ತುಮಕೂರು | ಹೊರಗಿನ ಅಭ್ಯರ್ಥಿ, ಒಳಗಿನ ಅಭ್ಯರ್ಥಿಗಳಲ್ಲಿ ಯಾರು ಸೂಕ್ತ ನೀವೇ ನಿರ್ಧರಿಸಿ: ಗೃಹ ಸಚಿವ ಜಿ ಪರಮೇಶ್ವರ್

Date:

ಹೊರಗಿನ ಯಾವ ಅಭ್ಯರ್ಥಿಯೂ ಗೆದ್ದ ಇತಿಹಾಸ ನಮ್ಮ ಜಿಲ್ಲೆಯಲ್ಲಿಲ್ಲ. ಬೆಂಗಳೂರಿನಲ್ಲಿ ಹುಡುಕಬೇಕಾದ ಹೊರಗಿನ ಅಭ್ಯರ್ಥಿ, ಅರ್ಧ ಗಂಟೆಯಲ್ಲಿ ಸಿಗುವ ಒಳಗಿನ ಅಭ್ಯರ್ಥಿಗಳಲ್ಲಿ ಯಾರು ಸೂಕ್ತ ಎನ್ನುವುದು ಯೋಚಿಸಿ ಮತ್ತೊಮ್ಮೆ ಇಲ್ಲಿನ ಇತಿಹಾಸ ಮರುಕಳಿಸಿ ಕಾಂಗ್ರೆಸ್ ಗೆಲ್ಲಿಸಿ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಕರೆ ನೀಡಿದರು.

ಗುಬ್ಬಿ ಹೊರ ವಲಯದ ಬಾಲಾಜಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

“ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಅತ್ಯಧಿಕ ಲೀಡ್ ಕೊಡುವ ಮುನ್ಸೂಚನೆ ಗುಬ್ಬಿ ಕ್ಷೇತ್ರದ ಜನ ನೀಡಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ. ಈ ನಿಟ್ಟಿನಲ್ಲಿ ಗ್ಯಾರಂಟಿ ನಿಲ್ಲಿಸುತ್ತಾರೆಂಬ ಅಪಪ್ರಚಾರಕ್ಕೆ ಬ್ರೇಕ್ ನೀಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಇಡಿ, ಐಟಿ ರೇಡ್ ಮಾಡುವ ಮೂಲಕ ಪಕ್ಷಕ್ಕೆ ಫಂಡ್ ಮಾಡುವ ಹೊಸ ಭ್ರಷ್ಟಾಚಾರ ಮಾಡುತ್ತಿರುವ ಬಿಜೆಪಿಯ ಮನಸ್ಥಿತಿ ಅದು ಮನುಸ್ಮೃತಿ ಎನಿಸಿದೆ. ಒಂದೊಂದು ಕಡೆ ಒಂದೊಂದು ಮಾತು ಆಡುತ್ತಾ ಮೋದಿಯವರು ಒಕ್ಕೂಟ ವ್ಯವಸ್ಥೆಯನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ. ಜತೆಗೆ ಯಾವ ಪ್ರಧಾನಿ ಮಾಡದ ಸಂವಿಧಾನ ಬದಲಿಸುವ ಕೆಲಸಕ್ಕೆ ಬಿಜೆಪಿ ಹಾಕಿದೆ. ಅವರ ಪಕ್ಷದ ವಾಜಪೇಯಿಯವರು ಆಡಳಿತ ಮಾಡಿದ್ದರೂ ಕೂಡಾ ಅವರಿಗೆ ಸಂವಿಧಾನ ಬದ್ಧ ನಡತೆ ಇತ್ತು. ಇವರದ್ದು ಸರ್ವಾಧಿಕಾರವಾಗಿದೆ” ಎಂದು ವ್ಯಂಗ್ಯವಾಡಿದ ಅವರು ಈ ಬಾರಿ 250 ರೊಳಗೆ ಬಿಜೆಪಿ ಸೀಟ್ ಕುಸಿಯಲಿದೆ ಎಂದರು.

ಸಚಿವ ಕೆ ಎನ್ ರಾಜಣ್ಣ ಮಾತನಾಡಿ, “ತುಮಕೂರು ಕ್ಷೇತ್ರದಲ್ಲಿ ಈ ಹಿಂದೆ ಆರ್ ಮಂಜುನಾಥ್, ಕೋದಂಡರಾಮಯ್ಯ, ಎ ಕೃಷ್ಣಪ್ಪ, ದೇವೇಗೌಡರು ಇವರೆಲ್ಲಾ ಸೋತ ಇತಿಹಾಸವಿದೆ. ಹೊರಗಿನ ಅಭ್ಯರ್ಥಿ ಎಂಬ ಅಂಶವೇ ಈ ಸೋಲಿಗೆ ಕಾರಣ. ಸ್ವಾಭಿಮಾನಿ ಮತದಾರರು ಈ ಬಾರಿಯೂ ಅದೇ ನಿರ್ಧಾರ ಕೈಗೊಳ್ಳಲಿದ್ದಾರೆ. ಬಿಜೆಪಿ ಕಾರ್ಪರೇಟ್ ಕಂಪೆನಿಯಿಂದ ಫಂಡ್ ವಸೂಲಿ, ಶ್ರೀರಾಮ, ಹಿಂದುತ್ವ ಈ ಅಂಶವನ್ನೇ ಮುಂದಿಟ್ಟು ಚುನಾವಣೆ ಮಾಡಿದೆ. ಆದರೆ ಗಾಂಧೀಜಿ ಹಿಂದುತ್ವ ನಮ್ಮದು, ಗೋಡ್ಸೆ ಹಿಂದುತ್ವ ಬಿಜೆಪಿಯದು. ದಶರಥ ರಾಮನ ಬದಲು ಅಯೋಧ್ಯೆಯಲ್ಲಿ ಮೋದಿ ರಾಮ ಸೃಷ್ಟಿಯಾಗಿದ್ದು ವಿಪರ್ಯಾಸ” ಎಂದರು.

