ತುಮಕೂರು | ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಪಿಡಿಒಗಳಿಗೆ ಜಿಪಂ ಸಿಇಒ ಜಿ.ಪ್ರಭು ಎಚ್ಚರಿಕೆ

Date:

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಬತ್ತಿದರೆ ಕೂಡಲೇ ಮತ್ತೊಂದು ಬೋರ್ ವ್ಯವಸ್ಥೆ ಅಥವಾ ಖಾಸಗಿ ಬೋರ್ ವ್ಯವಸ್ಥೆ ಮಾಡಬೇಕು. ನೀರಿಗೆ ಮೊದಲ ಆದ್ಯತೆ ನೀಡಿ, ಈ ಕಾರ್ಯಕ್ಕೆ ನಿಮ್ಮಲ್ಲೇ ತೆರಿಗೆ ಸಂಗ್ರಹ ಮಾಡಿ ವ್ಯವಸ್ಥೆ ಮಾಡಬೇಕು. ತೆರಿಗೆ ವಸೂಲಿ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಪಿಡಿಒಗಳಿಗೆ ತುಮಕೂರು ಜಿಪಂ ಸಿಇಒ ಜಿ.ಪ್ರಭು ಎಚ್ಚರಿಕೆ ನೀಡಿದರು.

ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜೆಜೆಎಂ ಕಾಮಗಾರಿ ನಡೆಯುತ್ತಿದ್ದು, ನೀರಿನ ಸಮಸ್ಯೆ ಬರುವ ಗ್ರಾಮದಲ್ಲಿ 580 ರೂ.ಗಳ ನಿಗದಿ ಮಾಡಿ ಟ್ಯಾಂಕರ್ ಮೂಲಕ ನೀರು ಒದಗಿಸಬೇಕು. ಒಂದು ತಿಂಗಳಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ನೀರು ಸರಬರಾಜು ಮಾಡಬೇಕು ಎಂದು ತಿಳಿಸಿದರು.

ತೆರಿಗೆ ವಸೂಲಿ ಮಾಡುವಲ್ಲಿ ತಾಲೂಕಿನ ಗ್ರಾಮ ಪಂಚಾಯತಿಗಳು ಹಿಂದುಳಿದಿದೆ. ಶೇ.10ರಿಂದ 40ರೊಳಗೆ ಮಾತ್ರ ಮಾಡಿದ್ದೀರಿ. ತೆರಿಗೆ ಬಗ್ಗೆ ಈ ಮಟ್ಟದ ನಿರ್ಲಕ್ಷ್ಯ ಸರಿಯಲ್ಲ. ಸಣ್ಣ ಪುಟ್ಟ ಕೆಲಸಕ್ಕೂ ಜಿ.ಪಂನತ್ತ ಮುಖ ಮಾಡುತ್ತೀರಿ. ಪಂಚಾಯಿತಿಯ ಮೂಲಭೂತ ಕೆಲಸಕ್ಕೆ ತೆರಿಗೆ ವಸೂಲಿ ಮಾಡಬೇಕು. ನರೇಗಾ ಜೊತೆ ಸೇರಿಸಿದರೆ ಸಾಕಷ್ಟು ಕೆಲಸ ಅಭಿವೃದ್ದಿ ಆಗಲಿದೆ. ಪಿಡಿಒ ಸೇರಿದಂತೆ ಸಿಬ್ಬಂದಿಗೆ ವೇತನ ನೀಡಲು ಹಣವಿಲ್ಲ. ಮಾರ್ಚ್ ತಿಂಗಳಲ್ಲಿ ತೆರಿಗೆ ವಸೂಲಿ ಮಾಡಿಲ್ಲ. ಇದಕ್ಕೆ ಹೊಣೆ ಹೊತ್ತ ತಾಪಂ ಇಒ ಅವರ ಮೇಲೆ ಕ್ರಮ ವಹಿಸಲಾಗುವುದು. ಸರ್ಕಾರದ ಗಮನಕ್ಕೆ ಈ ಬಗ್ಗೆ ಕಡತ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪನ್ಮೂಲದ ಮೇಲೆ ಪಂಚಾಯಿತಿ ನಡೆಯಬೇಕು. ಆದರೆ, ತೆರಿಗೆ ಹತ್ತರಿಂದ ಇಪ್ಪತ್ತು ಕೋಟಿ ಬಾಕಿ ಆಗಿದೆ. ನಗರ ಪ್ರದೇಶದ ಸಮೀಪದ ಪಂಚಾಯಿತಿಯಲ್ಲಿ ಹೊಸ ಬಡಾವಣೆ ಮೂಲಕವೇ ತೆರಿಗೆ ವಸೂಲಿ ಮಾಡಬಹುದು. ಆದರೆ, ಕಾಲಹರಣ ಮಾಡುತ್ತಿರುವ ಪಿಡಿಒ ಬಗ್ಗೆ ದೂರು ಇವೆ. ಕಚೇರಿಗೆ ಸರಿಯಾದ ಸಮಯಕ್ಕೆ ಬಂದಿಲ್ಲ ಎಂಬ ದೂರು ಸಾಕಷ್ಟಿದೆ. ಸಲ್ಲದ ಕಾರಣ ನೀಡಬೇಡಿ. ಮೊದಲ ಎಚ್ಚರಿಕೆ ಇದು ಎಂದು ಸೂಚಿಸಿದ ಅವರು ಹಾಜರಾತಿ, ಹೆಬ್ಬೆಟ್ಟು ಗುರುತು ಮನಬಂದಂತೆ ಹಾಕಿರುವ ಮಾಹಿತಿ ಇದೆ. ಕಾಟಾಚಾರದ ಕೆಲಸ ಮಾಡುತ್ತಿದ್ದೀರಿ. ತೆರಿಗೆ ವಸೂಲಿ ಬಗ್ಗೆ ತಾತ್ಸಾರ ಮಾಡುತ್ತಿರುವ ಬಗ್ಗೆ ಇನ್ಮುಂದೆ ಕಚೇರಿಗೆ ಸರಿಯಾದ ವೇಳೆಗೆ ಬಂದು ಸಾರ್ವಜನಿಕರ ಕೆಲಸ ಮಾಡಬೇಕು ಎಂದು ಸೂಚಿಸಿದರು.

