ತುಮಕೂರು | ತವರು ಜಿಲ್ಲೆಯ ಗೌರವ ಕಾರ್ಯಕ್ರಮ ನನಗೆ ಮತ್ತಷ್ಟು ವರ್ಷ ಬದುಕುವಂತಹ ಶಕ್ತಿ ನೀಡಿದೆ : ಬರಗೂರು ರಾಮಚಂದ್ರಪ್ಪ

Date:

ಭಿನ್ನಾಭಿಪ್ರಾಯದ ನಡುವೆ ಬದುಕುವುದೇ ನಿಜವಾದ ಪ್ರಜಾಪ್ರಭುತ್ವ. ಇಂದಿನ ಕಾರ್ಯಕ್ರಮ ನನಗೆ ಮತ್ತಷ್ಟು ವರ್ಷ ಬದುಕುವಂತಹ ಶಕ್ತಿಯನ್ನು ನೀಡಿದೆ. ನನ್ನನ್ನು ನಾನು ತಿರುಗಿ ನೋಡಿಕೊಳ್ಳುವಂತೆ ಮಾಡಿದೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು.

ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸ್ನೇಹ ಬಳಗದವತಿಯಿಂದ ಹಮ್ಮಿಕೊಂಡಿದ್ದ ಬರಗೂರು ಮೀಮಾಂಸೆ ಮತ್ತು ಬರಗೂರರಿಗೆ ತವರು ಜಿಲ್ಲೆಯ ಗೌರವ ಕಾರ್ಯಕ್ರಮದಲ್ಲಿ ತುಮಕೂರು ನಾಗರಿಕರ ಗೌರವ ಸ್ವೀಕರಿಸಿ ಮಾತನಾಡುತಿದ್ದ ಅವರು, ನನ್ನ ಇಂದಿನ ಎಲ್ಲಾ ಗೌರವಕ್ಕೆ ಕಾರಣರು ನನ್ನಗೆ ಚಿಕ್ಕಂದಿನಲ್ಲಿ ಪಾಠ ಹೇಳಿಕೊಟ್ಟ ಟಿ.ವೈ.ನಾಗಭೂಷಣರಾವ್, ಎಂ.ಎಸ್.ರಾಮಲಿಂಗಪ್ಪ,ನನ್ನ ಸಾಹಿತ್ಯವನ್ನು ತಿದ್ದಿ ತೀಡಿ ಬರೆಯಲು ಪ್ರೇರೆಪಿಸಿದ ಸೀತಾರಾಮ್ ಅವರುಗಳು.ನಾನು ಜಾತ್ಯಾತೀತ ವ್ಯಕ್ತಿಯಾಗಿ ರೂಪುಗೊಳ್ಳಲು ಕಾರಣರು ಎಂದರು.

1000862677

ನಾನು ಮಹಾತ್ಮಗಾಂಧಿಯ ಸಹಿಷ್ಣತೆ,ಅಂಬೇಡ್ಕರ್ ಸಮಾಜಿಕ ಸಮಾನತೆ ಮತ್ತು ಕಾರ್ಲ್ಮಾರ್ಕ ಅವರ ಅರ್ಥಿಕ ಸಮಾನತೆಯಿಂದ ಸ್ಪೂರ್ತಿ ಪಡೆದವನು.ನೀಲಿ,ಹಸಿರು,ಕೆಂಪು ಒಂದಾದರೆ ಹೆಚ್ಚಿನ ಅನುಕೂಲ ಜನರಿಗೆ ಸಿಗಲಿದೆ ಎಂಬ ನಂಬಿಕೆ ನನ್ನದು.ಜನರ ಪ್ರೀತಿಗೆ ಗೌರವ ಕೊಡಬೇಕು ಎಂಬ ಕಾರಣಕ್ಕೆ ನಿಮ್ಮೆಲ್ಲಾ ಗೌರವಗಳನ್ನು ಸ್ವೀಕರಿಸಿದ್ದೇನೆ.ಭಾವುಕತೆ ಮತ್ತು ಬೌದ್ಧಿಕತೆ ಎರಡರ ನಡುವೆ ಸಮತೋಲನ ಕಂಡುಕೊಂಡವ.ಇಂದಿನ ಕಾರ್ಯಕ್ರಮ ಒಂದೆಡೆ ಸಂಭ್ರಮ ನೀಡಿದರೆ, ಎಚ್ಚರಿಕೆಯನ್ನು ನೀಡಿದೆ ಎಂದು ಡಾ.ಬರಗೂರು ರಾಮಚಂದ್ರಪ್ಪ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರಗೂರು ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಸುಂದರಾಜ್ ಅರಸ್ ಮಾತನಾಡಿ, ಬರಗೂರು ದ್ವನಿ ಇಲ್ಲದವರ ದ್ವನಿಯಾಗಿ ಕೆಲಸ ಮಾಡಿದವರು.ಕಳೆದ 38 ವರ್ಷಗಳಿಂದ ಅವರ ಹೆಜ್ಜೆಗಳನ್ನು ಅನುಸರಿಸುತ್ತಾ ಬಂದಿದ್ದೇನೆ.ಎಲ್ಲರ ನೋವಿಗೆ ಬೆಲೆಯಿದೆ ಎಂದು ತಿಳಿದವರು ಬರಗೂರ ರಾಮಚಂದ್ರಪ್ಪ, ಕೈ, ಬಾಯಿ, ಮನಸ್ಸು ಎಲ್ಲವನ್ನು ಶುದ್ದವಾಗಿಟ್ಟುಕೊಂಡು ಸಂಸ್ಕಾರವಂತರು ಎಂದರು

