ತುಮಕೂರು | ಯುವಜನರನ್ನು ಅಂಬೇಡ್ಕರ್ ಬಯಸಿದ ಸಂವಿಧಾನದ ಕಡೆಗೆ ನಡೆಸುವುದು ನಮ್ಮ ಜವಾಬ್ದಾರಿ: ಹಿರಿಯ ಪತ್ರಕರ್ತ ಶಿವಸುಂದರ್

Date:

ಅಂಬೇಡ್ಕರ್ ಬರೆದ ಸಂವಿಧಾನದಿಂದ ಯುವಜನರನ್ನು ಅಂಬೇಡ್ಕರ್ ಬಯಸಿದ ಸಂವಿಧಾನದ ಕಡೆಗೆ ನಡೆಸುವುದು ನಮ್ಮ ಜವಾಬ್ದಾರಿ ಎಂದು ಹಿರಿಯ ಪತ್ರಕರ್ತ ಶಿವಸುಂದರ್ ಹೇಳಿದರು.

ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ಜನಸ್ಪಂದನ ಟ್ರಸ್ಟ್ ಹಾಗೂ ತುಮಕೂರು ವಿವಿ ಸಹಯೋಗದಲ್ಲಿ ಆಯೋಜಿಸಿದ್ದ ‘ಸಂವಿಧಾನ ಅರಿವು’ ಕಾರ್ಯಾಗಾರದಲ್ಲಿ ಮಾತನಾಡಿದರು.

“ನನ್ನ ಸಾಮಾಜಿಕ-ಆರ್ಥಿಕ ಹಕ್ಕುಗಳು ಎಲ್ಲಿವೆ?(Where are my socio-economic rights?) ಎನ್ನುವುದು ಅಂಬೇಡ್ಕರ್ ಕೇಳಿದ ಮಹತ್ವದ ಪ್ರಶ್ನೆ. ಈ ಪ್ರಶ್ನೆ ಇಂದಿಗೂ ಜೀವಂತವಿದೆ. ಪ್ರಶ್ನಿಸುವುದು ಬಹಳ ಮುಖ್ಯ. ಯಾರನ್ನೂ ಒಮ್ಮೆಗೇ ನಂಬಬಾರದು. ಇದೇ ಪ್ರಜಾಪ್ರಭುತ್ವದ ಅರ್ಥ ಮತ್ತು ಪ್ರಜಾಪ್ರಭುತ್ವ ನಮಗೆ ಕೊಟ್ಟಿರುವ ಅಧಿಕಾರ. ನಮ್ಮ ಪ್ರಧಾನ ನಾಗರಿಕತೆಯಲ್ಲಿ ಸಮಾನತೆ ಎಂಬುದು ಇರಲಿಲ್ಲ. ಇದಕ್ಕೆ ವಿರುದ್ಧವಾಗಿ ಬುದ್ಧ, ಬಸವ ಮೊದಲಾದವರು ಸಮಾನತೆಯನ್ನು ಬೋಧಿಸಿದರು. ಸಂವಿಧಾನ ಮೊದಲ ಬಾರಿಗೆ ʼನಾವೆಲ್ಲರೂ ಸಮಾನರುʼ ಎಂದು ಅಧಿಕೃತವಾಗಿ ಘೋಷಿಸಿತು. ಹುಟ್ಟು ನಮ್ಮ ಭವಿಷ್ಯವನ್ನು ನಿರ್ಧರಿಸಬಾರದು ಎಂಬುದು ನಮ್ಮ ಸಂವಿಧಾನದ ಆಶಯವೂ ಹೌದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಸಮಾನತೆಯನ್ನೇ ಉಸಿರಾಡುತ್ತಿದ್ದ ನಮ್ಮ ದೇಶದಲ್ಲಿ ನಾಗರಿಕರಾಗಿ ನಾವೆಲ್ಲರೂ ಸಮಾನರು ಎನ್ನುವ ಪರಿಕಲ್ಪನೆ ಬಹಳ ಕ್ರಾಂತಿಕಾರಕವಾದದ್ದು. ಅಂಬೇಡ್ಕರ್ ಅವರು ತಮ್ಮ ಕೊನೆ ಭಾಷಣದಲ್ಲಿ ಹೇಳುವ ಕೆಲವು ಮಾತುಗಳು ನಮ್ಮ ಸಂವಿಧಾನದ ಪ್ರಸ್ತಾವನೆಯಷ್ಟೇ ಮುಖ್ಯವಾದವು. ಇದು ಸಂವಿಧಾನ ಬರೆದ ನಂತರ ಅಂಬೇಡ್ಕರ್ ದೇಶದ ಜನತೆಗೆ ನೀಡಿದ ಗಂಭೀರ ಎಚ್ಚರಿಕೆ ಇದು” ಎಂದರು.

