ತುಮಕೂರು | ಪತ್ರಕರ್ತರು ಸುದ್ದಿ ಮಾಡುವಾಗ ಸ್ವಯಂ ವಿಮರ್ಶೆಗೆ ಒಳಪಡುವ ಅಗತ್ಯವಿದೆ : ಎಸ್.ಪಿ.ಚಿದಾನಂದ್

Date:

ತುಮಕೂರು ನಗರದ ಕನ್ನಡ ಭವನದಲ್ಲಿ ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘದ ನಿರ್ದೇಶಕರುಗಳ ಪದಗ್ರಹಣ ಸಮಾರಂಭ ನಡೆಯಿತು.

ಉದ್ಯಮಿ ಎಸ್.ಪಿ.ಚಿದಾನಂದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಪತ್ರಿಕಾ ರಂಗ ಪ್ರಜಾಪ್ರಭುತ್ವದ ನಾಲ್ಕನೇ ಆಂಗವಾಗಿದೆ.ಆದರೆ ಪತ್ರಕರ್ತರು ಸುದ್ದಿಗಳನ್ನು ಮಾಡುವಾಗ ಸ್ವಯಂ ವಿಮರ್ಶೆಗೆ ಒಳಪಡುವ ಅಗತ್ಯವಿದೆ.ಕಣ್ಣಿಗೆ ಕಂಡಿದೆಲ್ಲವೂ ಸತ್ಯವಲ್ಲ. ಪ್ರಾಮಾಣಿಸಿ ನೋಡುವ ಗುಣಗಳನ್ನು ಪತ್ರಕರ್ತರು ಬೆಳೆಸಿಕೊಳ್ಳ ಬೇಕು.ಆಗ ಮಾತ್ರ ಓದುಗರಿಗೆ,ನೋಡುಗರಿಗೆ ಸತ್ಯವನ್ನು ತಿಳಿಸಿದಂತಾಗುತ್ತದೆ. ಇಲ್ಲದಿದ್ದಲ್ಲಿ ಇದರಿಂದಾಗುವ ದುಷ್ಪರಿಣಾಮಗಳು ಊಹೆಗೆ ನಿಲುಕದ್ದು ಎಂಬ ಎಚ್ಚರಿಕೆಯನ್ನು ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಮಾತನಾಡಿ, ಸಮಾಜದ ಅಂಕು ಡೊಂಕು ತಿದ್ದುವ ಮಾಧ್ಯಮಗಳು ಓದುಗರಿಗೆ, ನೋಡುಗರಿಗೆ ನಿಷ್ಠೆಯಿಂದ ಇರಬೇಕಾಗುತ್ತದೆ.ಇಲ್ಲದ ಗಾಳಿ ಸುದ್ದಿಗಳಿಗೆ ಬಣ್ಣ ಹಚ್ಚುವುದರಿಂದ ಸಮಾಜದ ಮೇಲಾಗುವ ಅಡ್ಡ ಪರಿಣಾಮಗಳ ಅರಿವು ವರದಿಗಾರ ಮತ್ತು ಸಂಪಾದಕ ಇಬ್ಬರಿಗೂ ಇರಬೇಕಾಗುತ್ತದೆ. ಪತ್ರಿಕೆಗಳಲ್ಲಿ ಬಂದ ಸುದ್ದಿ, ಲೇಖನಗಳಿಂದ ಸಮಾಜದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರನ ದೊರೆತಿದೆ.ಹಾಗಾಗಿ ಮಾಧ್ಯಮಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿದರೆ,ಸರಕಾರಗಳು ಜನಪರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಖಂಡನೀಯ. ಈ ದೇಶದ ಪ್ರಜೆಗಳು ಮತ್ತು ಸಾರ್ವಭೌಮ ಮತ್ತು ಸೌಹಾರ್ದತೆ ಹಾಗೂ ಜಾತ್ಯತೀತವಾಗಿ ಇರಬೇಕು ಮನ್ನೆ ನಡೆದ ಕೃತ್ಯಕ್ಕೆ ನಾನು ಸಹ ಖಂಡಿಸುತ್ತೇನೆ ನಾವು ಭಾರತದಲ್ಲಿದ್ದೇವೆ ನಾವು ಭಾರತೀಯರು ಹಾಗಾಗಿ ಭಾರತೀಯರ ಮೇಲೆ ಈ ರೀತಿ ಕೃತ್ಯಗಳು ಪಾಕಿಸ್ತಾನದವರು ಪದೇ ಪದೇ ಮಾಡುತ್ತಿರುವುದು ಖಂಡನೀಯ ಎಂದರು.

