ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

Date:

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ತುಮಕೂರು ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಯಿತು.

ಸಮಿತಿಯ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮತ್ತು ಗೌರವ ಅಧ್ಯಕ್ಷ ಕೆ.ದೊರೈರಾಜ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ‘ಒಳ ಮೀಸಲಾತಿ’ಯ ಮೂಲ ಉದ್ದೇಶವೇ ಮೀಸಲಾತಿಯ ಸವಲತ್ತು ಮತ್ತು ಪ್ರಾತಿನಿಧ್ಯ ಎಲ್ಲರಿಗೂ ಸಮನಾಗಿ ದೊರೆಯಬೇಕು ಎಂಬುದಾಗಿದೆ ಎಂದರು.

ಅತ್ಯಂತ ಹಿಂದುಳಿದ ಸಮುದಾಯಗಳು ಎಂದು ಗುರುತಿಸಿ 59 ಜಾತಿಗಳನ್ನು ಪ್ರವರ್ಗ ʼಎʼರಲ್ಲಿಯೂ, ಹೆಚ್ಚು ಹಿಂದುಳಿದ ಸಮುದಾಯಗಳು ಎಂದು ಗುರುತಿಸಿದ 18 ಜಾತಿಗಳನ್ನು ಪ್ರವರ್ಗʼಬಿʼಯಲಿಯೂ ಹಿಂದುಳಿದ ಸಮುದಾಯಗಳು ಎಂದು ಗುರುತಿಸಿದ 17 ಜಾತಿಗಳನ್ನು ಪ್ರವರ್ಗʼಸಿʼಯಲ್ಲಿಯೂ, ಕಡಿಮೆ ಹಿಂದುಳಿದ ಸಮುದಾಯಗಳು ಎಂದು ಗುರುತಿಸಿದ 4 ಜಾತಿಗಳನ್ನು ಪ್ರವರ್ಗ‘ಡಿʼಯಲ್ಲಿಯೂ ಹಾಗೂ ಮೂಲಜಾತಿಯ ಹೆಸರನ್ನು ತಿಳಿಯಪಡಿಸದಿರುವ ಆದಿಆಂಧ್ರ, ಆದಿದ್ರಾವಿಡ ಮತ್ತು ಆದಿಕರ್ನಾಟಕ ಜಾತಿಗಳನ್ನು ಪ್ರವರ್ಗ‘ಇʼಯಲ್ಲಿ ಸೇರಿಸಿ ಲಭ್ಯವಿರುವ ಶೇ. 17 ಮೀಸಲಾತಿ ಪ್ರಮಾಣವನ್ನು ಮೇಲಿನ 5 ಪ್ರವರ್ಗಗಳಿಗೆ ಶೇ.1, 6, 5, 4, 1 ರ ಅನುಸಾರವಾಗಿ ಹಂಚಿಕೆ ಮಾಡಿ ಶೀಫಾರಸ್ಸು ಮಾಡಲಾಗಿತ್ತು. ಆಯೋಗವು ಈ ರೀತಿಯ ಗುಂಪುಗಳನ್ನು ಮಾಡುವಾಗ ಸಮೀಕ್ಷೆ ನಡೆಸಿ ಕಲೆ ಹಾಕಿದ ಅಂಕಿಅಂಶಗಳನ್ನು ಆಧಾರವಾಗಿಟ್ಟುಕೊಂಡು 101 ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಿಂದುಳಿದಿರುವಿಕೆ ಮತ್ತು ಸರ್ಕಾರಿ ಉದ್ಯೋಗದಲ್ಲಿ ಪ್ರಾತಿನಿಧ್ಯದ ಕೊರತೆ ಆಧರಿಸಿ ಮೇಲಿನಂತೆ ಗುಂಪುಗಳನ್ನು ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಲೆಯ ಸಂಬಂಧಿತ ಸೂಕ್ಷ್ಮ, ಅತಿಸೂಕ್ಷ್ಮ ಹಾಗೂ ಮಾದಿಗ ಸಂಬಂಧಿತ ಸೂಕ್ಷ್ಮ, ಅತಿಸೂಕ್ಷ್ಮ ಸುಮುದಾಯಗಳನ್ನು ಆಯಾ ಸಮುದಾಯಗಳ ಹಿಂದುಳಿದಿರುವಿಕೆಯ ಆಧಾರದಲ್ಲಿ ಬೇರೆ ಬೇರೆ ಗುಂಪುಗಳಲ್ಲಿ ಇಟ್ಟು ಉಪವರ್ಗೀಕರಣ ಮಾಡಲಾಗಿತ್ತು. ಆದರೆ ಸರ್ಕಾರವು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ವರದಿಯ ಶಿಫಾರಸ್ಸುಗಳನ್ನು ಮಾರ್ಪಾಟು ಮಾಡುವಾಗ ಐದು ಗುಂಪುಗಳ ಬದಲಾಗಿ ಮೂರು ಗುಂಪುಗಳನ್ನಾಗಿ ಮಾಡಿ ಸೂಕ್ಷ್ಮ, ಅತಿಸೂಕ್ಷ್ಮ ಮತ್ತು ಅಲೆಮಾರಿ ಸಮುದಾಯಗಳನ್ನು ಪ್ರವರ್ಗ-ಸಿ ನಲ್ಲಿ ಸೇರಿಸಲಾಗಿದೆ ಎಂದಿದ್ದಾರೆ.

