ಗುಬ್ಬಿ | ಶಾಲೆ ಮುಂದೆ ಜಿಲೆಟಿನ್ ಕಡ್ಡಿ ಸ್ಫೋಟ: ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ

Date:

ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ರಾಶಿ ಮಾಡಿಟ್ಟಿದ್ದ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜಿಲೆಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜಿಲೆಟಿನ್ ಕಡ್ಡಿ ಮುಟ್ಟಿದಾಗ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.

ಗುಬ್ಬಿ ತಾಲೂಜಿನ ಸಿ.ಎಸ್.ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಕೈಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿಯನ್ನು ಮೋನಿಶ್ ಗೌಡ(15) ಎಂದು ಗುರುತಿಸಲಾಗಿದೆ.

ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನೆಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸ್ಪೆಷಲ್ ಕ್ಲಾಸಿಗಾಗಿ ಆಗಮಿಸುತ್ತಿದ್ದ ಸಮಯದಲ್ಲಿ ಇಡಗೂರು ಗ್ರಾಮದ ವಿದ್ಯಾರ್ಥಿ ಮೋನಿಶ್ ಗೌಡ, ಕಲ್ಲು ಬಂಡೆ ಚೂರುಗಳ ಮಧ್ಯೆ ಕಂಡ ವೈರ್ ಸಹಿತ ಇದ್ದ ಜಿಲೆಟಿನ್ ಕಡ್ಡಿ ಕಂಡು ಕುತೂಹಲದಿಂದ ತೆಗೆದುಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಆವರಣಕ್ಕೆ ತೆರಳಿದ ನಂತರ ಬಿಸಿಯಾದ ಅನುಭವಕ್ಕೆ ಭಯಗೊಂಡು ಜಿಲೆಟಿನ್ ಕಡ್ಡಿ ಎಸೆಯಲು ಮುಂದಾದಾಗ ಸ್ಫೋಟಗೊಂಡು ಬಲಗೈ ಬೆರಳುಗಳು ತುಂಡಾಗಿರುವುದಾಗಿ ತಿಳಿದು ಬಂದಿದೆ. ಸುಮಾರು ಒಂದು ಕಿಮೀ ಸುತ್ತಳತೆಯಲ್ಲಿ ಇಡೀ ಗ್ರಾಮಕ್ಕೆ ಕೇಳಿಸಿದ ಸ್ಫೋಟದ ಶಬ್ದ ಇಡೀ ಗ್ರಾಮಸ್ಥರಿಗೆ ಆತಂಕ ತಂದಿತ್ತು.

IMG 20241009 WA1081

ಇಡಗೂರು ಗ್ರಾಮ ಪಂಚಾಯಿತಿ ಮೂಲಕ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಕೆಲಸ ಆರಂಭಿಸಿ ಅಲ್ಲಿನ ಹಳ್ಳ ಮುಚ್ಚಲು ಬೆಳ್ಳೂರು ಕ್ರಾಸ್ ಸಮೀಪದಿಂದ ತಂದ ಬಂಡೆ ಕಲ್ಲುಗಳ ರಾಶಿಯಲ್ಲಿ ವೈರ್ ಸಹಿತ ಜಿಲೆಟಿನ್ ಕಡ್ಡಿಗಳು ಕಾಣುತ್ತಿದ್ದು, ಈ ಬಂಡೆ ಕಲ್ಲುಗಳ ಮಧ್ಯೆ ಕಾಣುವ ವೈರ್ ಕುತೂಹಲದಲ್ಲಿ ಬಾಲಕ ಮುಟ್ಟಿದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆ ನಡೆದ ಕೂಡಲೇ ಸ್ಪೆಷಲ್ ಕ್ಲಾಸಿಗಾಗಿ ಆಗಮಿಸಿದ್ದ ಮಕ್ಕಳು, ಶಿಕ್ಷಕರು ಆತಂಕದಲ್ಲಿದ್ದರು. ಭಯದ ವಾತಾವರಣ ಮಧ್ಯೆ ಕೂಡಲೇ ಗಾಯಾಳು ವಿದ್ಯಾರ್ಥಿಯನ್ನು ತುಮಕೂರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು, ಚಿಕಿತ್ಸೆಗೆ ದಾಖಲು ಮಾಡಲಾಯಿತು.

tumkur 3

ಘಟನೆ ಬಗ್ಗೆ ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಸಿಪಿಐ ಗೋಪಿನಾಥ್ ತಕ್ಷಣ ಘಟನೆ ನಡೆದ ಸ್ಥಳ ಪರಿಶೀಲಿಸಿದರು.‌ಇನ್ನೂ ಜೀವಂತ ಜಿಲೆಟಿನ್ ಕಡ್ಡಿ ಇರುವ ಬಗ್ಗೆ ಖಚಿತ ಮಾಡಿಕೊಂಡು ಕೂಡಲೇ ಈ ಕಲ್ಲು ರಾಶಿ ಸುತ್ತಲಿನ ನೂರು ಮೀಟರ್ ನಿರ್ಬಂಧ ವಿಧಿಸಿದ್ದು, ಸುರಕ್ಷತಾ ಕ್ರಮವಾಗಿ ಮರಳು ತಂದು ಹಾಕಿಸಿದ್ದಾರೆ. ಜಿಲೆಟಿನ್ ಕಡ್ಡಿ ಕಂಡ ಎಲ್ಲ ಕಲ್ಲು ಬಂಡೆ ರಾಶಿಯನ್ನು ಸುರಕ್ಷಿತವಾಗಿ ಹೊರಗೆ ತೆಗೆಯಲು ಸೂಚನೆ ನೀಡಿದ್ದಾರೆ.

ಸ್ಥಳೀಯ ಪಂಚಾಯಿತಿ ಸದಸ್ಯ ಸುಶಾಂತಗೌಡ ಈ ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಬಗ್ಗೆ ತಿಳಿದು ಪೊಲೀಸರು ಕೂಡಲೇ ಸ್ಥಳಕ್ಕೆ ಬರಲು ಸೂಚಿಸಿ ಗಾಯಾಳು ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನಡೆಸಲು ಸೂಚಿಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡರು.

ಇದನ್ನು ಓದಿದ್ದೀರಾ? ಕಲಬುರಗಿ | ಶೈಕ್ಷಣಿಕ ಸುಧಾರಣಾ ಸಮಿತಿಗೆ ಗುರುರಾಜ ಕರಜಗಿ ನೇಮಕ ಖಂಡನೀಯ: ವೆಲ್ಪೇರ್ ಪಾರ್ಟಿ

ಸ್ಥಳಕ್ಕೆ ಭೂ ಮತ್ತು ಗಣಿಗಾರಿಕೆ ಉಪ ನಿರ್ದೇಶಕ ಲೋಕೇಶ್ ಕುಮಾರ್ ಹಾಗೂ ಭೂ ವಿಜ್ಞಾನಿ ಸಂತೋಷ್ ಕುಮಾರ್ ಜೆಲಟಿನ್ ಕಡ್ಡಿ ಬಗ್ಗೆ ಪರಿಶೀಲನೆ ನಡೆಸಿದರು. ತಾಪಂ ಇಓ ಶಿವಪ್ರಕಾಶ್, ಕಂದಾಯ ನಿರೀಕ್ಷಕಿ ಪ್ರಮೀಳಾ, ಗ್ರಾಮ ಲೆಕ್ಕಿಗ ಅಭಿಷೇಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

jiletin
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...