ತುಮಕೂರು | ಅಕ್ರಮ ಭೂ ಪರಿವರ್ತನೆ ಆರೋಪ : ಜಿಲ್ಲಾಧಿಕಾರಿಗೆ ನಾಗರಿಕ ಸನ್ಮಾನದ ವಿನೂತನ ಪ್ರತಿಭಟನೆಗೆ ಪೊಲೀಸರ ಅಡ್ಡಿ ; ಬಂಧನ

Date:

ಅಕ್ರಮ ಭೂ ಕಬಳಿಕೆಗೆ ಕಾರಣವಾಗಿದ್ದಾರೆ ಎಂಬ ಆರೋಪ ಹೊತ್ತಿರುವ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ನಾಗರಿಕ ಸನ್ಮಾನವನ್ನು ಶುಕ್ರವಾರ ಕೆಆರ್‌ಎಸ್ ಪಕ್ಷದ ವತಿಯಿಂದ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಅಕ್ರಮ ಭೂ ಕಬಳಿಕೆ ಮತ್ತು ಅಕ್ರಮ ಗಣಿಗಾರಿಕೆಗೆ ಪ್ರೋತ್ಸಾಹ ನೀಡಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಲು ಶ್ರಮಿಸುತ್ತಿದ್ದಾರೆ ಎಂದು ಆರೋಪಿಸಿ ತುಮಕೂರು ಜಿಲ್ಲಾಧಿಕಾರಿಗೆ ಶಾಲು, ಪೇಟ, ರೇಷ್ಮೆ ಸೀರೆ ನೀಡಿ ಸನ್ಮಾನ ಮಾಡಲು ಟೌನ್‌ಹಾಲ್ ನಿಂದ ಡಿಸಿ ಕಚೇರಿ ಕಡೆಗೆ ಹೊರಟಿದ್ದ ಕೆಆರ್‌ಎಸ್ ಪಕ್ಷದ ಸೈನಿಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.ಸನ್ಮಾನ ಕಾರ್ಯಕ್ರಮಕ್ಕೂ ಮುನ್ನ ಟೌನ್‌ಹಾಲ್ ನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸೈನಿಕರು ಪೊಲೀಸರ ಸರ್ಪಗಾವಲಿನ ನಡುವೆಯೂ ಸಭೆ ಸೇರಿದ್ದರು. 

ಪೊಲೀಸರು ಮತ್ತು ಪಕ್ಷದ ಕಾರ್ಯಕರ್ತರ ನಡುವೆ ಕ್ಷಣ ಹೊತ್ತು ವಗ್ವಾದ ನಡೆಯಿತು. ಡಿಸಿಯವರಿಗೆ ಸನ್ಮಾನ ಮಾಡಲು ಅವಕಾಶ ಕೊಡದ ಪೊಲೀಸರ ವರ್ತನೆ ಖಂಡಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸ್ಥಳದಲ್ಲಿಯೇ ಪ್ರತಿಭಟನೆಗೆ ಕುಳಿತು ವಿಡಂಬಿಸುವ ನಿಟ್ಟಿನಲ್ಲಿ‌ ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ಜೈಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನ ಸಿಂಧು ಸ್ವಾಮಿ ಮಾತನಾಡಿ, ಅಕ್ರಮ ಭೂ ಮಂಜೂರಾತಿಯು ಡಿಸಿ ಅವರ ಅನುಮತಿ ಇಲ್ಲದೆ ಸಾಧ್ಯವೇ ಇಲ್ಲ. ಇದಕ್ಕೆ ನೇರ ಹೊಣೆಯನ್ನು ಜಿಲ್ಲಾಧಿಕಾರಿಯವರೇ ಹೊರಬೇಕು ಎಂದು ಆರೋಪಿದರು.

ಮಧುಗಿರಿಯಲ್ಲಿನ 40 ಎಕ್ಕರೆ ಅಕ್ರಮ ಭೂ ಮಂಜೂರಾತಿಯಲ್ಲಿ‌ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಇದರ ವಿರುದ್ಧ ಕೆಆರ್‌ಎಸ್ ಪಕ್ಷ ಹೋರಾಟ ಮಾಡುತ್ತಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಸಾಮಾನ್ಯರ ಕೆಲಸವಾಗುತ್ತಿಲ್ಲ. ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ರಿಯಲ್ ಎಸ್ಟೇಟ್ ಕೆಲಸಗಳು ಮಾತ್ರ ಸರಾಗವಾಗಿ ಆಗುತ್ತಿವೆ. ಅದರೊಂದಿಗೆ ಭೂ ಕಬಳಿಕೆಯೂ ನಡೆಯುತ್ತಿದೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ಅಕ್ರಮ ಮಾಡುತ್ತಿದ್ದರೆ ನಾಗರಿಕರು ಅದನ್ನು ನೋಡಿಕೊಂಡು ಸುಮ್ಮನಿಕರಬೇಕಾ ಎಂದು ಜ್ಞಾನ ಸಿಂಧು ಸ್ವಾಮಿ ಪ್ರಶ್ನಿಸಿದರಲ್ಲದೆ, ಸರ್ಕಾರಿ ಭೂಮಿ ಜನರ ಸ್ವತ್ತು. ಅದನ್ನು ಅಕ್ರಮವಾಗಿ ಪರಬಾರೆ ಮಾಡುವುದು ತಪ್ಪು. ತಪ್ಪಿಗೆ ತಕ್ಕ ಶಿಕ್ಷೆಯಾಗಬೇಕು. ನಾವು ಬಸವಾದಿ ಶರಣರ ಮೊಮ್ಮಕ್ಕಳು‌. ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ ಈ ನೆಲದಲ್ಲಿ ಅಕ್ರಮ ಎಸಗುವುದು ಮಹಾಪರಾಧ ಎಂದು ನುಡಿದರು.

