ತುಮಕೂರು | ರಾಜಕೀಯ ಪರಿವರ್ತನೆಗೆ ಜಾಗೃತ ಕರ್ನಾಟಕ ಸೇರಿ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

Date:

ರಾಜಕೀಯವನ್ನು ಪರಿವರ್ತನೆಯನ್ನು ಅಸ್ತ್ರವಾಗಿಸಲು, ಹೇಗಾದರೂ ಸರಿ ಚುನಾವಣೆಯನ್ನು ಗೆಲ್ಲಬೇಕೆನ್ನುವ ಹಳೆಯ ರಾಜಕಾರಣಕ್ಕೆ ಕೊನೆ ಹಾಡಿ, ಮುಕ್ತ ರಾಜಕಾರಣ ಕಟ್ಟಲು ಜಾಗೃತ ಕರ್ನಾಟಕ ಸಂಘಟನೆಯನ್ನು ಬೆಂಬಲಿಸಿ ಎಂದು ಜಾಗೃತ ಕರ್ನಾಟಕ ಸಂಘಟನೆಯ ಕಾರ್ಯಕಾರಿ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಕರೆ ನೀಡಿದರು.

ತುಮಕೂರು ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ “ರಾಜಕೀಯ ಸಂಘಟನೆಯಾಗಿ ಜಾಗೃತ ಕರ್ನಾಟಕ ಘೋಷಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗೃತ ಕರ್ನಾಟಕ ರಾಜಕೀಯ ಪಕ್ಷವಲ್ಲ ಆದರೂ ಚುನಾವಣೆಯ ರಾಜಕೀಯವನ್ನು ಬದಲಾಯಿಸುವ ಗುರಿ ಹೊಂದಿದೆ. ರಾಜಕೀಯ ಒಳ್ಳೆಯವರಿಗಲ್ಲ ಎಂಬುದನ್ನು ಸುಳ್ಳಾಗಿಸುವ ಆಕಾಂಕ್ಷೆಯಿಂದ ಮುನ್ನಡೆಯುತ್ತಿದೆ. ಧರ್ಮ ದ್ವೇಷ, ಜಾತಿ ಪ್ರೇಮ ಮತ್ತು ಹಣಬಲ ಮುಕ್ತ ರಾಜಕಾರಣ ಕಟ್ಟಲು ಹಾಗೂ ಹೊಸಪಕ್ಷವಲ್ಲದೆ, ಹಳೆಯ ಪಕ್ಷಗಳಲ್ಲೂ ಬದಲಾವಣೆ ತರುತ್ತಾ, ರಾಜಕಾರಣವನ್ನು ಬದಲಾಯಿಸಲು ಜಾಗೃತ ಕರ್ನಾಟಕವೀಗ ರಾಜಕೀಯ ಸಂಘಟನೆಯಾಗಿ ಘೋಷಿಸಿಕೊಂಡಿದೆ ಎಂದು ತಿಳಿಸಿದರು.

