬರಿ ಖರೀದಿ ಕೇಂದ್ರ ನಫೆಡ್ ಆರಂಭಿಸಿ ನಂತರ ಮರು ನೋಂದಣಿ ಹೆಸರಲ್ಲಿ ಸ್ಥಗಿತಗೊಳಿಸಿ ಮತ್ತೆ ಆರಂಭಕ್ಕೆ ವಿಳಂಬ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ನಫೆಡ್ ಆರಂಭಿಸದಿದ್ದರೆ ಮಾರ್ಚ್ 11ಕ್ಕೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಕಚೇರಿ ಎದುರು ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಎಚ್ಚರಿಕೆ ನೀಡಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ, “ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರೇ ಹೇಳಿಕೆ ನೀಡಿ ಕೊಬ್ಬರಿ ಖರೀದಿ ಕೇಂದ್ರ ಆರಂಭಿಸುತ್ತೇವೆಂದು ಹೇಳಿ ಹತ್ತು ದಿನ ಕಳೆದರೂ ಇನ್ನೂ ಕೇಂದ್ರ ಆರಂಭಿಸಿಲ್ಲ. ಆದರೆ ರೈತರು ಕೊಬ್ಬರಿ ಸುಲಿಸಿಕೊಂಡು ಕಾದು ತಾಳ್ಮೆ ಕಳೆದುಕೊಂಡಿದ್ದಾರೆ. ಜತೆಗೆ ಕೊಬ್ಬರಿಯ ತೂಕವೂ ಕಡಿಮೆಯಾಗುತ್ತಿದೆ” ಎಂದು ಕಿಡಿಕಾರಿದರು.

“ಕೊಬ್ಬರಿ ಖರೀದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟು ₹13,500 ನೀಡುತ್ತಿರುವುದು ಅವೈಜ್ಞಾನಿಕವಾಗಿದೆ. ಈ ಹಿಂದಿನ ಸರ್ಕಾರ ಕೊಬ್ಬರಿ ಉತ್ಪನ್ನಕ್ಕೆ ತಗಲುವ ವೆಚ್ಚವನ್ನು ವೈಜ್ಞಾನಿಕವಾಗಿ ತೋಟಗಾರಿಕೆ ಇಲಾಖೆಯ ಮೂಲಕ ತೀರ್ಮಾನಿಸಿದೆ. ಆದರೆ ಇಲ್ಲಿ ಖರೀದಿ ಮಾಡುತ್ತಿರುವುದು ಸರಿಯಲ್ಲ. ಸ್ವಾಮಿನಾಥನ್ ವರದಿ ಅನ್ವಯ ಉತ್ಪನ್ನ ವೆಚ್ಚದ ಶೇ.50ರಷ್ಟು ಆದಾಯ ಲಾಭವಾಗಿ ನೀಡಬೇಕಿದೆ. ಒಟ್ಟಾರೆ ಒಂದು ಕ್ವಿಂಟಾಲ್ ಕೊಬ್ಬರಿಗೆ ₹25,000 ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಓರ್ವ ರೈತನಿಂದ ಹದಿನೈದು ಕ್ವಿಂಟಾಲ್ ಕೊಬ್ಬರಿ ಖರೀದಿಗೆ ನಿಯಮ ಮಾಡಿದ ಸರ್ಕಾರ ವರ್ತಕರ ಹಾವಳಿಗೆ ಕಡಿವಾಣ ಹಾಕಿಲ್ಲ. 62 ಸಾವಿರ ಮೆಟ್ರಿಕ್ ಟನ್ ಖರೀದಿಗೆ ನಿರ್ಧರಿಸಲಾಗಿದೆ. ಆದರೆ ನಮ್ಮ ಜಿಲ್ಲೆಯಲ್ಲೇ 2.50 ಲಕ್ಷ ಟನ್ ಕೊಬ್ಬರಿ ಉತ್ಪತ್ತಿಯಾಗುತ್ತದೆ. ಎಲ್ಲವನ್ನೂ ವೈಜ್ಞಾನಿಕವಾಗಿ ಖರೀದಿಸಬೇಕು” ಎಂದು ಆಗ್ರಹಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಕೆ ಎನ್ ವೆಂಕಟೇಗೌಡ ಮಾತನಾಡಿ, “ಮರು ನೋಂದಣಿ ಕಾರ್ಯವನ್ನು ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಡೆಸುವುದು ಸೂಕ್ತ. ಹಾಗೆಯೇ ಕೊಬ್ಬರಿ ಖರೀದಿ ಕೇಂದ್ರ ತಾಲೂಕಿನಲ್ಲಿ ನಾಲ್ಕೈದು ಕೇಂದ್ರವಾಗಬೇಕು. ಒನ್ ಪಾಯಿಂಟ್ ಅಜೆಂಡಾ ಕೊಬ್ಬರಿ ಹೋರಾಟ ಮಾರ್ಚ್ 11ರಂದು ನಡೆಸಲಾಗುವುದು. ಶೀಘ್ರ ನಫೆಡ್ ಕೊಬ್ಬರಿ ಖರೀದಿ ಕೇಂದ್ರ ಆರಂಭಿಸಿ” ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಲವು ಬೇಡಿಕೆ ಈಡೇರಿಕೆಗೆ ರೈತ ಸಂಘ ಆಗ್ರಹ

ಸುದ್ದಿಗೋಷ್ಟಿಯಲ್ಲಿ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್, ಯುವ ಘಟಕದ ಜಗದೀಶ್, ಶಿವಕುಮಾರ್, ಸತ್ತಿಗಪ್ಪ, ಧರ್ಮೇಗೌಡ, ಎಂ ಎಚ್ ಪಟ್ಟಣ ವೆಂಕಟೇಶ್, ಲಾಯರ್ ಸುರೇಶ್, ದಿವ್ಯಪ್ರಕಾಶ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...