ಕೆಆರ್‌ಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, ಸನ್ಮಾನ ಮಾಡುವುದು ನಮ್ಮ ಹಕ್ಕು. ಅದನ್ನು ಮಾಡಲು ಹೊರಟಿದ್ದೇವೆ. ಕಳ್ಳರು, ರೌಡಿ ಶೀಟರ್‌ಗಳು ಪೊಲೀಸರಿಗೆ ಸನ್ಮಾನ ಮಾಡುವುದು ಸರಿಯಾದರೆ ಈ ಜಿಲ್ಲೆಯ ಪ್ರಜ್ಞಾವಂತ ನಾಗರಿಕರಾದ ನಾವು ಸನ್ಮಾನ ಮಾಡುವುದರಲ್ಲಿ ತಪ್ಪೇನಿದೆ ಎಂದು ಡಿವೈಎಸ್ಪಿ ಚಂದ್ರಶೇಖರ್ ಅವರನ್ನು ಉದ್ದೇಶಿಸಿ ಕೇಳಿದರು.

ಭ್ರಷ್ಟಾಚಾರಕ್ಕೆ ಕಾರಣವಾಗಿರುವ ಜಿಲ್ಲಾಧಿಕಾರಿಗಳ ರಕ್ಷಣೆಗಾಗಿ ಪೊಲೀಸರು ತಮ್ಮ ಸಮಯ‌ ಮತ್ತು ಸಂಪನ್ಮೂಲವನ್ನು ವ್ಯರ್ಥ ಮಾಡುತ್ತಿದ್ದಾರೆ. ಮೆರವಣಿಗೆಗೆಂದು ತಂದಿರುವ ಬ್ಯಾನರ್ ಹಾಗೂ ಶಾಲು, ಪೇಟ ಹಾರಗಳನ್ನು ಕಸಿದುಕೊಂಡಿರುವುದೂ ಅಲ್ಲದೆ, ವಾಕ್ ಸ್ವಾತಂತ್ರವನ್ನು ದಮನ ಮಾಡುವ ನಿಟ್ಟಿನಲ್ಲಿ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ಜಾಣಗೆರೆ ಆರೋಪಿಸಿದರು.

ಡಿಸಿಯವರಿಗೆ ಒತ್ತಡ ಹಾಕಿ ಈ ಅಕ್ರಮವನ್ನು ಮಾಡಿಸಿರಬಹುದು ಅಥವಾ ಆಮಿಷಕ್ಕೆ ಒಳಗಾಗಿಯೂ ಈ ಭ್ರಷ್ಟ ಕೆಲಸಕ್ಕೆ ಕೈ ಹಾಕಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ‌ ಮಾತನಾಡಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸತ್ಯ ಮೇವ ಜಯತೆಯ ಅರ್ಥವನ್ನು ಮರು ವ್ಯಾಖ್ಯಾನಿಸಿದ್ದಾರೆ. ಸತ್ಯವನ್ನು ನಿತ್ಯ ಮೇಯುವುದೇ ಸತ್ಯ ಮೇವ ಜಯತೆ ಎಂಬುದು ಡಿಸಿಯವರ ಉದ್ಧರಣ. ಸಾರ್ವಜನಿಕ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಬಂದಿರದ ಈ ಅಧಿಕಾರಿ ಜನ ಸೇವೆ ಮಾಡಲು ಸಾಧ್ಯವಿದೆಯೇ? ಮಧುಗಿರಿಯಲ್ಲಿ 40 ಎಕರೆ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಎಂಎಲ್‌ಎ ಮಗನಿಗೆ ಮಂಜೂರು ಮಾಡಿರುವುದರಲ್ಲಿ ಡಿಸಿಯವರ ನೇರ ಪಾತ್ರವಿರುವ ಶಂಕೆ ಇದೆ. ಇವರ ಇವರ ವಿರುದ್ಧ ಕ್ರಮವಾಗಬೇಕು. ಪ್ರಕರಣ ದಾಖಲಿಸಿ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಪೊಲೀಸರ ದೌರ್ಜನ್ಯ ಖಂಡಿಸಿ ಸ್ಥಳದಲ್ಲಿಯೇ ಕುಳಿತಿದ್ದ ಪಕ್ಷದ ಕಾರ್ಯಕರ್ತರ ಬಳಿಯಿದ್ದ ಹಾರ ಶಾಲುಗಳನ್ನು ಪೊಲೀಸರು ದಬ್ಬಾಳಿಕೆಯಿಂದ ಕಸಿದುಕೊಳ್ಳುತ್ತಿದ್ದಂತೆಯೇ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿಯವರು ಡಿವೈಎಸ್ಪಿ ಕಾಲಿಗೆ ಬೀಳುವ ಮೂಲಕ ವಿಶಿಷ್ಟ ರೀತಿಯ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಎಲ್ಲರನ್ನೂ ವಶಕ್ಕೆ ತೆಗೆದುಕೊಳ್ಳುವಂತೆ ಡಿವೈಎಸ್ಪಿ ಸೂಚಿಸಿದರು. ಪೊಲೀಸರು ಕೆಆರ್‌ಎಸ್ ಕಾರ್ಯಕರ್ತರನ್ನು ಪೊಲೀಸ್ ವಾಹನಕ್ಕೆ ತುಂಬಿದರು.

ಪ್ರತಿಭಟನೆಯಲ್ಲಿ ಕೆಆರ್‌ಎಸ್ ಪಕ್ಷದ ಮಹಿಳಾ ಘಟಕದ ಸದಸ್ಯರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...