ತುಮಕೂರು | ಮಹಾನಗರ ಪಾಲಿಕೆಯಿಂದ ಜನಸ್ಪಂದನ ಸಭೆ: 9 ಅರ್ಜಿ ಸ್ವೀಕಾರ

Date:

ತುಮಕೂರು ಮಹಾನಗರ ಪಾಲಿಕೆಯಿಂದ ನಗರದ 25, 26 ಹಾಗೂ 27ನೇ ವಾರ್ಡ್ ವ್ಯಾಪ್ತಿಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಲು ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಯಲ್ಲಿ ಈ ಮೂರು ವಾರ್ಡ್‌ಗಳ ಸಮಸ್ಯೆಗಳು ಬಯಲಾಗಿವೆ.

ತುಮಕೂರು ನಗರದ 26ನೇ ವಾರ್ಡ್ ವ್ಯಾಪ್ತಿಯ ದೋಬಿಘಾಟ್‌ನಲ್ಲಿರುವ ಚಂದ್ರಶೇಖರ್ ಆಜಾದ್ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪಾಲಿಕೆಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಮೂರು ವಾರ್ಡ್‌ಗಳ ನಾಗರಿಕರು ತಮ್ಮ ತಮ್ಮ ವಾರ್ಡ್‌ಗಳಲ್ಲಿರುವ ಸಮಸ್ಯೆಗಳನ್ನು ಅನಾವರಣಗೊಳಿಸಿದರು.

ಜನಸ್ಪಂದನ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜ್ಯೋತಿಗಣೇಶ್, ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಹಾಗೂ ಪಾಲಿಕೆ ಅಧಿಕಾರಿಗಳು ಮೂರು ವಾರ್ಡ್‌ಗಳ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ, ಶೀಘ್ರ ಪರಿಹಾರ ಒದಗಿಸುವ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರ್ಡ್‌ಗಳಲ್ಲಿರುವ ಬೀದಿನಾಯಿಗಳ ಹಾವಳಿ, ಕುಡಿಯುವ ನೀರಿನ ಸಮಸ್ಯೆ, ಯುಜಿಡಿ, ಚರಂಡಿ ಸಮಸ್ಯೆ, ರಸ್ತೆ ಸಮಸ್ಯೆ, ಬೀದಿದೀಪ ಸಮಸ್ಯೆ ಸೇರಿದಂತೆ ಅಗತ್ಯ ಮೂಲಭೂತ ಸಮಸ್ಯೆಗಳ ಬಗ್ಗೆ ಶಾಸಕರು ಹಾಗೂ ಪಾಲಿಕೆ ಆಯುಕ್ತರ ಗಮನ ಸೆಳೆದ ಸ್ಥಳೀಯರು ತಮ್ಮ ಅಹವಾಲು ಸಲ್ಲಿಸಿದರು.

ಎಸ್ ಎಸ್ ಪುರಂನ ಕೆಂಪಣ್ಣ ಅಂಗಡಿ ಸರ್ಕಲ್, ತುಮಕೂರು ವಿಶ್ವವಿದ್ಯಾಲಯದ ಮುಂಭಾಗ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು, ಸಾರ್ವಜನಿಕರ ಸುಗಮ ಓಡಾಟಕ್ಕೆ ತೊಂದರೆಯಾಗುತ್ತಿದೆ. ಈ ಜಾಗಗಳಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆಯೂ ನಾಗರಿಕರು ಮನವಿ ಮಾಡಿದರು.

ಶಾಸಕ ಜ್ಯೋತಿಗಣೇಶ್ ಮಾತನಾಡಿ, “ಸರ್ಕಾರದಿಂದ ದೊಡ್ಡ ಮಟ್ಟದ ಅನುದಾನ ಬರುವವರೆಗೂ ನಾಗರಿಕರು ಸಹಕರಿಸಬೇಕು. ವಾರ್ಡ್‌ಗಳ ಸಮಸ್ಯೆಗಳಿಗೆ ಪಾಲಿಕೆ ಹಾಗೂ ತಾವು ಕೈಲಾದಷ್ಟು ಮಟ್ಟಿಗೆ ಸ್ಪಂದಿಸುತ್ತೇವೆ” ಎಂದರು.

