ತುಮಕೂರು | ʼಅಂತರ್ಯಾಮಿʼ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಗೃಹಸಚಿವ ಪರಮೇಶ್ವರ್

Date:

ತುಮಕೂರು ನಗರದ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಹಳೆ ವಿದ್ಯಾರ್ಥಿ ಪ್ರಣವ್ ನಟನೆ ಮತ್ತು ನಿರ್ಮಾಣದ ʼಅಂತರ್ಯಾಮಿʼ ಚಿತ್ರದ ಪೋಸ್ಟರ್‌ನ್ನು ಗೃಹ ಸಚಿವ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ ಪರಮೇಶ್ವರ್ ಬಿಡುಗಡೆ ಮಾಡಿದರು.

ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, “ಇತ್ತೀಚಿನ ದಿನದಲ್ಲಿ ಸಾಮಾಜಿಕ ಮಾಧ್ಯಮಗಳ ಗೀಳು ಯುವ ಜನತೆಯನ್ನು ಅಪಾರವಾಗಿ ಕಾಡುತ್ತಿದೆ. ಚಿಕ್ಕ ಮಕ್ಕಳು ಇಂದು ಮೊಬೈಲ್ ವ್ಯಾಮೋಹಕ್ಕೆ ಬಿದ್ದು ತಮ್ಮ ಅಮೂಲ್ಯವಾದ ಬಾಲ್ಯದ ಜೀವನವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಮಕ್ಕಳು ಹಾಗೂ ಯುವಕರು ದಾರಿ ತಪ್ಪಿಸುವಂತಹ ಸಾಮಾಜಿಕ ಜಾಲತಾಣಗಳಿಂದ ಹೊರಬಂದು ತಮ್ಮ ಜೀವನವನ್ನು ಸುಂದರಾಗಿಸಿಕೊಳ್ಳಬೇಕು. ಈ ನೆಲಗಟ್ಟಿನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಈ ಸಿನಿಮಾ ಸಾಮಾಜಿಕ ಜಾಲತಾಣಗಳಿಂದ ಬಳಲುತ್ತಿರುವ ಪ್ರಸ್ತುತ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತದೆ” ಎಂದು ಅಭಿಪ್ರಾಯಪಟ್ಟರು.

“ಅಂತರ್ಯಾಮಿ ಸಿನಿಮಾದ ನಾಯಕ ನಟ ನಮ್ಮ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಎಂಬುದು ಹೆಮ್ಮೆಯ ಸಂಗತಿ. ಜೊತೆಗೆ ಮತ್ತೋರ್ವ ಹಳೇ ವಿದ್ಯಾರ್ಥಿ ವಿನಯ್ ಕಾವ್ಯಕಾಂತಿ ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾದಲ್ಲಿ ಮಾಧ್ಯಮ ವಿದ್ಯಾರ್ಥಿಗಳು ಅಭಿನಯಿಸಿರುವುದು ಇನ್ನೂ ವಿಶೇಷ. ಈ ಚಿತ್ರ ಅಭೂತ ಪೂರ್ವ ಯಶಸ್ಸು ಕಾಣಲಿ” ಎಂದು ಶುಭ ಹಾರೈಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಶ್ರೀ ಸಿದ್ದಾರ್ಥ ಮಾಧ್ಯಮ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಿ.ಸಾಣಿಕೊಪ್ಪ, ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಮೊದಲಾದವರು ಹಾಜರಿದ್ದರು.

ಈ ಚಿತ್ರದಲ್ಲಿ ನಾಯಕ ನಟನಾಗಿ ಪ್ರಣವ್ ನಟಿಸಿದ್ದು, ನಾಯಕಿಯಾಗಿ ಮೋಹಿರಾ ಆಚಾರ್ಯ ಅಭಿನಯಿಸಿದ್ದಾರೆ. ಮಂಡ್ಯ ಸಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ ಉದಯ್, ರುದ್ರಮುನಿ ಪಂಡಿತ್, ರೇಣುಕಾಂಬ, ಶರತ್ ಘಾಟಿ, ಶ್ರೀ ಕೃಷ್ಣ ಮಂಜೀವಾ, ಬೇಬಿ ಹಾನ್ಸಿ, ಹೇಮ ಮಾಲಿನಿ, ಬಾಲಕೃಷ್ಣ ಬರಗೂರು, ವಸಂತ್, ಯೋಗೀಶ್ ಮುಂತಾದವರು ತಾರಾಗಣದಲ್ಲಿದ್ದಾರೆ. 

ಇದನ್ನೂ ಓದಿ: ತುಮಕೂರು | ರಾಜೇಂದ್ರ ಕೊಲೆ ಸಂಚು ಪ್ರಕರಣ; ಪ್ರಮುಖ ಆರೋಪಿ ಪೊಲೀಸರಿಗೆ ಶರಣು

ಈ ಚಿತ್ರಕ್ಕೆ ಎಸ್ ಬಾಲು ಛಾಯಾಗ್ರಹಣ ನಿರ್ವಹಿಸಿದರೆ, ದೇಸೀ ಮೋಹನ್ ಅವರ ಸಂಗೀತವಿದೆ. ಸಾಹಿತ್ಯವನ್ನು ವಿನಯ್ ಕಾವ್ಯಕಾಂತಿ ಬರೆದಿದ್ದಾರೆ. ನೃತ್ಯ ಸಂಯೋಜನೆಯನ್ನು ಬಾಲ ಮಾಸ್ಟರ್ ನಿರ್ವಹಿಸಿದರೆ, ಅರವಿಂದರಾಜ್ ಸಂಕಲನ ಮಾಡಿದ್ದಾರೆ. ಇನ್ನು ತಾಂತ್ರಿಕ ಸಲಹೆಯನ್ನು ಶ್ರೀಕಾಂತ್ ಶ್ರಾಪ್ ನೀಡಿದ್ದಾರೆ. ಎಂಜೆಎಸ್ಪಿಆರ್ ಯವರು ಪಿಆರ್‌ಓ ಕಾರ್ಯನಿರ್ವಹಿಸಿದ್ದರೆ, ರವಿಶಂಕರ್ ಅವರು ಸಹ ನಿದೇಶನ¸ಮಾಡಿದ್ದಾರೆ. ಸಹಾಯಕ ನಿರ್ದೇಶಕರಾಗಿ ವಸಂತ್, ನಾಗರಾಜ್ ಹೂಗಾರ್, ಗೌತಮ್ ವಿ. ಅರೆಯೂರು ಸಾಥ್ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...