ತುಮಕೂರು | ಕೆ ಶಿವರಾಮ್‌ಗೆ ಶ್ರದ್ಧಾಂಜಲಿ ಸಲ್ಲಿಸಿದ ಹರ್ತಿಪತ್ತಿನ ಸಹಕಾರ ಸಂಘ

Date:

ಗುರುವಾರ (ಫೆ.29) ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಚಿತ್ರನಟ ಹಾಗೂ ರಾಜಕಾರಣಿ, ರಾಜ್ಯ ಛಲವಾದಿ ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ಕೆ.ಶಿವರಾಮ್‌ ಅವರಿಗೆ ಹರ್ತಿಪತ್ತಿನ ಸಹಕಾರ ಸಂಘ, ಛಲವಾದಿ ಕಲಾ ಮತ್ತು ಸಾಂಸ್ಕೃತಿಕ ವೇದಿಕೆ ತುಮಕೂರು ನಗರದ ಹರ್ತಿಪತ್ತಿನ ಸಹಕಾರ ಸಂಘದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದೆ.

ಸರ್ಕಾರಿ ಅಭಿಯೋಜಕರು, ಕಲಾವಿದ ಎಸ್. ರಾಜಣ್ಣ ಮಾತನಾಡಿ, ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಪಾಸು ಮಾಡಿದ ಅತ್ಯಂತ ಪ್ರತಿಭಾವಂತರಾದ ಕೆ.ಶಿವರಾಮ್, ಐಎಎಸ್ ಅಧಿಕಾರಿಯಾಗಿ, ಕಲಾವಿದರಾಗಿ ಅಧಿಕಾರಿ ವರ್ಗದಲ್ಲಿ ಮತ್ತು ಕಲಾರಂಗದಲ್ಲಿ ಹೆಸರು ಮಾಡಿದ್ದರು ಎಂದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಧಿಕಾರಿಯಾಗಿ ಕೆಲಸ ಮಾಡಿದ್ದ ಅವರು, ಮೈಸೂರು ಮಹಾನಗರಪಾಲಿಕೆಯ ಆಯುಕ್ತರಾಗಿದ್ದಾಗ ಇಡೀ ರಾಜ್ಯದಲ್ಲಿಯೇ ಮೊದಲ ಬಾರಿಗೆ ಗುಡಿಸಲಿನಲ್ಲಿದ್ದ ಪೌರಕಾರ್ಮಿಕರಿಗೆ, ಪಕ್ಕಾ ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ಅವರು ಸಹ ಸಮಾಜದ ಇತರಂತೆ ಬದುಕುವ ಹಕ್ಕು ದಯಪಾಲಿಸಿದವರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣೆಗೆರೆ ಜಿಲ್ಲಾಧಿಕಾರಿಯಾಗಿದ್ದಾಗ ಜಿಲ್ಲೆಯ ಶೈಕ್ಷಣಿಕ, ಅರ್ಥಿಕ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿದವರು ಅಲ್ಲದೇ ಛಲವಾದಿ ಸಮುದಾಯವನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಅರ್ಥಿಕವಾಗಿ ಮುಂದೆ ತರಬೇಕೆಂಬ ಉದ್ದೇಶದಿಂದಲೇ ಛಲವಾದಿ ಮಹಾಸಭಾವನ್ನು ಕಟ್ಟಿ, ಅದರ ಸಂಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿ, ಸಮುದಾಯದ ಜನರನ್ನು ಸಂಘಟಿಸುವ ಕೆಲಸ ಮಾಡಿದ್ದರು. ಅವರು ಎಂದಿಗೂ ತಮ್ಮ ಜನಾಂಗದ ಹೆಸರು ಹೇಳಲು ಹಿಂಜರಿದವರಲ್ಲ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಕಾಲದಲ್ಲಿ ಪರಿಶಿಷ್ಟ ಜಾತಿಯ ಮಕ್ಕಳ ಉನ್ನತ ವ್ಯಾಸಂಗಕ್ಕೆ ಒತ್ತು ನೀಡಿದ್ದರು. ಇಂತಹ ಅಧಿಕಾರಿ ಅನಾರೋಗ್ಯಕ್ಕೆ ತುತ್ತಾಗಿ ಅಸುನೀಗಿದ್ದು ನಿಜಕ್ಕೂ ಸಮಾಜಕ್ಕೆ ತುಂಬಲಾರದ ನಷ್ಟು ಉಂಟಾಗಿದೆ. ಅವರ ಸೇವೆ ಇನ್ನೂ ಸಮಾಜಕ್ಕೆ ಅಗತ್ಯವಿತ್ತು. ಅವರ ಆಶಯದಂತೆ ನಾವೆಲ್ಲರೂ ನಡೆಯುವ ಮೂಲಕ ಅವರ ಆತ್ಮಕ್ಕೆ ಶಾಂತಿ ದೊರೆಯುವಂತಾಗಲಿ ಎಂದರು.

ಹಿರಿಯ ರಂಗಭೂಮಿ ಕಲಾವಿದರಾದ ಪುಟ್ಟಭೋರಯ್ಯ, ವಕೀಲರಾದ ಸಿ.ಎಸ್. ಹನುಮಂತರಾಯ, ಪತ್ರಕರ್ತ ಎಚ್.ಎಸ್. ಪರಮೇಶ್ ಮಾತನಾಡಿದರು. ಛಲವಾದಿ ಮುಖಂಡರಾದ ವಿಜಯಕುಮಾರ್, ಹರ್ತಿಪತ್ತಿನ ಸಹಕಾರ ಸಂಘ ಪ್ರಧಾನ ಕಾರ್ಯದರ್ಶಿ ಶಿವರಾಜ್, ಪೊಲೀಸ್ ಇಲಾಖೆಯ ನಂದೀಶ್, ಬೈರೇಶ್, ಮನೋಹರ, ಕೆಂಪರಾಜ್, ದೇವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...