ರಾಜಕಾರಣ ಬದಲಾಗದೆ ದೇಶದಲ್ಲಿ ಏನು ಬದಲಾಗದು ಎಂಬುದು ಜಾಗೃತ ಕರ್ನಾಟಕದ ನಿಲುವಾಗಿದೆ. ಭಾರತ ರಾಜಕೀಯ ಇಂದಿನ ಸ್ಥಿತಿಯ ಬಗ್ಗೆ ಅತೀವ ಆತಂಕದಲ್ಲಿದ್ದೇವೆ ಮತ್ತು ರಾಜಕೀಯವು ಇದೇ ಆದಿಯಲ್ಲಿ ಮುಂದುವರೆದರೆ ಹಸಿವು, ಅಸಮಾನತೆ ಶೋಷಣೆಯಿಂದ ಬಿಡುಗಡೆ ಪಡೆಯಲು ಸಾಧ್ಯವೇ ಇಲ್ಲ. ಸುಳ್ಳು, ಅಸಹನೆ ಹಾಗೂ ದ್ವೇಷದ ಕಥನಗಳಿಂದ ಕಟ್ಟಲಾಗುವ ಮತೀಯ ರಾಜಕೀಯದಿಂದ ಕೊನೆಗೆ ಭಾರತ ಎಂಬ ದೇಶವೇ ಉಳಿಯುವುದಿಲ್ಲ ಎಂಬ ಸತ್ಯವನ್ನು ಮನಗಂಡು , ಭಾರತ ಸ್ವಾತಂತ್ರ‍್ಯ ಸಂಗ್ರಾಮ ಮತ್ತು ಸಂವಿಧಾನ ಪ್ರತಿಪಾದಿಸುವ ಸತ್ಯ,ನ್ಯಾಯ,ಸಮಾನತೆ ಮತ್ತು ಉದಾರತೆ,ಪ್ರಾಮಾಣಿಕತೆ,ವ್ಯಕ್ತಿಗೌರವ ಮತ್ತು ಬಂಧುತ್ವದ ಮೌಲ್ಯಗಳನ್ನು ರಾಜಕೀಯದಲ್ಲಿ ಮತ್ತು ಸಮಾಜದಲ್ಲಿ ಮರುಸ್ಥಾಪಿಸಲು. ಧರ್ಮದ್ವೇಷ, ಹಣಬಲ ಮತ್ತು ಜಾತಿಯತೆಯ ಪ್ರಭಾವಗಳನ್ನು ರಾಜಕೀಯದಿಂದ ತೊಡೆದುಹಾಕಲು ಸರ್ವರ ಹಿತಕಾಯುವ ಪರಿವರ್ತನೆಯ ಅಸ್ತ್ರವಾಗಿ ರಾಜಕೀಯವನ್ನು ಮರು ರೂಪಿಸಲು ಜಾಗೃತ ಕರ್ನಾಟಕ ಸಂಘಟನೆ ಶ್ರಮಿಸಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯ ಗೌರವಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ ಬೆಲೆಯೇರಿಕೆಯಂತಹ ಜನಸಾಮಾನ್ಯರಿಗೆ ತೊಂದರೆಯಾಗುವ ಸಣ್ಣ ವಿಚಾರಗಳಿಗೂ ಬೀದಿಗಳಿದು ಹೋರಾಟ ನಡೆಸುವ ಕಾಲವೊಂದಿತ್ತು. ಆದರೆ ಪ್ರಸ್ತುತ ಹೋರಾಟದ ಮನೋಭಾವವೇ ಇಲ್ಲವಾಗಿ ಪ್ರಶ್ನೀಸುವ ಗುಣವನ್ನೆ ಕಳೆದುಕೊಳ್ಳುತ್ತಿರುವುದು ಆತಂಕ ಸೃಷ್ಠಿಸಿದೆ. ಹಾಗಾಗಿ ಜಾಗೃತ ಕರ್ನಾಟಕ ಸಂಘಟನೆ ಜನರ ನಡುವೆ ಚಿಂತನಶೀಲ ಮನೋಭಾವ ಮೂಡಿಸಿ ಜನಸಾಮಾನ್ಯರಲ್ಲಿ ರಾಜಕೀಯ ಪ್ರಜ್ಞೆ ಬೆಳಸಲಿದೆ ಎಂಬ ವಿಶ್ವಾಸವಿದೆ ಎಂದರು.

ಸ್ಲಂ ಜನಾಂದೋಲನ ಸಂಘಟನೆಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ಜನರ ಬದುಕಿನ ಬಗ್ಗೆ ಮಾತನಾಡುವ ರಾಜಕಾರಣ ದೂರವಾಗಿರುವ ಸಂದರ್ಭದಲ್ಲಿ ಜಾಗೃತ ಕರ್ನಾಟಕ ರಾಜಕೀಯ ಸಂಘಟನೆಯಾಗಿರುವುದು ಆಶಾಭಾವನೆಯನ್ನು ಮೂಡಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಸೂರ್ಯ ತೇಜಸ್ವಿ, ಸಿದ್ದು ಸೂರನಹಳ್ಳಿ, ಶಶಿ ಕುಮಾರ್, ಆದಮ್ ಖಾನ್ ,ಬಾಬು ಮನಸೆ, ಚೇತನ್ , ಪತ್ರಕರ್ತ ಹರೀಶ್ ಕಮ್ಮನಕೋಟೆ, ಹಿರಿಯ ಪತ್ರಕರ್ತ ನಾಗೇಂದ್ರಪ್ಪ, ಹರೀಶ್ ಬಿ.ಟಿ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...