ತುಮಕೂರು | ಗುಬ್ಬಿಯಪ್ಪ ರಥೋತ್ಸವ; ಸುಡು ಬಿಸಿಲಿನಲ್ಲಿ ಹರಿದುಬಂದ ಭಕ್ತಸಾಗರ

Date:

ಇತಿಹಾಸ ಪ್ರಸಿದ್ದವಾಗಿರುವ ತುಮಕೂರಿನ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು

ಗುಬ್ಬಿಯಪ್ಪ ದೇವಾಲಯದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಹಲವು ಮಠಾಧೀಶರು ಪೂಜಾ ವಿಧಿ ವಿಧಾನ ನಡೆಸಿಕೊಟ್ಟರು. ಗುಬ್ಬಿಯಪ್ಪ ಎಂದೇ ಉಲ್ಲೇಖಿಸುವ ಚನ್ನಬಸವೇಶ್ವರ ಸ್ವಾಮಿಗೆ ಇಂದು ವಿಶೇಷ ಹೂವಿನ ಅಲಂಕಾರ ಮಾಡಿದ್ದು, ಸ್ವಾಮಿಯ ಪಲ್ಲಕ್ಕಿ ಮೆರವಣಿಗೆ ಸಾಗಿ ಪುಷ್ಪಾಲಂಕೃತ ರಥದಲ್ಲಿ ಕುಳ್ಳಿರಿಸಿ ಮಧ್ಯಾಹ್ನ 1 ಗಂಟೆಗೆ ಸಾವಿರಾರು ಭಕ್ತರು ರಥವನ್ನು ಭಕ್ತಿ ಪೂರಕವಾಗಿ ಎಳೆದರು. ಈ ಸಂದರ್ಭದಲ್ಲಿ ಹರಕೆ ಹೊತ್ತ ಭಕ್ತರು ಬಾಳೆಹಣ್ಣು, ದವನ ಎಸೆಯುವ ಮೂಲಕ ತಮ್ಮ ಇಷ್ಟಾರ್ಥ ಪ್ರಾರ್ಥನೆ ಸಲ್ಲಿಸಿದರು.

ರಥೋತ್ಸವ ನಡೆದ ಕೂಡಲೇ ವಿವಿಧ ಸಮಾಜ, ಸಂಘ ಸಂಸ್ಥೆಗಳು ಪಾನಕ ಫಲಾಹಾರ ಸೇವೆ ನಡೆಸಿದರು. ನಂತರ ದೇವಾಲಯದ ಆವರಣದಲ್ಲಿ ಆರಂಭವಾದ ಮಹಾ ದಾಸೋಹ ನಿರಂತರ ರಾತ್ರಿಯವರೆಗೆ ನಡೆಯಿತು. ಈ ಬಾರಿ ಭಕ್ತರು ಮಿಠಾಯಿ ಪ್ರಸಾದವನ್ನು ದಾನಿ ಧರ್ಮಪಾಲ್ ಕುಟುಂಬ ಮಾಡಿಸಿದ್ದರೆ, ಒಂದೂವರೆ ಟನ್ ಬೂಂದಿ ಸೇವೆಯನ್ನು ಅಗ್ನಿವಂಶ ತಿಗಳ ಸಮಾಜ ತಯಾರಿಸಿ ಪ್ರಸಾದ ವಿನಿಯೋಗಿಸಿದೆ. ದೇವಾಲಯದ ಆವರಣವನ್ನು ಸಂಪೂರ್ಣ ವಿಶೇಷ ಹೂವಿನ ಚಪ್ಪರ ಅಲಂಕಾರ ಕಣ್ಮನ ಸೆಳೆಯಿತು. ಎಲ್ಲ ಸೇವಾ ಕಾರ್ಯದಲ್ಲಿ ಹದಿನೆಂಟು ಸಮುದಾಯಗಳ ಮುಖಂಡರು ಸಾಕ್ಷಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ಧೀರಾ? ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಘಟ್ಟದತ್ತ ʼಕೈʼ ಟಿಕೆಟ್‌ ಜಿದ್ದಾಜಿದ್ದಿ; ಯಾರಾಗಲಿದ್ದಾರೆ ಕಾಂಗ್ರೆಸ್‌ ಅಭ್ಯರ್ಥಿ?

ಸುಡು ಬಿಸಿಲು ಲೆಕ್ಕಿಸದೆ ಸಾಗರೋಪಾದಿಯಲ್ಲಿ ಆಗಮಿಸಿದ ಸಾವಿರಾರು ಭಕ್ತರಿಗೆ ಕುಡಿಯುವ ನೀರು ವ್ಯವಸ್ಥೆಯನ್ನು ಭಕ್ತರೇ ಮಾಡಿದ್ದರು. ಹಲವು ಸಂಘದವರು ನೀಡಿದ ಪಾನಕ ಕೂಡಾ ಬಾಯಾರಿಕೆ ತಣಿಸಿತ್ತು. ಇಡೀ ಜಾತ್ರಾ ಮಹೋತ್ಸವ ಉಸ್ತುವಾರಿ ಜಾತ್ರಾ ಸಮಿತಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ನಿರ್ವಹಿಸಿದರು. ಈ ಬಾರಿ ಮಹಾ ದಾಸೋಹ ವ್ಯವಸ್ಥೆ ನಿರಂತರ ರಾತ್ರಿ 11ರವರೆಗೆ ನಡೆದಿರುವುದು ಭಕ್ತರಲ್ಲಿ ಸಂತಸ ತಂದಿದೆ. ಜಾತ್ರೆಯ ಮತ್ತೊಂದು ವಿಶೇಷ ಬೆಳ್ಳಿ ಪಲ್ಲಕ್ಕಿ ಉತ್ಸವ ಇದೇ ತಿಂಗಳ 25 ರಂದು ಅದ್ದೂರಿಯಾಗಿ ನಡೆಯಲಿದೆ. ಇಡೀ ರಾತ್ರಿ ನಡೆಯುವ ಈ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...