ತುಮಕೂರು | ಜಿಟಿಟಿಸಿಯಿಂದ ಯುವಜನರಿಗೆ ಉದ್ಯೋಗ ಖಾತ್ರಿ : ಮುರುಳೀಧರ ಹಾಲಪ್ಪ

Date:

ಶಿಕ್ಷಣದ ಜೊತೆಗೆ ಉದ್ಯೋಗ ಖಾತ್ರಿಯೂ ಇರುವ ಜಿಟಿಟಿಸಿಯ ನೀಡುತ್ತಿರುವ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್‌ ಕೋರ್ಸ್ ಗಳಿಗೆ ಗ್ರಾಮೀಣ ಯುವಜನರು ಸೇರ್ಪಡೆಗೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳುವಂತೆ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.

ತುಮಕೂರು ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿಇರುವ ಸರಕಾರಿಟೂಲ್ಸ್ಅಂಡ್‌ಟ್ರೈನಿಂಗ್ ಸೆಂಟರ್‌ನಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದಅವರು,

 ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳು ಜಿಟಿಟಿಸಿ ಕೋರ್ಸುಗಳನ್ನು ಆಯ್ಕೆ ಮಾಡಿಕೊಂಡರೆ ಶೇ 100 ರಷ್ಟುಉದ್ಯೋಗವನ್ನು ಪಡೆಯಬಹುದು.ಇದು ಹೆಮ್ಮೆಯ ವಿಚಾರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಟಿಟಿಸಿ ಸರಕಾರದ ತಾಂತ್ರಿಕ ಮತ್ತು ಕೌಶಲ್ಯಾಭಿದ್ದಿ ಇಲಾಖೆಯ ಅಡಿಯಲ್ಲಿ ನಡೆಯುತ್ತಿದ್ದು, ಆರು ತಿಂಗಳಿನಿಂದ ನಾಲ್ಕುವರೆ ವರ್ಷಗಳ ವರೆಗಿನ ಕೋರ್ಸುಗಳಿದ್ದು, ಇಲ್ಲಿನ ಕೋರ್ಸುಗಳಿಗೆ ಹೊರರಾಜ್ಯದ, ಹೊರಜಿಲ್ಲೆಯ ವಿದ್ಯಾರ್ಥಿಗಳು ಬಂದು ಪ್ರವೇಶ ಪಡೆಯುತ್ತಿದ್ದಾರೆ. ಆದರೆ ತುಮಕೂರಿನ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಸ್ಥಳೀಯ ವಿದ್ಯಾರ್ಥಿಗಳು ಇದರ ಸೌಲಭ್ಯ ಪಡೆದುಕೊಳ್ಳಬೇಕು.ಎಸ್.ಎಸ್.ಎಲ್,ಸಿ, ಪಿಯುಸಿ, ಪದವಿ ಪಡೆದ ಮಕ್ಕಳಿಗೆ ಇಲ್ಲಿ ವಿವಿಧ ಕೋರ್ಸುಗಳಿದ್ದು,ಇಲ್ಲಿ ಕಲಿತವರಿಗೆ ಭಾರತದಲ್ಲಿಯೇ ಅಲ್ಲ, ವಿದೇಶಗಳಲ್ಲಿಯೂ ಒಳ್ಳೆಯ ಬೆಲೆ ಇದೆಎಂದು ಮುರುಳೀಧರ ಹಾಲಪ್ಪ ನುಡಿದರು. 

ಜಿಟಿಟಿಸಿ ಪ್ರಾಂಶುಪಾಲ ಜಯಪ್ರಕಾಶ್.ಜೆ.ಕೆ. ಮಾತನಾಡಿ,ಯುವ ಪಿಳೀಗೆಗೆ ಇಂದು ಬೇಕಾಗಿರುವುದು ಕೇವಲ ಪದವಿ ಸರ್ಟಿಪಿಕೇಟ್‌ಅಲ್ಲ,ಬದಲಿಗೆಉದ್ಯೋಗ. ಹಾಗಾಗಿ ಶಿಕ್ಷಣದ ಜೊತೆಗೆಉದ್ಯೋಗವನ್ನು ದೊರಕಿಸಿಕೊಡುವ ಇಂತಹ ಕೋರ್ಸುಗಳನ್ನು ಯುವಜನತೆಆಯ್ಕೆ ಮಾಡಿಕೊಂಡರೆ ಶೇ100 ರಷ್ಟುಉದ್ಯೋಗ ಪಡೆಯಬಹುದು.ನಮ್ಮಲ್ಲಿ ಸೇರ್ಪಡೆಯಾಗುವ ವಿದ್ಯಾರ್ಥಿಗಳಲ್ಲಿ ಕ್ಯಾಟಗರಿಯೇ ಮೇಲೆ ಯಾವುದೇ ಶುಲ್ಕ ರಿಯಾಯಿತಿಇಲ್ಲ. ಬದಲಿಗೆ, ಇಂಡಸ್ತಿç ತರಬೇತಿಗೆ ಹೋದಂತಹ ಸಂದರ್ಭದಲ್ಲಿಅಲ್ಲಿದೊರೆಯುವ ಶಿಷ್ಯವೇತನದಿಂದಲೇ ನಾಲ್ಕು ವರ್ಷಗಳ ಕಾಲ ಕಟ್ಟಿರುವ ಶುಲ್ಕವನ್ನು ವೇತನದರೂಪದಲ್ಲಿ ಪಡೆಯುಬಹುದು.ಒಂದುರೀತಿಯಲ್ಲಿ ಶೂನ್ಯದಲ್ಲಿಡಿಪ್ಲಮೋ ವಿದ್ಯಾಭ್ಯಾಸ ಮಾಡಿದಂತಾಗುತ್ತದೆ. ಕರ್ನಾಟಕದ 33 ಕಡೆಗಳಲ್ಲಿ ಜಿಟಿಟಿಸಿ ಟ್ರೖನಿಂಗ್ ಸೆಂಟರ್‌ ಇದ್ದು, ಹೊಸ ಹೊಸ ಕೋರ್ಸುಗಳನ್ನು ಅಳವಡಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರುತಮ್ಮ ಹತ್ತಿರದ ಜಿಟಿಟಿಸಿ ಸೆಂಟರ್‌ಗೆ ಭೇಟಿ ನೀಡಿ ಖುದ್ದು ಪರಿಶೀಲಿಸುವ ಮೂಲಕ ತಮಗಿರುವ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬಹುದು ಎಂದರು.

ವೇದಿಕೆಯಲ್ಲಿ ಕೌಶಲ್ಯಾಭಿವೃದ್ದಿ ಇಲಾಖೆಯ ಅಧಿಕಾರಿ ಅಂಜನಮೂರ್ತಿ,ಶಿಕ್ಷಕರಾದ ಗಂಗಾಧರ್.ಜಿ.ಹೆಚ್, ಕಿಶೋರ್‌ಕುಮಾರ್,ಸಿಡಾಕ್ ಜಂಟಿ ನಿರ್ದೇಶಕರಾದ ಶೋಭಾಶ್ರೀ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...