ಶಾಸಕ ಎಸ್ ಆರ್ ಶ್ರೀನಿವಾಸ್ ಮಾತನಾಡಿ, “ಅಕ್ಕ ಅಣ್ಣಾ ಎಂದು ಮಾತನಾಡುವ ಸೋಮಣ್ಣ ಅವರ ನಾಟಕಕ್ಕೆ ಜನ ಮರುಳಾಗುವುದಿಲ್ಲ. ಹರಿಯುವ ನೀರು ಎನ್ನುತ್ತಲೇ ಇಡೀ ರಾಜ್ಯ ಸುತ್ತುವ ಹರಿಯುವ ಸೋಮಣ್ಣ ಎಂಬ ನೀರು ಕೃಷಿಗೂ ಬಾರದು, ಕುಡಿಯಲು ಬಾರದು” ಎಂದು ವ್ಯಂಗ್ಯವಾಡಿದರು.

“ಕಳೆದ ನಾಲ್ಕು ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಲೀಡ್ ನೀಡದ ಆಪಾದನೆ ನನ್ನ ಮೇಲಿದೆ. ದೇವೇಗೌಡರೂ ಕೂಡಾ ಕೋಪ ಮಾಡಿಕೊಂಡಿದ್ದು ಈ ವಿಚಾರದಲ್ಲಿ. ಕುಮಾರಸ್ವಾಮಿ ಆಡುವ ನವರಂಗಿ ಆಟ ನನ್ನದಲ್ಲ. ನೇರ ಮಾತನಾಡುವ ಜಾಯಮಾನ ನನ್ನದು. ಇದ್ದ ವಿಚಾರ ನೇರ ಹೇಳಿದ್ದೆ. ಈ ನಿಟ್ಟಿನಲ್ಲಿ ಅಪಕೀರ್ತಿಗೆ ಈ ಬಾರಿ ಉತ್ತರ ನೀಡಲು ಸಂಕಲ್ಪ ತೊಡಬೇಕು” ಎಂದು ಕರೆ ನೀಡಿದರು.

ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಮಾತನಾಡಿ, “ಜವಾಬ್ದಾರಿಯುತ ಸಂಸದ ಸ್ಥಾನಕ್ಕೆ ಐದು ವರ್ಷ ನ್ಯಾಯ ಕೊಟ್ಟಿದ್ದೇನೆ. 700ಕ್ಕೂ ಅಧಿಕ ಪ್ರಶ್ನೆ ಕೇಳಿದ್ದೇನೆ. 120 ಗಂಭೀರ ವಿಚಾರ ಪ್ರಸ್ತಾಪ ಮಾಡಿ ರೈತರ ಆತ್ಮಹತ್ಯೆ, ಕೊಬ್ಬರಿ, ಅಡಕೆ ಬಗ್ಗೆ ಚರ್ಚಿಸಿದ್ದೇನೆ. ಚತುಷ್ಪಥ ಹೆದ್ದಾರಿ, ಎಚ್‌ಎಎಲ್, ಇಸ್ರೋ, ಸ್ಮಾರ್ಟ್ ಸಿಟಿ ಹೀಗೆ ಅನೇಕ ಅಭಿವೃದ್ದಿ ಕೆಲಸಕ್ಕೆ ಅಡಿಗಲ್ಲು ಹಾಕಿದ್ದೇನೆ. ವರ್ಷ ಪೂರ್ತಿ ಜನರಿಗೆ ಸಿಗುವ ನನಗೆ, ಮತದಾರರು ಬೆಂಬಲಿಸುವ ವಿಶ್ವಾಸವಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಜೆಡಿಎಸ್ ತೊರೆದು ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.

ವೇದಿಕೆಯಲ್ಲಿ ಶಾಸಕರುಗಳಾದ ಷಡಕ್ಷರಿ, ವೆಂಕಟೇಶ್, ಮಾಜಿ ಶಾಸಕರಾದ ಗೌರಿಶಂಕರ್, ಕಿರಣ್ ಕುಮಾರ್, ಡಾ.ರಫೀಕ್ ಅಹಮದ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ಯುವ ಅಧ್ಯಕ್ಷ ಶಶಿ ಹುಲಿಕುಂಟೆ, ಮುರಳೀಧರ ಹಾಲಪ್ಪ, ನಿಕೇತ್ ರಾಜ್ ಮೌರ್ಯ, ಮಹಿಳಾ ಘಟಕದ ಗೀತಾ ರಾಜಣ್ಣ, ಜಿಲ್ಲಾ ಕಾರ್ಯದರ್ಶಿ ಶಂಕರಾನಂದ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ, ತಾತಯ್ಯ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...