ತುಮಕೂರು | ಸಮಾಜಕ್ಕೆ ಉತ್ತಮ ಪ್ರಜೆಗಳ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಸಚಿವ ಕೆ ಎನ್ ರಾಜಣ್ಣ

Date:

ವಿದ್ಯಾದಾನದ ಸಂದರ್ಭದಲ್ಲಿ ಶಿಕ್ಷಕರು ಯಾವುದೇ ಲೋಪ ಎಸಗಬಾರದು. ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಶಕ್ತಿ ನಿಮ್ಮಲ್ಲಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ಎಂಜಿಎಂ ಬಾಲಿಕಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 82 ಶಾಲೆಗಳ ಮುಖ್ಯ ಶಿಕ್ಷಕರಿಗೆ ಸನ್ಮಾನ ಮತ್ತು ₹25,000 ನಗದಿನ ಚೆಕ್ ವಿತರಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ಇದೆ. ವಿದ್ಯಾರ್ಥಿಗಳನ್ನು ತಿದ್ದುವುದು, ಹಿಂದಿನ ತರಗತಿಗಳ ವಿಷಯಗಳ ಬಗ್ಗೆ ಚರ್ಚೆ ಮತ್ತು ಮೆಲುಕು ಹಾಕುವಂತೆ ಮಾಡಿ ಏಕಾಗ್ರತೆಗಳನ್ನು ರೂಢಿಸುವುದರ ಜತೆಯಲ್ಲಿ ಹೆಚ್ಚು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ನೀರೀಕ್ಷಿಸಬಹುದಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲೆ ಬಿಟ್ಟ ಮಕ್ಕಳ ಬಗ್ಗೆ ವಿಶೇಷ ಗಮನಹರಿಸಿ, ಅತಂಹ ಮಕ್ಕಳನ್ನು ಪತ್ತೆಹಚ್ಚಿ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು. ಪ್ರಸ್ತುತ ಕಾಲದಲ್ಲಿ ಬೇಸಾಯ ಲಾಭಾದಾಯಕವಾಗಿಲ್ಲ. ಆದರೆ, ವಿದ್ಯೆ ಲಾಭಾದಾಯಕದತ್ತಾ ಕರೆದುಕೊಂಡು ಹೋಗುವಂತಹ ಶಕ್ತಿಯನ್ನು ಹೊಂದಿದೆ. ಗುರಿಯಿಂದ ಮಾತ್ರ ಸಾಧನೆಗಳನ್ನು ಮಾಡಲು ಸಾಧ್ಯ. ವಿದ್ಯೆಯನ್ನು ಆಧರಿಸಿ ಜೀವನ ನಡೆಸಲು ಸಾಧ್ಯವಿದ್ದು, ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.

“ನಾನು ವಿದ್ಯೆಗೆ ಹೆಚ್ಚು ಮಹತ್ವ ನೀಡುತ್ತೇನೆ. ನನ್ನ ತಂದೆ – ತಾಯಿ ಇಬ್ಬರೂ ಅನಕ್ಷರಸ್ಥರಾಗಿದ್ದರು. ಅವರ ಸಹಾಯ ನನ್ನನ್ನು ವಿದ್ಯಾವಂತನನ್ನಾಗಿ ಮಾಡಿದ್ದು, ಇಂದು ನಾನು ನಿಮ್ಮೆಲ್ಲರ ಮುಂದೆ ಹಾಗೂ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಲು ಸಾಧ್ಯವಾಯಿತು” ಎಂದು ನೆನಪಿಸಿಕೊಂಡರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ ಶೂ ಭಾಗ್ಯ ಘೋಷಣೆ ಮಾಡಿ ಶಿಕ್ಷಣಕ್ಕೆ ಸಹಕಾರ ನೀಡಿದ್ದರು. ನಾನು ಶಾಸಕನಾಗಿದ್ದಾಗ ಕ್ಷೇತ್ರದ 3,250 ಮಂದಿ ವಿದ್ಯಾರ್ಥಿಗಳ ಮನೆಗೆ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಯ ಸಾವಿರಾರು ಮಕ್ಕಳಿಗೆ ನೋಟ್ ಬುಕ್‌ಗಳನ್ನು ವಿತರಿಸಿದ್ದು ಹೆಮ್ಮೆಯ ವಿಷಯ” ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಎನ್ ಮಹಾಲಿಂಗೇಶ್ ಮಾತನಾಡಿ, “ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ, ವೈಚಾರಿಕ ಮನೋಭಾವಗಳನ್ನು ಬೆಳೆಸಬೇಕು. ಮೌಢ್ಯತೆಯ ಬಗ್ಗೆ ಅರಿವು ಮೂಡಿಸುವಂತಾಗಬೇಕು. ಎಲ್ಲ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸರ್ಕಾರ ಗಮನಹರಿಸಬೇಕು. ಪದವಿ ಕಾಲೇಜುಗಳಲ್ಲಿನ ಗ್ರಂಥಾಲಯಗಳಲ್ಲಿ ಕುವೆಂಪು ಮತ್ತು ಪೂರ್ಣಚಂದ್ರ ತೇಜಸ್ವಿಯವರ ಪುಸ್ತಕಗಳು ದೊರೆಯುವಂತಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಸದ ಪ್ರತಾತ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಕಾನ್‌ಸ್ಟೇಬಲ್‌ ಅಮಾನತು

ಡಿಡಿಪಿಐ ಎಂ ಆರ್ ಮಂಜುನಾಥ್, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ  ವೆಂಕಟರಂಗಾರೆಡ್ಡಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಂಜಯ್, ಇಒ ಶಾಂತಲಾ, ವಿಷಯ ಪರಿವೀಕ್ಷ ಮೋಹನ್, ಎಪಿಸಿ ಮಾರುತಿ, ಡಿವೈಪಿಸಿ ನರಸಿಂಹಮೂರ್ತಿ, ಡಯಟ್ ಪ್ರಾಂಶುಪಾಲ ಗಂಗಾಧರ್, ಮಧುಗಿರಿ ಬಿಇಒ ತಿಮ್ಮರಾಜು, ಸಿರಾ ಬಿಇಒ ಕೃಷ್ಣಪ್ಪ, ಕೊರಟಗೆರೆ ಬಿಇಒ ನಟರಾಜು , ಚಿತ್ತಯ್ಯ , ರಂಗಾಧಾಯ್ಯ, ಎಲ್ ಟಿ ದಾಸಣ್ಣ, ತೋಟದಪ್ಪ, ಕೆ ಟಿ ಸಿದ್ದೇಶ್ವರ್, ಕೆಪಿಸಿಸಿ ವಕ್ತಾರ ನಿಖಿತ್ ಮೌರ್ಯ, ಎನ್ ಗಂಗಣ್ಣ, ಎಂ ಎಸ್ ಶಂಕರನಾರಾಯಣ್, ಸಾಧಿಕ್  ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...