ತುಮಕೂರು | ಸಂದರ್ಶನದ ಪ್ರಶ್ನೆಗಳು ನೈಜ ಸುದ್ದಿಯನ್ನು ಹೊರ ತರುವಂತಿರಬೇಕು : ಮಾರುತಿ ಪಾವಗಡ

Date:

ಸಂದರ್ಶನದಲ್ಲಿ ಪ್ರಶ್ನೆಗಳ ಮಹತ್ವ ಬಹಳ ಮುಖ್ಯ. ಸಂದರ್ಶನ ಮಾಡುವ ಸಂದರ್ಭದಲ್ಲಿ ಸಾಮಾನ್ಯ ಪ್ರಶ್ನೆಗಳನ್ನು ಕೇಳುವ ಬದಲು ನಮಗೆ ಯಾವ ಸುದ್ದಿ ಅವಶ್ಯಕತೆ ಇದೆ ಅದರ ಅನುಕೂಲವಾಗಿ ಪ್ರಶ್ನೆಗಳನ್ನು ಕೇಳುವುದು ಅಗತ್ಯ ಎಂದು  ಖಾಸಗಿ ಸುದ್ದಿ ವಾಹಿನಿಯ ಪೊಲಿಟಿಕಲ್ ಬ್ಯುರೋ ಮುಖ್ಯಸ್ಥ ಮಾರುತಿ ಪಾವಗಡ ತಿಳಿಸಿದರು. 

ತುಮಕೂರು ನಗರದ ಶ್ರೀ ಸಿದ್ಧಾರ್ಥ  ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ಆಂಕರಿಂಗ್ ಸುದ್ದಿ ನಿರೂಪಣಾ  ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಇವರು,  ಸಂದರ್ಶನ ಮತ್ತು ಪ್ಯಾನೆಲ್ ಚರ್ಚೆ ವಿಷಯದ ಕುರಿತು ಉಪನ್ಯಾಸ ನೀಡಿದರು. 

ಸಂದರ್ಶನಕ್ಕೂ ಮೊದಲು ಸಂದರ್ಶನದ ವಿಷಯದ ಬಗ್ಗೆ ಅಧ್ಯಯನ ನಡೆಸುವುದು ಮತ್ತು ಪೂರ್ವಸಿದ್ಧತೆ  ಅವಶ್ಯಕವಾಗಿರುತ್ತದೆ. ಸಂದರ್ಶನದಲ್ಲಿ ಸಂದರ್ಶನಕ್ಕೆ ಒಳಪಡಿಸುತ್ತಿರುವಂತಹ ವ್ಯಕ್ತಿಯ ಹಿನ್ನೆಲೆ, ಸಾಧನೆ ಬಹಳ ಮುಖ್ಯವಾಗಿರುತ್ತದೆ ಹಾಗೂ ಸಂದರ್ಶನ ನಡೆಸುವ ನಿರೂಪಕನಿಗೆ ವಿಷಯದ ಕುರಿತು ಸಂಪೂರ್ಣ ಮಾಹಿತಿ ಜ್ಞಾನ ಅತ್ಯಗತ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002066910

 ಇನ್ನು ಪ್ಯಾನಲ್ ಚರ್ಚೆ ಎಂಬುದು ಪರ ವಿರೋಧಗಳನ್ನ ಒಳಗೊಂಡಿರುವಂಥದ್ದು, ಪ್ಯಾನೆಲ್ ಚರ್ಚೆಯನ್ನು  ನಿರ್ವಹಿಸುವಂತಹ ನಿರೂಪಕನಿಗೆ  ತಾಳ್ಮೆ ಮುಖ್ಯ. ಒತ್ತಡವನ್ನು ನಿರ್ವಹಿಸುವಂತಹ ಶಕ್ತಿ ಅವನಲ್ಲಿರಬೇಕು ಎಂದು ತಿಳಿಸಿದರು. 

 ಪತ್ರಿಕೋದ್ಯಮ ಕ್ಷೇತ್ರದಲ್ಲಿ ನೂರಾರು ಅವಕಾಶಗಳಿವೆ. ಅವಕಾಶಗಳಿಗೆ ಒಗ್ಗಿಕೊಳ್ಳುವಂತಹ ಮನಸ್ಥಿತಿ ನಿಮ್ಮಲ್ಲಿರಬೇಕು. ಯಾವುದೇ ಕೆಲಸವನ್ನು ಮಾಡುವೆ ಎಂಬ ದೃಢ ನಂಬಿಕೆ ಇರಬೇಕು. ಆಗ ಮಾತ್ರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಉತ್ತಮ ಪತ್ರಕರ್ತರಾಗಲು ಸಾಧ್ಯ.  ಪತ್ರಿಕೋದ್ಯಮದಲ್ಲಿರುವಂತಹವರು ಯಾವುದೇ ಸುದ್ದಿ ಬಂದರೆ ಅದನ್ನ ಪರಿಶೀಲಿಸುವುದರಿಂದ ತಪ್ಪಾದ ಸುದ್ದಿ ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಈ ರೀತಿಯಾದಂತಹ ಜವಾಬ್ದಾರಿಯುತ ಕೆಲಸವನ್ನು ಪತ್ರಿಕೋದ್ಯಮದ ವಿದ್ಯಾರ್ಥಿಗಳು ನಿಮ್ಮ ವೃತ್ತಿ ಜೀವನದಲ್ಲಿ ಪಾಲಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.  

  ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಆಡಿದಂತಹ ಶ್ರೀ ಸಿದ್ಧಾರ್ಥ ಮಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾಕ್ಟರ್ ಬಿ ಟಿ ಮುದ್ದೇಶ್ ಮಾತನಾಡಿ ಮಾಧ್ಯಮ ಕ್ಷೇತ್ರದಲ್ಲಿ ಅಗಾಧ ಬದಲಾವಣೆ ಆಗಿದೆ. ಆ ಬದಲಾವಣೆಗೆ ತಕ್ಕಂತೆ ಹೊಸ ಹೊಸ ಕಲಿಕೆ ಮತ್ತು ಕೌಶಲ್ಯಗಳನ್ನು ಶ್ರದ್ದೆ, ಬದ್ಧತೆಯಿಂದ ಕಲಿಕಾ ಹಂತದಲ್ಲೇ ಕಲಿತರೆ ಬದಲಾವಣೆಗೆ ಒಗ್ಗಿಕೊಳ್ಳಲು ಸಾಧ್ಯ ಎಂದು ಹೇಳಿದರು

  ಕಾರ್ಯಗಾರದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಂತಹ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...