ತುಮಕೂರು | ಕೊಬ್ಬರಿ ಖರೀದಿ ಕೇಂದ್ರದಲ್ಲಿ ಹಗಲು ದರೋಡೆ, ರೈತರಿಗೆ ಮೋಸ: ಗೋವಿಂದರಾಜು ಆರೋಪ

Date:

ರೈತರ ಕೊಬ್ಬರಿ ಖರೀದಿ ನಫೆಡ್ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್ ಕೊಬ್ಬರಿಗೆ ₹90 ಹಮಾಲಿ ಶುಲ್ಕ ಎಂಬುದಾಗಿ ಹಗಲು ದರೋಡೆ ಮಾಡಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್ ಹಾಗೂ ಎಪಿಎಂಸಿ ಕಾರ್ಯದರ್ಶಿ ಅವರ ಗಮನ ಸೆಳೆದರೂ ಈವರೆಗೂ ಇತ್ತ ಬಂದು ರೈತರಿಗಾದ ಅನ್ಯಾಯ ಕೇಳುತ್ತಿಲ್ಲ. ವಿಷಯ ತಿಳಿದು 24 ಗಂಟೆ ಕಳೆದರೂ ನಫೆಡ್ ಕೇಂದ್ರದ ಬಳಿ ಬಂದಿಲ್ಲ. ಸಮರ್ಪಕ ಉತ್ತರ ಸಿಗದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಎಚ್ಚರಿಕೆ ನೀಡಿದರು.

ಗುಬ್ಬಿ ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಅಧಿಕಾರಿಗಳ ಆಗಮನವನ್ನು ನಿರೀಕ್ಷಿಸಿ ಕಾದು ಕುಳಿತ ರೈತ ಮುಖಂಡರ ಜತೆಗೆ ಹೇಳಿಕೆ ನೀಡಿದ ಅವರು, “ಫೆಡರೇಶನ್ ಮಾರ್ಗಸೂಚಿ ಪ್ರಕಾರ 1,500 ಕೆಜಿ ಕೊಬ್ಬರಿ ಖರೀದಿ ಮಾಡುವ ಬದಲು 36 ಕೆಜಿಯ ಒಂದು ಚೀಲದಂತೆ ಓರ್ವ ರೈತನಿಂದ 42 ಚೀಲ ಖರೀದಿಸಿ ಒಟ್ಟು 1,470 ಕೆಜಿ ಮಾತ್ರ ಖರೀದಿ ನಡೆದಿದೆ. ಉಳಿದ 30 ಕೆಜಿ ಲೆಕ್ಕ ಹಾಕಿದಾಗ ನೂರಾರು ಕ್ವಿಂಟಲ್ ಕೊಬ್ಬರಿ ಖರೀದಿಗೆ ವರ್ತಕರಿಗೆ ಅವಕಾಶ ನೀಡಿದ್ದಾರೆ. ಈ ಕೆಲಸದಲ್ಲಿ ಅಧಿಕಾರಿಗಳು ಸಂಪೂರ್ಣ ಶಾಮೀಲಾಗಿದ್ದಾರೆ” ಎಂದು ನೇರ ಆರೋಪ ಮಾಡಿದರು.

“ಹಮಾಲಿ ಶುಲ್ಕ ಗುತ್ತಿಗೆ ಪಡೆದ ಏಜೆನ್ಸಿಗೆ ಫೆಡರೇಶನ್ ನಿಗದಿ ಮಾಡಿರುವ ₹12.36 ನೀಡಲಾಗುತ್ತಿದೆ. ಹೆಚ್ಚುವರಿ ರೈತರಿಂದ ವಸೂಲಿ ಮಾಡಿರುವುದು ರೈತರ ಅರಿವಿಗೆ ಬಂದಿಲ್ಲ. ಕ್ವಿಂಟಲ್‌ಗೆ ₹90ರಂತೆ ಜಿಲ್ಲೆಯಲ್ಲಿ 3.18 ಲಕ್ಷ ಕ್ವಿಂಟಲ್ ಕೊಬ್ಬರಿ ಖರೀದಿಯಾಗಿದ್ದು, ₹6.07 ಕೋಟಿಯಷ್ಟು ಹಮಾಲಿ ಹಣವೆಂದು ವಸೂಲಿ ಮಾಡಲಾಗಿದೆ. ಗುಬ್ಬಿ ತಾಲೂಕಿನಲ್ಲಿ ₹72.58 ಲಕ್ಷ ವಂಚನೆ ಮಾಡಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಮಾಲಿ ಕೂಲಿ ಜತೆಗೆ ರೈತನಿಂದ 250 ಗ್ರಾಂ ಕೊಬ್ಬರಿ ಕಡಿತವಾಗುತ್ತದೆ. ಇವೆಲ್ಲವೂ ಸೇರಿ ಕೋಟ್ಯಂತರ ರೂಪಾಯಿ ರೈತರ ಹಣ ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ನಡೆದ ದೊಡ್ಡ ಹಗರಣವೇ ಇದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಕೆ ಎನ್ ವೆಂಕಟೇಗೌಡ ಮಾತನಾಡಿ, “ರೈತ ಸಂಘದ ಹಲವು ಸದಸ್ಯರು ಎರಡು ದಿನದ ಹಿಂದೆ ಈ ಹೆಚ್ಚುವರಿ ಹಣ ವಸೂಲಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಎಪಿಎಂಸಿ ಆವರಣದಲ್ಲಿ ಅಧಿಕಾರಿಗಳ ಉತ್ತರದ ನಿರೀಕ್ಷೆಯಲ್ಲಿ ಕಾದು ಬಸವಳಿದಿದ್ದಾರೆ. ರೈತರ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಬೀದಿಗಿಳಿದು ಹೋರಾಟಕ್ಕೆ ಸಂಘ ಸಿದ್ಧವಿದೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರೈತರ ಪ್ರಶ್ನೆಗೆ ಸಮಂಜಸ ಉತ್ತರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮವಾಗಿ ಬೋಟ್ ಧ್ವಂಸಗೊಳಿಸಿ, ಮಾಲೀಕನಿಗೆ ಜೀವ ಬೆದರಿಕೆ; ಎಸ್‌ಪಿಗೆ ದೂರು

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್, ಯತೀಶ್, ಸತ್ತಿಗಪ್ಪ, ರವೀಶ್, ಕುಮಾರಸ್ವಾಮಿ, ಬಸವರಾಜು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...