ತುಮಕೂರು | ದಲಿತ ಚಳವಳಿಗೆ 50 ವರ್ಷದ ಸಂಭ್ರಮಕ್ಕೆ ಆಹ್ವಾನ

Date:

ಬಲಾಢ್ಯರಿಂದ ಶೋಷಣೆ, ತುಳಿತಕ್ಕೆ ಒಳಗಾದ ತಳಸಮುದಾಯಗಳನ್ನು ಒಗ್ಗೂಡಿಸಿ ಶೋಷಣೆ ವಿರುದ್ಧ ಸಾಮಾಜಿಕ ಹೋರಾಟಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರು ಕಟ್ಟಿದ ದಲಿತ ಚಳವಳಿಗೆ 50 ವರ್ಷ ತುಂಬಿದ ಹಿನ್ನಲೆ ಸಂಭ್ರಮೋತ್ಸವ ಆಚರಿಸುತ್ತಿದ್ದು, ತುಮಕೂರು ಜಿಲ್ಲೆಯ ಎಲ್ಲ ದಲಿತ ಮುಖಂಡರು, ಸಂಘಟನೆಯ ಸದಸ್ಯರು ಆಗಮಿಸುವಂತೆ ದಸಂಸ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಜಿ ಎನ್ ಲಾವಣ್ಯ ಮನವಿ ಮಾಡಿದರು.

ಜಿಲ್ಲೆಯ ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, “ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ 1974ರಲ್ಲಿ ಪ್ರೊ. ಬಿ ಕೃಷ್ಣಪ್ಪ ಅವರು ಸಂಘಟನೆ ಕಟ್ಟಿ ಅಂಬೇಡ್ಕರ್ ಅವರ ಸಂಘಟನೆ ಹೋರಾಟ ಅದರ್ಶವಾಗಿಟ್ಟುಕೊಂಡು ಚಳವಳಿ ಆರಂಭಿಸಿದ್ದರು. ಇದರ ಪರಿಣಾಮ ಮೂಕ ಸಮುದಾಯಗಳು ಮಾತನಾಡಿದ್ದವು. ಇದೇ ಮಾದರಿಯಲ್ಲಿ ಪ್ರಜ್ಞೆ, ಅರಿವು, ಹೋರಾಟವನ್ನು ನಿರಂತರ ಕಲಿಸಿ ಸಾಮಾಜಿಕ ನ್ಯಾಯ ಕಾಪಾಡಿದೆ” ಎಂದರು.

“ಚಳವಳಿಯ ಕ್ರಾಂತಿಯ 50 ವರ್ಷದ ಸಂಭ್ರಮವನ್ನು ಆಗಸ್ಟ್ ತಿಂಗಳ 7ರಂದು ಬೆಂಗಳೂರು ಚಲೋ ಮೂಲಕ ರಾಜ್ಯದ ನಾನಾ ಭಾಗದಿಂದ ಆಗಮಿಸುವ ದಲಿತ ಸದಸ್ಯರಿಗೆ ಆಹ್ವಾನ ನೀಡಿ ವಸಂತನಗರ ಬಡಾವಣೆಯ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸದಸ್ಯರು ಭಾಗವಹಿಸಬೇಕು. ಈ ಜತೆಗೆ ಮಹಿಳಾ ಘಟಕದ ಸದಸ್ಯರಿಗೆ ವಿಶೇಷ ಆಹ್ವಾನ ನೀಡಿದ್ದು, ಗುಬ್ಬಿ ತಾಲೂಕಿಗೆ ಎರಡು ಬಸ್ ವ್ಯವಸ್ಥೆ ಮಾಡಲಾಗಿದೆ.‌ ಸರ್ಕಾರಕ್ಕೆ ಹಲವು ಹಕ್ಕೊತ್ತಾಯ ಈಡೇರಿಕೆಗೆ ಆಗ್ರಹಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ: ಎಸ್ಎಫ್ಐ ಆಗ್ರಹ

“ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ ಗುರುಮೂರ್ತಿ ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಮುಂಡರಗಿ ನಾಗರಾಜ್ ಇನ್ನಿತರ ಮುಖಂಡರು ಸಾಕ್ಷಿಯಾಗಲಿದ್ದಾರೆ. ಪ್ರೊ ಬಿ ಕೃಷ್ಣಪ್ಪ ಅವರ ಜನ್ಮದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆದೇಶಿಸಿ ಎಲ್ಲಡೆ ಆಚರಿಸಬೇಕು. ಎಸ್‌ಸಿ/ಎಸ್‌ಟಿ ಮೀಸಲು 39 ಸಾವಿರ ಕೋಟಿ ಹಣವನ್ನು ಎಲ್ಲ ಅಭಿವೃದ್ದಿ ನಿಗಮಕ್ಕೆ ಹಂಚಿ ಕೆಳವರ್ಗವನ್ನು ಮೇಲೆತ್ತುವ ಕೆಲಸ ಮಾಡಬೇಕು. ಮಕ್ಕಳಿಗೆ ವ್ಯಾಸಂಗ ಪ್ರೋತ್ಸಾಹ ಧನ ನೀಡುವಲ್ಲಿ ವಿಧಿಸಿದ್ದ ಆದಾಯ ಮಿತಿ ರದ್ದುಮಾಡಿ ಬಗರ್ ಹುಕುಂ ಸಮಿತಿ ಮೂಲಕ ಹಕ್ಕುಪತ್ರ ವಿತರಣೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಒತ್ತಾಯ ಸೇರಿದಂತೆ ಹಲವು ಬೇಡಿಕೆಯನ್ನು ಸರ್ಕಾರದ ಮುಂದಿಡಲಾಗುವುದು” ಎಂದರು.

ಈ ಸಂದರ್ಭದಲ್ಲಿ ದಸಂಸ ಮಹಿಳಾ ಘಟಕದ ಮಂಗಳಮ್ಮ, ಮೀನಾಕ್ಷಮ್ಮ, ಸಾವಿತ್ರಿ, ವಿಜಯಮ್ಮ, ಸೀಮಾ, ರಾಧಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...