ತುಮಕೂರು | ಬಡವರ ಸಮಸ್ಯೆ ಆಲಿಸದ ಬೇಜವಾಬ್ದಾರಿ ಅಧಿಕಾರಿಗಳು; ಹೋರಾಟಗಾರ ನಾಗಭೂಷಣ್ ಹಂದ್ರಾಳ್ ಆಕ್ರೋಶ

Date:

ಭೂಮಿ ಮತ್ತು ವಸತಿ ಹಕ್ಕು ವಂಚಿತರ ವಿಚಾರಗಳನ್ನು ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯಿಸುತ್ತಿದ್ದಾರೆ. ವಂಚಿತರನ್ನು ಪದೇ ಪದೇ ಅಲೆಸುತ್ತಾರೆ ಎಂದು ಜಿಲ್ಲಾ ಸಂಚಾಲಕ ನಾಗಭೂಷಣ್ ಹಂದ್ರಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಸತಿ ವಂಚಿತರಿಗೆ ಭೂಮಿ ಮತ್ತು ವಸತಿ ನೀಡಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಹಂದ್ರಾಳ್, “ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದ ಹೋರಾಟಕ್ಕೆ ಮಣಿದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಲು ಹೈಲೆವೆಲ್ ಸಮಿತಿ ರಚಿಸಿತ್ತು. ಹಿರಿಯ ಐಎಎಸ್ ಅಧಿಕಾರಿಗಳು, ಕಾರ್ಯದರ್ಶಿಗಳು, ಹೋರಾಟಗಾರರು ಆ ಸಮಿತಿಯಲ್ಲಿದ್ದರು. ಅಗ ಬಡವರಿಗೆ ಒಂದಷ್ಟು ಅನುಕೂಲಗಳು ಆಗಿದ್ದವು. ಈಗ ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಹಿಂದೆ ರಚಿಸಿದ್ದಮತ್ತೆ ಹೈಲೆವೆಲ್ ಕಮಿಟಿಗೆ ಮತ್ತೆ ಬಲ ತುಂಬಬೇಕು” ಎಂದು ಆಗ್ರಹಿಸಿದರು.

“ತುಮಕೂರು ಜಿಲ್ಲೆಯಲ್ಲಿ ಭೂಮಿ ಮತ್ತು ವಸತಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಹಲವು ಧರಣಿಗಳನ್ನು ಮಾಡಲಾಗಿತ್ತು. ಆಗ ಇದ್ದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಕೆಲವು ಸಮಸ್ಯೆಗಳನ್ನು ಬಗೆಹರಿಸಿದ್ದರು. ಈಗ ಇರುವ ಅಧಿಕಾರಿಗಳು ಬಡವರನ್ನು ನಿರ್ಲಕ್ಷಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಹೋರಾಟಗಾರರಾದ ಸಿ ಯತಿರಾಜ್ ಮಾತನಾಡಿ, “ಬಂಡವಾಳಶಾಹಿಗಳಿಗೆ ಭೂಬ್ಯಾಂಕ್ ಮಾಡುವ ಸರ್ಕಾರ. ಬಡವರನ್ನು ಬೀದಿಯಲ್ಲಿ ಕೂರಿಸುತ್ತದೆ. ಕಾಳಜಿಯೇ ಇಲ್ಲದ ಸರ್ಕಾರಗಳು ಬಡವರನ್ನು ಶೋಷಣೆ ಮಾಡುತ್ತಿವೆ. ಈ ಸಮಸ್ಯೆಗಳಿಗೆ ಒಂದು ಐಕ್ಯ, ವಿಶಾಲ ತಳಹದಿಯ ಹೋರಾಟದ ಅವಶ್ಯಕತೆ ಇದೆ” ಎಂದರು.

ಪ್ರತಿಭಟನೆಯಲ್ಲಿ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಮಿತಿಯ ಕುಮಾರ ಸಮತಳ, ಡಿಎಸ್‌ಎಸ್‌ ವೆಂಕಟೇಶ್, ಮರಿಯಪ್ಪ, ಮಲ್ಲಿಕಾರ್ಜುನಯ್ಯ, ಮಾಚೇನಹಳ್ಳಿ ಮುನಿರಾಜ್, ನಟರಾಜ್ ,ಮಂಜುನಾಥ, ರಫೀಕ್ ಪಾಷಾ, ಜಬೀನಾ ತಾಜ್, ಪವಿತ್ರ, ಬೀದಿ ಬದಿ ವ್ಯಾಪಾರಿಗಳ ಸಂಘದ ಭದ್ರೇಗೌಡ, ಮಂಜುನಾಥ ಹೈಕೋರ್ಟ್ ವಕೀಲ ಉಮಾಪತಿ ಸಿ, ಸುಧಾ ಕಟ್ವ, ವಕೀಲ ಮಾರನಹಳ್ಳಿ ಗಣೇಶ್, ಶಿವಕುಮಾರ್ ಮೇಸ್ಟ್ರುಮನೆ, ಪದ್ಮನಾಭ, ರಂಗಧಾಮ್ಯ, ಶೇಖರ್,ಚಿನ್ಮಯ್, ಮೋಹನ್, ಶಿವಕುಮಾರ್, ಅನಿಲ್ ಕುಮಾರ್ ಚಿಕ್ಕದಾಳವಟ್ಟ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...