ತುಮಕೂರು | ಆಧುನಿಕತೆಯ ಹಾವಳಿಯಲ್ಲಿ ಜಾನಪದ ಸೌಂದರ್ಯ ನಲುಗಿಹೋಗಿದೆ : ಡಾ.ಗೊ.ರು. ಚನ್ನಬಸಪ್ಪ

Date:

ಕಾಲದ ಧೂಳಿನಿಂದ, ಆಧುನಿಕತೆಯ ಹಾವಳಿಯಲ್ಲಿ ಜಾನಪದ ಸೌಂದರ್ಯ ನಲುಗಿಹೋಗಿದೆ. ನಗರದಲ್ಲಿ ಕೂತು ಜಾನಪದ ಸೌಂದರ್ಯವನ್ನು ಸವಿಯಲು ಸಾಧ್ಯವಿಲ್ಲ. ಕೇಂದ್ರೀಕೃತ ಮನಸ್ಸಿನಿಂದ ಜಾನಪದ ಸಾಹಿತ್ಯವನ್ನು ಕಲಿಯಬಹುದು ಎಂದು ಹಿರಿಯ ಸಾಹಿತಿ ಹಾಗೂ 87ನೆಯ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ.ಗೊ.ರು. ಚನ್ನಬಸಪ್ಪ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗವು ಕರ್ನಾಟಕ ಸಾಹಿತ್ಯಅಕಾಡೆಮಿಯ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ‘ಚಕೋರ’ ಸಾಹಿತ್ಯ ವಿಚಾರ ವೇದಿಕೆಯನ್ನು ಉದ್ಘಾಟಿಸಿ ‘ಕನ್ನಡಜಾನಪದ ಸಂಸ್ಕೃತಿ’ ಕುರಿತುಮಾತನಾಡಿದರು.

ಮನಸ್ಸಿನ ಚಾಂಚಲ್ಯದಿಂದಜಾನಪದ ಸಂಸ್ಕೃತಿಯನ್ನು ಮರೆಯುತ್ತಿರುವುದು ವಿಷಾದನೀಯ.ಅರಿವನ್ನು ಸೇವಿಸಿ ಬದುಕಬೇಕೆಂಬುದು ಈಗಿನ ಯುವ ಸಮೂಹಕ್ಕೆ ತಿಳಿಯದ ವಿಷಯವಾಗಿದೆ.ಜಾನಪದರುಅನುಕರಣೆಯಿಂದ ಸಂಸ್ಕೃತಿಗೆ ಸತ್ವತಂದುಕೊಟ್ಟವರಲ್ಲ. ಅದೊಂದು ಸಹಜ ಹೂವಿನ ರೀತಿ. ಜಾನಪದವೇ ಬಹುದೊಡ್ಡ ಸಂಸ್ಕೃತಿ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000747613

ಜಾನಪದವೆಂದರೆ ಸಮಾನತೆ, ಗೌರವ, ಪರಿಸರ ಕಾಳಜಿ, ಪ್ರೇಮ, ಸಂಬಂಧ, ಮೌಲ್ಯ, ನೈತಿಕತೆ. ಜಾನಪದ ಸಾಹಿತ್ಯದ ವಯಸ್ಸನ್ನು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಜಾನಪದ ಸಾಹಿತ್ಯವುಅನಕ್ಷರಸ್ತರಿಂದ ಸೃಷ್ಟಿಯಾದದ್ದು. ಜಾನಪದರು ಹುಟ್ಟು ಸಾವಿನ ಹಂಗಿಲ್ಲದೆ ಭೂತಾಯಿಯನ್ನು ನಂಬಿ ಬದುಕಿದವರು. ಜಾನಪದರುದೇವರನ್ನುಆಡುಪದಗಳಿಂದ ಏಳಿಸುವ ಶಕ್ತಿ ಹೊಂದಿದವರು ಎಂದರು.

ಕರ್ನಾಟಕ ಸಾಹಿತ್ಯಅಕಾಡೆಮಿಯ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಮಾತನಾಡಿ  ‘ಕನ್ನಡ ಸಾಹಿತ್ಯ ಪರಂಪರೆ’ ಕುರಿತು ಮಾತನಾಡುತ್ತ, ಕನ್ನಡದ ಹಲವು ಮಹಾ ಕಾವ್ಯಗಳನ್ನು ಅನಕ್ಷರಸ್ತದಲಿತ ಹೆಣ್ಣುಮಕ್ಕಳು ಕಟ್ಟಿದರು.ನಮ್ಮನ್ನು ಆಳಿದವರು ಜಾನಪದರ ಕಾವ್ಯಗಳನ್ನು ಜನರಿಗೆತಲುಪದರೀತಿನೋಡಿಕೊಂಡರು. ವಯೋಮಾನದ ಹಂಗಿಲ್ಲದಜಾನಪದ ಸಾಹಿತ್ಯದಲ್ಲಿ ನೋವು, ಸಂಕಟ, ಸಂತಾಪ, ಸಂತೋಷವಿದೆ ಎಂದು ತಿಳಿಸಿದರು.

1000747610

ಕವಿಯಾಗಲು ದೈವ ಕೃಪೆ ಬೇಕಿಲ್ಲವೆಂದು ಜಾನಪದರು ತಿಳಿಸಿಕೊಟ್ಟರು.ಕನ್ನಡ ಸಾಹಿತ್ಯ ಪರಂಪರೆಯಬಸವ ಶರಣರು, ದಾಸರು, ಜಾನಪದರುಸಂವಿಧಾನವನ್ನು ಸಾವಿರಾರು ವರ್ಷಗಳ ಹಿಂದೆಯೇತಮ್ಮ ಕಾವ್ಯಗಳಲ್ಲಿ ನಿರೂಪಿಸಿದ್ದಾರೆ. ಅಂದಿನ ಮಹಾ ಕಾವ್ಯಗಳೇ ಇಂದಿನ ಕಾನೂನಿನ ವಕ್ತಾರರು.ಆದಿಪುರಾಣ, ವಿಕ್ರಮಾರ್ಜುನ ವಿಜಯ, ಕವಿರಾಜಮಾರ್ಗ ಕಾವ್ಯಗಳಲ್ಲಿ ಕನ್ನಡಿಗರ ವ್ಯಕ್ತಿತ್ವ ಪರಿಚಯದಟ್ಟವಾಗಿದೆಎಂದರು.

ಕಾರ್ಯಕ್ರಮದಲ್ಲಿ ಕುಲಸಚಿವೆ ನಾಹಿದಾ ಜಮ್, ಜಮ್ , ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ್ ಎಂ.ಶೇಟ್, ಕರ್ನಾಟಕ ಸಾಹಿತ್ಯಅಕಾಡೆಮಿಯ ಸದಸ್ಯೆ ಸುಮಾ ಸತೀಶ್, ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಸಂಚಾಲಕರಾದ ಮಲ್ಲಿಕಾ ಬಸವರಾಜು, ಡಾ ನಾಗಭೂಷಣ ಬಗ್ಗನಡು, ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೆಂಕಟರೆಡ್ಡಿರಾಮರೆಡ್ಡಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...