ಯಾವ ಧರ್ಮವೂ ಹಿಂಸೆಯನ್ನು ಬೋಧಿಸುವುದಿಲ್ಲ.ಪಹಲ್ಗಾಮ್ ನಲ್ಲಿ ನಡೆದಿರುವ ಕೃತ್ಯವನ್ನು ಬೆಂಬಲಿಸುವ ಮುಸ್ಲಿಂ ವ್ಯಕ್ತಿ, ಪ್ರವಾದಿ ಮಹಮದ್‌ರ ಬೋಧನೆಯಂತೆ ಮುಸ್ಲಿಂನಾಗಿರಲು ಸಾಧ್ಯವೇ ಇಲ್ಲ. ಘಟನೆ ನಡೆದ ದಿನದಿಂದಲೂ ಜನರಲ್ಲಿ ದುಖಃ ಮಡುಗಟ್ಟಿದೆ. ಸತ್ತವರಲ್ಲಿ ಮುಸ್ಲಿಂರೂ ಇದ್ದಾರೆ.ಸಾವನ್ನಪ್ಪಿದ ಎಲ್ಲರೂ ಭಾರತೀಯರು.ನಮ್ಮಲ್ಲಿ ಭೇಧ ಭಾವ ಬೇಡ.ನಾವೆಲ್ಲರೂ ಒಂದಾಗಿ, ದೇಶದ ರಕ್ಷಣೆ, ಐಕ್ಯತೆ ದುಡಿಯೋಣ. ಕೆಲ ಮಾಧ್ಯಮಗಳು ಇಡೀ ಘಟನೆಯನ್ನು ತಪ್ಪಾಗಿ ಬಿಂಬಿಸಿ,ಕೋಮು ಬಣ್ಣ ಕಟ್ಟಲು ಹೊರಟಿದ್ದಾರೆ. ನಾವು ಪ್ರಕಟಿಸುವ ಸುದ್ದಿಯಲ್ಲಿ ಪಾರದರ್ಶಕತೆ ಇರಲಿ. ಸತ್ಯಾಂಶವನ್ನು ಜನತೆಯ ಮುಂದಿಡಿ ಎಂದು ಇಕ್ಬಾಲ್ ಅಹಮದ್ ಮನವಿ ಮಾಡಿದರು.

ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಸಿ.ಡಿ. ಕೃಷ್ಣಮೂರ್ತಿ,ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗ,ವಕೀಲರಾದ ಪಾವಗಡ ಶ್ರೀರಾಮ್,ಪ್ರ‍್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಜಿ.ಕೆ. ಕುಮಾರಸ್ವಾಮಿ, ಖಜಾಂಚಿ ಡಿ. ಚಂದ್ರಶೇಖರ್, ತುಮಕೂರು ಜಿಲ್ಲಾ ಅಧ್ಯಕ್ಷ ಕುಣಿಹಳ್ಳಿ ಆರ್. ಮಂಜುನಾಥ್ ಹಾಗೂ ನಿರ್ದೇಶಕರುಗಳು ಹಾಜರಿದ್ದರು.

ಇದೇ ವೇಳೆ ಇಬ್ಬರು ಪತ್ರಿಕಾ ವಿತರಕರಿಗೆ ಹೊಸ ಸೈಕಲ್‌ಗಳನ್ನು ದಾನಿಗಳ ನೆರವಿನೊಂದಿಗೆ ಉಚಿತವಾಗಿ ಸಂಘದ ವತಿಯಿಂದ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...