ತುಮಕೂರು | ಓದಿನಿಂದಷ್ಟೇ ಉತ್ತಮ ಬರವಣಿಗೆ ಸಾಧ್ಯ : ಡಿ.ಉಮಾಪತಿ

Date:

ಪತ್ರಕರ್ತರಿಗೆ ಭಾಷೆ, ಜಾತಿ, ಲಿಂಗ ಸೂಕ್ಷ್ಮತೆಯ ಅರಿವು ಇರಬೇಕು ಎಂದು ಈದಿನ ಡಾಟ್ ಕಾಮ್ ಕನ್ಸಲ್ಟೆಂಟ್ ಎಡಿಟರ್ ಡಿ.ಉಮಾಪತಿ ಅಭಿಪ್ರಾಯಪಟ್ಟರು.

ತುಮಕೂರು ನಗರದ ಎಸ್ಎಸ್ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್,ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಈದಿನ ಡಾಟ್ ಕಾಮ್ ಹಾಗೂ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು (ಪತ್ರಿಕೋದ್ಯಮ ವಿಭಾಗ) ಇವರ ಸಹಯೋಗದಲ್ಲಿ ಇಂದಿನಿಂದ (ಗುರುವಾರ)ಆರಂಭವಾದ “ಡಿಜಿಟಲ್ ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು” ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಿನಿಮಾ ನೋಡುವ, ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಮೊಬೈಲ್ ಒಂದು ಮಾಯಾ ಕನ್ನಡಿ. ಅದರಲ್ಲಿ ಮುಖನೋಡಿಕೊಳ್ಳಲು ಹೋದರೆ ನೀವು ಮುಳುಗಿ ಹೋಗುತ್ತೀರಿ. ಮಾಯಾ ಕನ್ನಡಿಯ ಮೋಹದಿಂದ ಹೊರಬಂದು, ಪುಸ್ತಕ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದರು.

ಇಂಗ್ಲಿಷ್ ಭಾಷೆಗೆ ಹೆದರಬೇಡಿ, ಭಾಷೆ ಕಲಿಯಿರಿ, ಓದುವುದು ಕಲಿಯಿರಿ. ಓದಿನಿಂದಷ್ಟೇ ಉತ್ತಮ ಬರವಣಿಗೆ ಸಾಧ್ಯ. ಪತ್ರಕರ್ತರು ಎಐ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳದಿದ್ದರೆ ಅಪ್ರಸ್ತುವಾಗುತ್ತಾರೆ. ಹಾಗಾಗಿ ಎಐ ತಂತ್ರಜ್ಞಾನ ಬಳಸಿಕೊಂಡು ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು. ಎಐ ತಂತ್ರಜ್ಞಾನವನ್ನು ಪತ್ರಕರ್ತರು ಅಗತ್ಯವಾಗಿ ಬಳಸಲು ಕಲಿಯಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001224039

ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಮಾತನಾಡಿ ಸಂವಿಧಾನ ಮೂರು ಅಂಗಗಳನ್ನು ಸೃಜನೆ ಮಾಡಿದೆ. ಸಮಾಜ ಸೃಜನೆ ಮಾಡಿದ ನಾಲ್ಕನೇ ಅಂಗ ಪತ್ರಿಕಾ ರಂಗ. ಸಂವಿಧಾನದ ಆಶಯ ತಿಳಿದುಕೊಂಡರೆ ಮಾತ್ರ ಉತ್ತಮ ಪತ್ರಕರ್ತರಾಗಲು ಸಾಧ್ಯ. ಹಾಗಾಗಿ ಪತ್ರಕರ್ತರಿಗೆ ಸಂವಿಧಾನದ ಬಗ್ಗೆ ಆಳವಾದ ಜ್ಞಾನ ಬೇಕು. ಸಕಾರಾತ್ಮಕ ಅಂಶಗಳನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

1001225984

ಪ್ರತಿಯೊಂದು ಇಲಾಖೆಗೆ ಭೇಟಿ ನೀಡಿ ಜನರಿಗೆ ಅಗತ್ಯವಾಗಿ ಬೇಕಾದ ಮಾಹಿತಿ ನೀಡುವಲ್ಲಿ ಪತ್ರಕರ್ತರು ಮುಂದಾಗಬೇಕು. ಅಲ್ಲದೆ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ, ತಿಳಿವಳಿಕೆ ಮೂಡಿಸಬೇಕು ಎಂದು ಜಿ.ಪ್ರಭು ಹೇಳಿದರು.

ಸಾಹೇ ವಿವಿ ಕುಲಾಧಿಪತಿಗಳ ಸಲಹೆಗಾರ ಡಾ. ವಿವೇಕ್ ವೀರಯ್ಯ ಮಾತನಾಡಿ ಶಿಕ್ಷಣ ಭೀಷ್ಮ ಡಾ. ಎಚ್.ಎಂ ಗಂಗಾಧರಯ್ಯನವರು ಆರಭಿಂಸಿದ ಪ್ರಾಥಮಿಕ ಶಿಕ್ಷಣ ಶಾಲೆ, ಪ್ರಸ್ತುತ ಜಾಗತಿಕ ಗುಣಮಟ್ಟದ ಶಿಕ್ಷಣನ್ನು ನೀಡುತ್ತಿದೆ. ವೈದ್ಯಕೀಯ, ತಾಂತ್ರಿಕ ಸೇರಿದಂತೆ ವಿವಿಧ ವಲಯಗಳ ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಿಕೊಂಡಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯು ಮಾಧ್ಯಮ ಶಿಕ್ಷಣಕ್ಕೂ ಒತ್ತುಕೊಟ್ಟಿದೆ. ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಓದಿರುವ ವಿದ್ಯಾರ್ಥಿಗಳು ಉತ್ತಮ ಪತ್ರಕರ್ತರಾಗಿ ರೂಪುಗೊಂಡಿದ್ದಾರೆ ಎಂದರು.

1001225985

‘ಗ್ರಾಮೀಣ ವರದಿಗಾರಿಕೆ ಮತ್ತು ಡಿಜಿಟಲ್ ಮಾಧ್ಯಮ’ ವಿಷಯ ಕುರಿತು ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಎಸ್.ಪೂರ್ಣನಂದ ಅವರು ವಿಷಯ ಮಂಡಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ನಾಗಣ್ಣ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ.ಮುದ್ದೇಶ್ , ಸಹಾಯಕ ಪ್ರಧ್ಯಾಪಕರಾದ ಡಾ.ಜ್ಯೋತಿ, ಎಂ.ಪಿ. ಶ್ವೇತಾ, ಎನ್.ಜಿ.ನವೀನ್, ಪತ್ರಕರ್ತರಾದ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಸಂತೋಷ್ ಎಚ್.ಎಂ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...