ಭೋವಿ, ಲಂಬಾಣಿ, ಕೊರಮ ಮತ್ತು ಕೊರಚ ಸಮುದಾಯಗಳನ್ನು ಸೇರಿಸಿದ್ದು, ಆ ಸಮುದಾಯಗಳು ರಾಜಕೀಯವಾಗಿ, ಆರ್ಥಿಕವಾಗಿ ಮುಂದುವೆರೆದಿವೆ. ಸರ್ಕಾರಿ ಸೇವೆಯಲ್ಲಿಯೂ ಗಣನೀಯ ಪ್ರಮಾಣದ ಪ್ರಾತಿನಿಧ್ಯ ಹೊಂದಿರುತ್ತವೆ. ಈ ಎಲ್ಲ ಕಾರಣಗಳಿಂದ ಪ್ರವರ್ಗ-ಸಿ ಗುಂಪಿಗೆ ಶೇಕಡ 5ರಷ್ಟು ಮೀಸಲಾತಿ ಪ್ರಮಾಣವನ್ನು ನಿಗದಿ ಮಾಡಿದ ಪರಿಣಾಮ ಎಲ್ಲಾ ರೀತಿಯಿಂದಲೂ ಹಿಂದುಳಿದಿರುವ, ಜನಸಂಖ್ಯೆಯಲ್ಲೂ ಕಡಿಮೆಯಿರುವ ಸೂಕ್ಷ್ಮ, ಅತಿಸೂಕ್ಷ್ಮ ಮತ್ತು ಅಲೆಮಾರಿ ಸಮುದಾಯಗಳ ಮೀಸಲಾತಿಯ ಪಾಲನ್ನು ಪಡೆದುಕೊಳ್ಳಲಿದ್ದಾರೆ.

ಇದರಿಂದಾಗಿ ಪ್ರವರ್ಗ-ಸಿ ಗುಂಪಿನ ಸೂಕ್ಷ್ಮ, ಅತಿಸೂಕ್ಷ್ಮ ಮತ್ತು ಅಲೆಮಾರಿ ಸಮುದಾಯಗಳಿಗೆ ಶಾಶ್ವತವಾಗಿ ಅನ್ಯಾಯವಾಗುತ್ತದೆ. ಹಾಗಾಗಿ ಸೂಕ್ಷ್ಮ, ಅತಿಸೂಕ್ಷ್ಮ ಮತ್ತು ಅಲೆಮಾರಿ ಸಮುದಾಯಗಳು ಶಿಕ್ಷಣದಿಂದ ವಂಚಿತರಾಗುವುದರೊಂದಿಗೆ ಉದ್ಯೋಗದಲ್ಲಿಯೂ ಪ್ರಾತಿನಿಧ್ಯ ದೊರೆಯದೆ ಮತ್ತಷ್ಟು ಹಿಂದುಳಿಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ನರಸಿಂಹಯ್ಯ ಹೇಮಾವತಿ, ನಿವೃತ್ತ ಸಬ್‌ಇನ್ಸ್ಪೆಕ್ಟರ್ ರಂಗಸ್ವಾಮಯ್ಯ, ಕೋಡಿಯಾಲ ಮಹದೇವ, ಅಲೆಮಾರಿ ಸಮುದಾಯದ ವೆಂಕಟಾಚಲ.ಹೆಚ್.ವಿ., ರಾಮಾಂಜಿನಯ್ಯ, ವಕೀಲ ರಂಗಧಾಮಯ್ಯ, ಲಕ್ಷ್ಮಿರಂಗಯ್ಯ, ನರಸಿಂಹಯ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...