“ನಾವು ಅನುಸರಿಸಿಕೊಂಡು ಹೋಗುವ ಸಂಸ್ಥೆಗಳ ಕಾರಣದಿಂದಾಗಿ ಅಸಮಾನತೆ ಹಾಗೆಯೇ ಮುಂದುವರೆಯುತ್ತಿದೆಯೆಂದು ಅಂಬೇಡ್ಕರ್ ಹೇಳುತ್ತಾರೆ. ಬ್ರಾಹ್ಮಣಶಾಹಿ ವ್ಯವಸ್ಥೆ ಮತ್ತು ಬಂಡವಾಳಶಾಹಿ ವ್ಯವಸ್ಥೆಗಳೆರಡೂ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಪೋಷಿಸುತ್ತಲೇ ಇರುತ್ತವೆ. ಇವುಗಳಲ್ಲಿ ಸಮಾನತೆ ಬರಹ ಹೊರತು ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗುವುದಿಲ್ಲ” ಎಂದು ಹೇಳಿದರು.

“ಹಿಂದೂ ಧರ್ಮದ ಒಳಗೆ ನಾಗರಿಕ ಸುಧಾರಣೆ ಸಾಧ್ಯವಿಲ್ಲ. ಏಕೆಂದರೆ, ಹಿಂದೂ ಧರ್ಮ ನಿಂತಿರುವುದೇ ಜಾತಿಗಳ ಮೇಲೆ ಮತ್ತು ಜಾತಿ ವ್ಯವಸ್ಥೆ ನಿಂತಿರುವುದೇ ಕ್ರೂರವಾದ, ಅಮಾನವೀಯವಾದ ಅಸಮಾನತೆ ಮತ್ತು ಅಸ್ಪೃಶ್ಯತೆಯ ಮೇಲೆ. ಹಾಗಾಗಿಯೇ ಅಂಬೇಡ್ಕರ್ ಇದರಿಂದ ಹೊರ ಹೋಗುವುದಾಗಿ ಘೋಷಿಸಿದರು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಅಂಬೇಡ್ಕರ್ ಅರ್ಥವಾಗದೆ ಭಾರತ ಅರ್ಥವಾಗುವುದಿಲ್ಲ: ಪ್ರಾಧ್ಯಾಪಕ ಡಾ. ಶ್ರೀನಿವಾಸ್

“ನಮ್ಮ ದೇಶದಲ್ಲಿ ಅಂಬೇಡ್ಕರ್ ಸಂವಿಧಾನವಿದ್ದರೆ, ಇಂದಿಗೂ ನಮ್ಮ‌ಮನೆಗಳಲ್ಲಿ ಮನುವಿನ ಸಂವಿಧಾನವಿದೆ. ನಮ್ಮ ಪೊಲಿಟಿಕಲ್ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವೂ ಜಾರಿಗೆ ಬರಬೇಕು. ಕೇಲವ ರಾಜಕೀಯ ಪ್ರಭುತ್ವದಿಂದ ಸ್ತ್ರೀಪುರುಷ ಅಸಮಾನತೆ, ಜಾತಿ ಅಸಮಾನತೆ ನಿವಾರಣೆಯಾಗುವುದಿಲ್ಲ. ಅಸಮಾನತೆ ಜೀವಂತವಿರುವಾಗ ಕೇವಲ ರಾಜಕೀಯ ಪ್ರಜಾಪ್ರಭುತ್ವ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ” ಎಂದು ಹೇಳಿದರು.

“ಅಂಬೇಡ್ಕರ್ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವನ್ನು ಜಾರಿಗೆ ತರುವ ಬಹುದೊಡ್ಡ ಕನಸನ್ನು ಕಂಡಿದ್ದರು. ಅದಕ್ಕಾಗಿ ತಮ್ಮದೇ ಆದ ವಿಶಿಷ್ಟ ಆರ್ಥಿಕ ಮತ್ತು ಸಾಮಾಜಿಕ ನೀತಿಗಳನ್ನೂ ಅಂಬೇಡ್ಕರ್ ಸೂಚಿಸಿದ್ದರು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...