“ಈಗಾಗಲೇ ಕೋಟ್ಯಂತರ ರೂಪಾಯಿ ವಿನಿಯೋಗಿಸಿ ಪ್ರಗತಿಯಲ್ಲಿರುವ 24×7 ಕುಡಿಯುವ ನೀರಿನ ವ್ಯವಸ್ಥೆ ಇನ್ನೂ ಸಂಪೂರ್ಣಗೊಂಡಿಲ್ಲ. ಹಾಗಾಗಿ ಸಮಸ್ಯೆ ಎದುರಾಗುತ್ತಿದೆ. ಈ ಯೋಜನೆ ಸಂಪೂರ್ಣಗೊಳ್ಳಬೇಕಾದರೆ ಸುಮಾರು 60ಕೋಟಿ ರೂಗಳಿಗೂ ಅಧಿಕ ಹಣದ ಅಗತ್ಯವಿದೆ. ಹಾಗಾಗಿ ಪಾಲಿಕೆ ಮತ್ತು ಸರ್ಕಾರದಿಂದ ಸಾಧ್ಯವಾದಷ್ಟು ಮಟ್ಟಿಗೆ ಈ ಯೋಜನೆ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ” ಎಂದರು.

“ಮನೆಗಳಲ್ಲಿರುವ ನೀರಿನ ಸಂಪ್‌ಗೆ ಸಂಪರ್ಕ ಕಲ್ಪಿಸಿರುವ ಪಿವಿಸಿ ಪೈಪ್‌ಗೆ ಯುಜಿಡಿ ನೀರು ಮಿಶ್ರಣಗೊಳ್ಳುತ್ತಿದೆ. ಹಾಗಾಗಿ ಎಸ್‌ಡಿಪಿ ಪೈಪ್‌ಲೈನ್ ಮಾಡಬೇಕಾಗಿದೆ. ಹಾಗೆಯೇ ಪಾಲಿಕೆಯವರು ಚರಂಡಿಗಳನ್ನು ಸ್ವಚ್ಛಗೊಳಿಸಿ ಗುಣಮಟ್ಟದಿಂದ ದುರಸ್ಥಿಪಡಿಸಬೇಕು. ಎಲ್ಲೆಲ್ಲಿ ಲೀಕೇಜ್ ಆಗುತ್ತಿದೆ ಎಂಬುದನ್ನು ಪತ್ತೆಹಚ್ಚಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ನಗರಕ್ಕೆ ಈಗ ನಿಗದಿಗೊಳಿಸಿರುವ ನೀರಿನ ಪ್ರಮಾಣ ಸಾಕಾಗುತ್ತಿಲ್ಲ. ಹಾಗಾಗಿ ಇನ್ನು ಹೆಚ್ಚುವರಿ ನೀರು ಹಂಚಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಬುಗುಡನಹಳ್ಳಿ, ಹೆಬ್ಬಾಕ ಕೆರೆ ಜತೆಗೆ ತುಮಕೂರು ಅಮಾನಿಕೆರೆ, ಗಂಗಸಂದ್ರ, ಮರಳೂರು ಕೆರೆಯನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬೇಕಾಗಿದೆ” ಎಂದರು.

“ಗಂಗಸಂದ್ರ ಕೆರೆಯಿಂದ ಮರಳೂರು ಕೆರೆಗೆ ನೀರು ಲಿಫ್ಟ್ ಮಾಡಿ ಶುದ್ಧೀಕರಣ ಘಟಕ ಹಾಕಿದರೆ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ” ಎಂದು ಹೇಳಿದರು.

“ಜನಸ್ಪಂದನ ಸಭೆಯಲ್ಲಿ ನಾಗರಿಕರು ಸಲ್ಲಿಸಿರುವ ಅಹವಾಲುಗಳನ್ನು ಶೀಘ್ರ ಪರಿಹರಿಸುವ ಕೆಲಸವಾಗಬೇಕು. ಈ ಕಾರ್ಯ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ನಿರಂತರವಾಗಿ ನಡೆಯುತ್ತಿರಬೇಕು. ಈ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು” ಎಂದು ಸೂಚನೆ ನೀಡಿದರು.

ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜಾ ಮಾತನಾಡಿ, “ವಾರ್ಡ್‌ಗಳಲ್ಲಿ ಚರಂಡಿಗಳ ಸ್ವಚ್ಚತೆ ಕಾಪಾಡಲಾಗುತ್ತಿದೆ. ಜತೆಗೆ ಫಾಗಿಂಗ್ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ನಗರದಲ್ಲಿ 500 ಪಾರ್ಕ್‌ಗಳಿದ್ದು, ಇವುಗಳನ್ನು ನಿರ್ವಹಣೆ ಮಾಡಲು ಪಾಲಿಕೆಯಲ್ಲಿ ಅಗತ್ಯ ಸಿಬ್ಬಂದಿಯಿಲ್ಲ. ಹಾಗಾಗಿ ನಿರ್ವಹಣೆ ಕಷ್ಟವಾಗುತ್ತಿದೆ. ಸ್ಮಾರ್ಟ್‌ಸಿಟಿ ವತಿಯಿಂದ ಕೆಲ ಪಾರ್ಕ್‌ಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಪಾರ್ಕ್‌ಗಳ ನಿರ್ವಹಣೆ ಮಾಡುವುದಾಗಿ ಮುಂದೆ ಬಂದರೆ ಪಾಲಿಕೆಯೂ ಸಹಕಾರ ನೀಡಲಿದೆ” ಎಂದರು.

“ಪ್ರತಿ ವರ್ಷ ಆಸ್ತಿ ತೆರಿಗೆ ಪಾವತಿಸಲು ಏಪ್ರಿಲ್ ತಿಂಗಳಲ್ಲಿ ಶೇ.5ರ ರಿಯಾಯಿತಿ ನೀಡಲಾಗುತ್ತಿತ್ತು. ಈ ಬಾರಿ ಇದನ್ನು ಜುಲೈ 31ರವರೆಗೂ ವಿಸ್ತರಿಸಲಾಗಿದೆ. ಇದನ್ನು ನಗರದ ಜನತೆ ಸದುಪಯೋಗಪಡಿಸಿಕೊಳ್ಳಬೇಕು” ಎಂದರು.

9 ಅರ್ಜಿ ಸ್ವೀಕಾರ : ಪಾಲಿಕೆ ವತಿಯಿಂದ ನಡೆದ ಮೂರು ವಾರ್ಡ್‌ಗಳ ಜನಸ್ಪಂದನ ಸಭೆಯಲ್ಲಿ ನಿರ್ಧಿಷ್ಟ ಸಮಸ್ಯೆಗಳನ್ನೊಳಗೊಂಡ 9 ಅರ್ಜಿಗಳು ಸ್ವೀಕಾರಗೊಂಡಿವೆ.

“ಮೂರು ವಾರ್ಡ್‌ಗಳಲ್ಲಿರುವ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಬೇಕು. ಈ ನಿವೇಶನಗಳಲ್ಲಿ ಹಾವು, ಇನ್ನಿತರೆ ಹುಳ ಉಪ್ಪಟೆಗಳ ಉಪಟಳ ಹೆಚ್ಚಾಗಿದ್ದು, ಅಕ್ಕಪಕ್ಕದ ಮನೆಯವರು ಭಯಭೀತಿಯಿಂದ ಇರುವಂತಾಗಿದೆ. ಕೂಡಲೇ ಖಾಲಿ ನಿವೇಶನಗಳಲ್ಲಿರುವ ಗಿಡಗಂಟೆಗಳನ್ನು ತೆರವುಗೊಳಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು. ಜತೆಗೆ ಈ ವಾರ್ಡ್‌ಗಳ ವ್ಯಾಪ್ತಿಯಲ್ಲಿರುವ ದೊಡ್ಡ ಚರಂಡಿ ಮೇಲೆ ಸ್ಲ್ಯಾಬ್ ಅಳವಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕು: ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್

“ಈ ವಾರ್ಡ್‌ಗಳ ವ್ಯಾಪ್ತಿಯಲ್ಲಿರುವ ದೊಡ್ಡ ಚರಂಡಿ ಮೇಲೆ ಸ್ಲ್ಯಾಬ್ ಅಳವಡಿಸುವಂತೆಯೂ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ಗಮನ ಸೆಳೆದರು.

ಸಭೆಯಲ್ಲಿ ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನ್, ಉಪ ಆಯುಕ್ತ ರುದ್ರಮುನಿ, ಗಿರೀಶ್, ಕಾರ್ಯ ನಿರ್ವಾಹಕ ಎಂಜಿನಿಯರ್‌ಗಳಾದ ವಿನಯ್, ಸಂದೀಪ್, ಆರೋಗ್ಯಾಧಿಕಾರಿ ಡಾ. ವೀರೇಶ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...