ತುಮಕೂರು | ಗೃಹಸಚಿವ ಪರಮೇಶ್ವರ ಅವರಿಂದ ಬುಗುಡನಹಳ್ಳಿ ಕೆರೆ ವೀಕ್ಷಣೆ

Date:

ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂಬರುವ ಸೆಪ್ಟೆಂಬರ್‌ವರೆಗೆ ತುಮಕೂರು ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ತುಮಕೂರು ನಗರದ ಬುಗುಡನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

“ಗೊರೂರು ಜಲಾಶಯದಿಂದ ಹೇಮಾವತಿ ನಾಲೆಗೆ ಮಾರ್ಚ್ 12ರಂದು ನೀರು ಹರಿಯಬಿಟ್ಟಿದ್ದು, ಗುರುವಾರ ರಾತ್ರಿ ಬುಗಡನಹಳ್ಳಿ ಕೆರೆಗೆ ನೀರು ತಲುಪಿದೆ. ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಐಸಿಸಿ ಸಮಿತಿ ಅಧ್ಯಕ್ಷ ಕೆ ಎನ್ ರಾಜಣ್ಣ ಅವರಿಗೆ ಕನಿಷ್ಟ 2 ಟಿಎಂಸಿ ನೀರನ್ನು ನೀಡಲು ಮನವಿ ಮಾಡಿದಾಗ ಸಚಿವರು ಒಪ್ಪಿ 2.5 ಟಿಎಂಸಿ ನೀರು ಬಿಡಲು ಅನುಮತಿ ನೀಡಿ ನೀರನ್ನು ಹರಿಯಲು ಬಿಟ್ಟಿದ್ದಾರೆ. ಜಿಲ್ಲೆಗೆ ನೀರು ಹರಿಸಲು ಸಹಕರಿಸಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಿಕೆಯಿಂದ 3 ದಿನಕ್ಕೊಮ್ಮೆ ನಗರಕ್ಕೆ ನೀರು ಸರಬರಾಜು ಮಾಡಿ ಮಿತವಾಗಿ ಬಳಸಿದ್ದರಿಂದ ಈವರೆಗೂ ನೀರು ಸರಬರಾಜು ಮಾಡಲು ಸಾಧ್ಯವಾಯಿತು. ಕೆರೆಯಲ್ಲಿ ಮುಂದಿನ 8ರಿಂದ 10 ದಿನಗಳಿಗೆ ಮಾತ್ರ ಪೂರೈಕೆ ಮಾಡುವಷ್ಟು ನೀರು ಲಭ್ಯವಿತ್ತು. ಮುಂದಾಲೋಚನೆಯಿಂದ ಹೇಮಾವತಿ ನೀರು ತರಿಸದೇ ಹೋಗಿದ್ದರೆ ತುಮಕೂರು ಸೇರಿದಂತೆ ಶಿರಾ, ಕೊರಟಗೆರೆ, ಮಧುಗಿರಿ, ಪಟ್ಟಣಗಳ ನಾಗರಿಕರಿಗೆ ನೀರಿನ ಅಭಾವ ಉಂಟಾಗುತ್ತಿತ್ತು. ನಗರದ ನಾಗರಿಕರು ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು” ಎಂದು ಮನವಿ ಮಾಡಿದರು.

“ಹೇಮಾವತಿ ನಾಲೆಗೆ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಹರಿಯ ಬಿಟ್ಟಿರುವುದರಿಂದ ಕೃಷಿ ಮತ್ತಿತರ ಚಟುವಟಿಕೆಗಳಿಗೆ ಬಳಸದಂತೆ ನಿಗಾ ವಹಿಸಲು ಪೊಲೀಸ್ ಗಸ್ತಿಗೆ ಸೂಚಿಸಲಾಗಿದೆ. ಜನರಿಗೆ ತೊಂದರೆ ಮಾಡುವ ಉದ್ದೇಶದಿಂದ ಪೊಲೀಸ್ ಗಸ್ತು ನಿಯೋಜನೆ ಮಾಡಿರುವುದಿಲ್ಲ. ನಾಲೆಯ ಮಾರ್ಗ ಮಧ್ಯದಲ್ಲಿ ನೀರು ಪೋಲಾದರೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೆರೆಗಳಿಗೆ ನೀರನ್ನು ತುಂಬಿಸಲು ಸಾಧ್ಯವಿಲ್ಲವೆಂಬ ಉದ್ದೇಶದಿಂದ ಪೊಲೀಸ್ ಗಸ್ತನ್ನು ನಿಯೋಜಿಸಲಾಗಿದ್ದು, ರೈತರು ಸಹಕರಿಸಬೇಕು” ಎಂದು ಮನವಿ ಮಾಡಿದರು.

“ಮಧುಗಿರಿ ತಾಲೂಕಿನ ಸುಮಾರು 65 ರಿಂದ 70 ಕೆರೆ ಹಾಗೂ ಕೊರಟಗೆರೆ ಕ್ಷೇತ್ರದ 66 ಕೆರೆಗಳಿಗೆ ನೀರು ತುಂಬಿಸುವ ಬೆಳ್ಳಾವಿ-ಕೋರ ಏತ ನೀರಾವರಿ ಯೋಜನೆಯ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಸುಮಾರು 500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಸಚಿವ ಪರಮೇಶ್ವರ್

ಕೆರೆ ಭೇಟಿ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ, ಮಹಾನಗರ ಪಾಲಿಕೆ ಆಯುಕ್ತ ಬಿ ವಿ ಆಶ್ವೀಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೇಮಾವತಿ ಯೋಜನೆಯ ಮುಖ್ಯ ಎಂಜಿನಿಯರ್ ಫಣಿರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...