1000862651

.

ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ,ಬರಗೂರು ರಾಮಚಂದ್ರಪ್ಪ ಅವರು ಮೇಷ್ಟುç ಎಂಬ ಪದಕ್ಕೆ ಹೆಚ್ಚು ಗೌರವ ತಂದುಕೊಟ್ಟವರು.ಅವರ ಎಲ್ಲ ಬರಹಗಳ ಸತ್ವಪೂರ್ಣವಾಗಿವೆ.ಅವರಿಂದ ಇಡೀ ಊರಿಗೆ ಕೀರ್ತಿ ಬಂದಿದೆ ಎಂದರು.

ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ನನ್ನ ಗುರುಗಳಾಗಿ ನನ್ನನ್ನು ಸಾಕಷ್ಟು ತಿದ್ದಿ ತೀಡಿದವರು ರಾಮಚಂದ್ರಪ್ಪ ಅವರು,ವ್ಯವಸ್ಥೆ ಒಳಗೆ ಇರಲಿ,ಹೊರಗೆ ಇರಲಿ ತಾವು ನಂಬಿದ ಸಿದ್ದಾಂತದೊಂದಿಗೆ ರಾಜಿ ಮಾಡಿಕೊಂಡ ವರಲ್ಲ.ಅವರ ನೇತೃತ್ವದಲ್ಲಿ ನಡೆದ ಸಾಂಸ್ಕೃತಿಕ ನೀತಿ ಜಾರಿಗೆ ಬರಬೇಕು..ಹಾಗೆಯೇ ಶಾಸ್ತ್ರೀಯ ಸ್ಥಾನಮಾನದ ಅನುದಾನ ಬಳಕೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ, ಕೇಂದ್ರಕ್ಕೆ ಕಳುಹಿಸುವಂತೆ ಮನವಿ ಮಾಡಿದರು.

1000862665

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ,ಬರಗೂರರ ಅಜ್ಞಾತ ಅಭಿಮಾನಿಗಳಲ್ಲಿ ನಾನು ಒಬ್ಬ.ಇಡೀ ರಾಜ್ಯದ ಶಿಕ್ಷಕ ಸಮೂಹಕ್ಕೆ ಮಾದರಿ.ಕೇವಲ ಕ್ಲಾಸ್ ರೂಂಗೆ ಸಿಮೀತವಾಗದೆ, ವೇತನಕ್ಕೆ ಲೆಕ್ಕ ಇಡದೆ, ಶಿಷ್ಯ ಬಳಗವನ್ನು ಹುಟ್ಟು ಹಾಕಿದವರು.ನಾವು ಕೂಡ ಅವರಂತೆ ಬದುಕುವುದೇ ಅವರಿಗೆ ನೀಡುವ ನಿಜವಾದ ಗೌರವ ಎಂದರು.

ಕಾರ್ಯಕ್ರಮದಲ್ಲಿ ಡಾ.ಲಕ್ಷ್ಮೀರಂಗಯ್ಯ,ಪ್ರೊ.ತಿಪ್ಪೇಸ್ವಾಮಿ,ಡಾ.ಪವನಗಂಗಾಧರ್,ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸ್ನೇಹ ಬಳಗದ ಎ.ರಾಮಚಂದ್ರಪ್ಪ, ಹೆಚ್.ಗೋವಿಂದಯ್ಯ, ಆಶ್ವಥನಾರಾಯಣಗುಟ್ಟೆ, ಡಾ.ಶ್ರೀನಿವಾಸಪ್ಪ,ಡಾ.ಓ.ನಾಗರಾಜು, ಡಾ.ನಾಗಭೂಷಣ್ ಬಗ್ಗನಡು, ಡಾ.ಶಿವಣ್ಣ ತಿಮ್ಮಲಾಪುರ, ನಾಗೇಂದ್ರಪ್ಪ, ಆನಂತಮೂರ್ತಿ, ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...