ತುಮಕೂರು | ಅಸಮರ್ಪಕ ನಿರ್ವಹಣೆ; ಗೋಶಾಲೆಯಲ್ಲಿ 10ಕ್ಕೂ ಹೆಚ್ಚು ರಾಸುಗಳ ಸಾವು

Date:

ಗೋಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ರಾಸುಗಳಿಗೆ ಸಮರ್ಪಕ ಮೇವು ನೀರು ನೀಡದ ಕಾರಣ 10ಕ್ಕೂ ಹೆಚ್ಚು ರಾಸುಗಳು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿದೆ.

“ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದ ಬಳಿಯ ‘ಗೋಮುಖ’ ಗೋಶಾಲೆಯಲ್ಲಿ ಎರಡು ತಿಂಗಳುಗಳಿಂದ ಮೇವು, ನೀರು ಕೊಡದೆ ಕಬ್ಬಿಣದ ‌ಬೇಲಿಯಲ್ಲಿಯೇ ಎಮ್ಮೆ ಹಾಗೂ ರಾಸುಗಳನ್ನು ಕೂಡಿ ಹಾಕಲಾಗಿದೆ. ಅವುಗಳಿಗೆ ಸಮರ್ಪಕ ಮೇವು, ನೀರು ನೀಡಿಲ್ಲ” ಎಂದು ಸ್ಥಳೀಯರ ಆರೋಪ ಕೇಳಿಬಂದಿದೆ.

“ಗೋಮುಖ ಎಂಬ ಹೆಸರಿನಲ್ಲಿ ಪ್ರಾರಂಭಿಸಿರುವ ಗೋಶಾಲೆಯನ್ನು ಸರ್ಕಾರಿ ಅನುದಾನ ಬಳಸಿಕೊಳ್ಳಲು ಅಥವಾ ಇಲ್ಲಿನ ಸರ್ಕಾರಿ ಗೋಮಾಳ  ಕಬಳಿಸುವ ದುರುದ್ದೇಶದಿಂದ ಮಾಡಲಾಗಿದೆಯೇ ಹೊರತು ನಿಜವಾದ ಗೋರಕ್ಷಣೆಗಾಗಿ ಅಲ್ಲ. ಇಲ್ಲಿ ರಾಸುಗಳಿಗೆ ಸರಿಯಾಗಿ ಆಹಾರ ನೀಡುತ್ತಿಲ್ಲ. ಸರಿಯಾದ  ನಿರ್ವಹಣೆಯೂ ಇಲ್ಲದೆ ಮೂಕ ಪ್ರಾಣಿಗಳು ಮೃತಪಟ್ಟಿವೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದಿಂದ ಲಾಭ ಪಡೆಯುವ ಉದ್ದೇಶದಿಂದ ಗೋಶಾಲೆ ತೆರೆಯಲಾಗಿದ್ದು, ಪಕ್ಕದಲ್ಲಿನ ಗೋಮಾಳ ಕಬಳಿಸುವ ಯತ್ನ ಮಾಡಲಾಗುತ್ತಿದೆ. ಆ ಕಾರಣದಿಂದ ಇಲ್ಲಿನ ರಾಸುಗಳನ್ನು ನಿಗಾವಹಿಸಿ ಸಾಕುತ್ತಿಲ್ಲ” ಎಂದು ಸ್ಥಳೀಯ ನಿವಾಸಿ ಸಿದ್ದಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಲಿಂಗಾಯತ ಸ್ವತಂತ್ರ ಧರ್ಮ ಆಗುವುದರಿಂದ ಹಿಂದುತ್ವಕ್ಕೆ ಧಕ್ಕೆಯಾಗದು: ಸಿದ್ಧರಾಮ‌ ಸ್ವಾಮೀಜಿ

“ಗೋಶಾಲೆಯಲ್ಲಿ ಗೋವುಗಳು ಸತ್ತಿರುವುದರ ಬಗ್ಗೆ ಪಶು ಇಲಾಖೆಗೆ ಮಾಹಿತಿ ನೀಡಲಾಗಿದೆ. ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಹತ್ತಕ್ಕೂ ಹೆಚ್ಚು ರಾಸುಗಳು ಸಾವಿಗೀಡಾಗಿವೆ” ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.

“ಗೋಶಾಲೆಯಲ್ಲಿ ರಾಸುಗಳ ಕಸ ಎತ್ತದ ಕಾರಣ ತೊಂದರೆಯಾಗಿದೆ. ಒಂದು ತಿಂಗಳಿನಿಂದ ಮೇವು ನೀರು ಇರಲಿಲ್ಲ. ಕೆಲವು ದಾನಿಗಳು ಮೇವು ದಾನ ನೀಡಿದ್ದಾರೆ. ಇತ್ತೀಚೆಗೆ 10ಕ್ಕೂ ಹೆಚ್ಚು ರಾಸು ಸಾವಿಗೀಡಾಗಿವೆ” ಎಂದು ಗೋಶಾಲೆ ನಿರ್ವಣಾಕಾರ ದೇಶ್ಯಾ ನಾಯಕ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...