ತುಮಕೂರು | ಸಿದ್ಧಗಂಗಾ ಮಠದಲ್ಲಿ ಇಫ್ತಿಯಾರ್ ಕೂಟ

Date:

ಪವಿತ್ರ ರಂಜಾನ್ ಪ್ರಯುಕ್ತ ವಿವಿಧ ಮುಸ್ಲೀಂ ಮುಖಂಡರು ಭಾನುವಾರ ಸಂಜೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಅನ್ನ ದಾಸೋಹ ಕೇಂದ್ರ ಸಿದ್ಧಗಂಗಾ ಮಠದಲ್ಲಿ ಮುಖಂಡರು ರಂಜಾನ್ ಪ್ರಯುಕ್ತ ಕೈಗೊಂಡಿದ್ದ ಉಪವಾಸವನ್ನು ಅಂತ್ಯಗೊಳಿಸಿದರು. ಅಲ್ಲದೆ ಶ್ರೀಮಠದಲ್ಲಿ ನಡೆದ ಭಾವೈಕ್ಯತಾ ಸತ್ಕಾರ ಕೂಟದಲ್ಲಿ ಭಾಗವಹಿಸಿ ಫಲಾಹಾರ ಸೇವಿಸಿದರು.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹ್ರೂಜ್ ಖಾನ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹ್ಮದ್, ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹಾಗೂ ಇತರೆ ಮುಖಂಡರು ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದು ಸಂಜೆ ಮಠದಲ್ಲಿ ನಡೆದ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಸಿದ್ಧಲಿಂಗ ಸ್ವಾಮೀಜಿ, ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ. ಇನ್ಯಾವ ದೇಶಗಳಲ್ಲೂ ಭಾರತದಷ್ಟು ಧರ್ಮಗಳು ಇಲ್ಲ. ಎಲ್ಲಾ ಧರ್ಮಗಳ ಸಾರ ಒಂದೇ, ಅದು ಶಾಂತಿ ಮತ್ತು ಪ್ರೀತಿ. ಎಲ್ಲಾ ಧರ್ಮದವರು ಶಾಂತಿ, ಸಹಬಾಳ್ವೆಯಿಂದ ಬಾಳಬೇಕು ಎಂಬುದು ಎಲ್ಲಾ ಧರ್ಮಗಳ ಆಶಯ. ಭಾರತ ಭಾವೈಕ್ಯತೆಯ ದೇಶ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹ್ರೂಜ್ ಖಾನ್ ಮಾತನಾಡಿ, ರಂಜಾನ್ ಸಂದರ್ಭದಲ್ಲಿ ಮುಸಲ್ಮಾನರು ಆಚರಿಸುವ ಉಪವಾಸವು ಅನ್ನದ ಮಹತ್ವವನ್ನು ಸಾರುತ್ತದೆ. ಅನ್ನ ದಾನ ಕೇಂದ್ರವಾಗಿ ವಿಖ್ಯಾತವಾಗಿರುವ ಸಿದ್ಧಗಂಗಾ ಮಠದಲ್ಲಿ ರಂಜಾನ್‌ನ ಉಪವಾಸವನ್ನು ಅಂತ್ಯಗೊಳಿಸುವುದು ಕೂಡಾ ಪವಿತ್ರ ಎಂದು ನಾವು ಇಲ್ಲಿಗೆ ಬಂದಿದ್ದೇವೆ. ಹಿಂದಿನ ವರ್ಷವೂ ಸಿದ್ಧಗಂಗಾ ಮಠದಲ್ಲಿ ರಂಜಾನ್ ಉಪವಾಸ ಬಿಟ್ಟಿದ್ದಾಗಿ ಹೇಳಿದರು

1001185232

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹ್ಮದ್ ಮಾತನಾಡಿ, ದಯವಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಹೇಳಿದಂತೆ ಇಸ್ಲಾಂ ಧರ್ಮವೂ ದಾನ, ದಯೆ, ಕರುಣೆಯನ್ನು ಪಚ್ರತಿಪಾದಿಸುತ್ತದೆ. ಅನ್ನದ ಮಹತ್ವ, ಹಸಿವಿನ ಕಷ್ಟದ ಅರಿವಾಗಬೇಕು, ಹಸಿದವರ ಸಂಕಟ ತಿಳಿಯಬೇಕು ಎನ್ನುವ ಕಾರಣಕ್ಕೆ ರಂಜಾನ್‌ನಲ್ಲಿ ಉಪವಾಸ ಆಚರಿಸಲಾಗುತ್ತದೆ. ಇಂದು ಅನ್ನ ದಾಸೋಹ ಕೇಂದ್ರವಾದ ಸಿದ್ಧಗಂಗಾ ಮಠದಲ್ಲಿ ನಾವು ಉಪವಾಸ ಬಿಟ್ಟಿದ್ದು ವಿಶೇಷವಾಗಿದೆ ಎಂದು ಹೇಳಿದರು.

ಬಡವರು, ಅನಾಥರಿಗೆ ಸಹಾಯ ಮಾಡಬೇಕು, ಹಸಿದವರಿಗೆ ಅನ್ನ ದಾನ ಮಾಡಬೇಕು. ಎಲ್ಲರಲ್ಲೂ ಸಮಾನತೆಯಿಂದ ಕಾಣಬೇಕು ಎಂಬುದು ಇಸ್ಲಾಂ ಧರ್ಮ ಆಶಯ. ಅಶಕ್ತರಿಗೆ ಸಹಾಯ ಮಾಡುವ ಮಾನವೀಯ ಧರ್ಮ ದೊಡ್ಡದು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿ, ಅಕ್ಷರ, ಅನ್ನ, ಆಶ್ರಯದ ತ್ರಿವಿಧ ದಾಸೋಹದ ಸಿದ್ಧಗಂಗಾ ಮಠದಲ್ಲಿ ಎಲ್ಲಾ ಜನಾಂಗದ ಬಡ ಮಕ್ಕಳಿಗೆ ಆಶ್ರಯ ನೀಡಿ ಅವರಿಗೆ ಅನ್ನ ನೀಡಿ ಅಕ್ಷರ ಕಲಿಸುವ ಪವಿತ್ರ ಕೆಲಸ ನಡೆಯುತ್ತಿದೆ. ಎಲ್ಲರೂ ಸಮಾನವರು ಬೇಧಭಾವ ಮರೆತು ಸಹಬಾಳ್ವೆಯಿಂದ ವಾಳಬೇಕು ಎಂದು ಡಾ.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಹೇಳಿದೆ. ಅದರ ತತ್ವಗಳನ್ನು ಅನುಸರಿಸಿಕೊಂಡು ಎಲ್ಲರೂ ಶಾಂತಿ ಸಮಾಧಾನದಿಂದ ಬಾಳೋಣ ಎಂದು ಹೇಳಿದರು.

ರಾಜೀವ್ ಗಾಂಧಿ ವೈದ್ಯಕೀಯ ವಿಶ್ವಿದ್ಯಾಲಯದ ಸೆನೆಟ್ ಸದಸ್ಯ ಡಾ.ಶ್ರೀನಿವಾಸನ್, ಕೆಪಿಸಿಸಿ ಕಾನೂನು ಘಟಕ ಕಾರ್ಯದರ್ಶಿ ಆಲಿ, ಮುಖಂಡರಾದ ಅನಿಲ್ ತಡಕಲ್, ಸೈಯದ್ ನಯಾಜ್ ಅಹ್ಮದ್, ಡಾ.ರಿಯಾನ್ ಷರೀಫ್ ಮೊದಲಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...