ತಾಲೂಕಿನ 380 ಜೆಜೆಎಂ ಕಾಮಗಾರಿಗಳ ಪೈಕಿ 340 ಕಾಮಗಾರಿ ಚಾಲ್ತಿಯಲ್ಲಿದೆ. ಸದ್ಯದ ಸ್ಥಿತಿಯಲ್ಲಿ ನೀರಿನ ಸಮಸ್ಯೆ ಬಂದ ಗ್ರಾಮಗಳಿಗೆ 231 ಬೋರ್ ವೆಲ್ ಮಂಜೂರಾತಿ ಸಿಕ್ಕಿದೆ. ಟ್ಯಾಂಕರ್ ಖರೀದಿಯನ್ನು ಅಪ್ಲಿಕೇಶನ್ ಮೂಲಕ ಮಾಡಬೇಕು ಎಂದ ಅವರು, ಕುಡಿಯುವ ನೀರು ಒದಗಿಸುವ ಕೆಲಸಕ್ಕೆ ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುವಲ್ಲಿ ವಿಳಂಬ ಮಾಡುವಂತಿಲ್ಲ. ಪಿಡಿಒಗಳು ಪತ್ರ ವ್ಯವಹಾರ ಮೂಲಕ ಕೆಲಸ ಮಾಡಿಸಬೇಕು. ಮೌಖಿಕ ವ್ಯವಹಾರ ಬಿಟ್ಟು ಯಾವುದೇ ಇಲಾಖೆ ಮೂಲಕ ಕೆಲಸಕ್ಕೆ ಬರವಣಿಗೆ ರೂಪದಲ್ಲಿ ಕೆಲಸ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಮೇಲ್ಮೈ ನೀರು ಬಳಸಿಕೊಳ್ಳಲು ಸೂಚಿಸಲಾಗಿದೆ. ಹೇಮಾವತಿ ನೀರು ಜೊತೆಗೆ ಕೆರೆ ನೀರು ಬಳಕೆ ಮಾಡಲಾಗುತ್ತಿದೆ. ನಂತರದಲ್ಲಿ ಕೊಳವೆಬಾವಿ ಆದ್ಯತೆ ನೀಡಲಾಗುತ್ತಿದೆ. ಈ ಜೊತೆಗೆ ನೀರು ಪೋಲು ಮಾಡುವ ದೂರುಗಳು ಬರುತ್ತಿವೆ. ಸರಿಪಡಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರು ಹಾಗೂ ವಸತಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ತಾಪಂ ಇಒ ವಿ.ಪರಮೇಶ್ ಕುಮಾರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...